ಉಗಾದಿಯ ಉಲ್ಲಾಸ

ನೋಡೋಣ ಬನ್ನಿ, ಬೇವು ಬೆಲ್ಲವ ತನ್ನಿ, ನಮ್ನಿಮ್ಮ ಒಡನಾಟದ ಮಾಯವಿದು
ಕಹಿಯೆಲ್ಲ ಸಿಹಿಯಾಯ್ತು, ಮನಸೆಲ್ಲ ಹಗುರಾಯ್ತು, ನಮ್ಮೆಲ್ಲರ ಊರಿದು
ಉಗಾದಿಯ ಉಲ್ಲಾಸಕೆ ಎನ್ನ ಬುಟ್ಟಿಯ ಫುಲ್ಲ ಕುಸುಮವೂ ನಗೆ ಬೀರುತಿದೆ
ಬನ್ನಿರಿ ನೀವೆಲ್ಲಾ ನೋಡೋಣ ಹೆಮ್ಮೆಯಲಿ ನಮ್ಮೂರ ಸಂತಸದ ಹಬ್ಬವಿದು
ಹಸಿರು ತೋರಣ, ಚಿಗುರು ಮಾವಿನ ಎಲೆ, ಹಸಿರು ಗೊಂಚಲು ಕೈ ಬೀಸಿ ಕರೆಯುತಿದೆ
ರಂಗು ರಂಗಿನ ರಂಗವಲ್ಲಿಯೂ ಸಂಭ್ರಮವ ಬೀರುತಿದೆ ಹೊಸ್ತಿಲೊಳು ಕಾಲಿಡುತಿರೆ
ಕೇಳಬರುತಿದೆಯೇ ಮಕ್ಕಳ ಕಿಲ ಕಿಲ ದನಿಯಲ್ಲಿ ನಿಮ್ಮ ಕಿವಿ ಮೆಚ್ಚಿಸುವ ಆನಂದದ ಹಾಡು
ಮೊಮ್ಮಕ್ಕಳ ಬೆನ್ನೆತ್ತಿ, ನೆತ್ತಿಯ ಮೇಲೆ ತುಪ್ಪವನಿಡಲು ಕಾತುರದಿ ಹಾತೊರೆವ ಅಜ್ಜಿ ಪಾಡು
ಅಭ್ಯಂಜನವ ಮುಗಿಸಿ ಬರುತಿಹಳು ಮನೆಯ ಒಡತಿ ಒದ್ದೆಯ ತಲೆಯನ್ನು ಒರೆಸುತ್ತ ಬಟ್ಟೆಯಲಿ
ಒಳಗೆ ಬಂದವಳ ಕಾತುರದಿ ಕಾಣುತಿಹರು ಒಲವಿನಲಿ ರಾಯರು ಕೈಯಲ್ಲಿ ಮಾತ್ರ ಜನಿವಾರದ ಮೇಲೆ
ವರುಷ ಪೂರ್ತಿ ಕಣ್ತುಂಬಿ ನೋಡಿಹರೂ ತಮ್ಮ ಮಡದಿಯನು ಹೊಸ ವರುಷದಲಿ ಬೇರೆ ಹರುಷವಲ್ಲವೇ
ಇದನು ಗಮನಿಸಿದ ಒಡತಿ ತುಟಿ ಮುಚ್ಚಿ ನಗೆ ಬೀಸುತಿರೆ, ಕೆನ್ನೆ ಮಾತ್ರ ಮಾವಿನ ಹಣ್ಣಿಗಿಂತ ಕೆಂಪಲ್ಲವೇ
ಬಂದಿತೋ ಹೊಸ ಉಗಾದಿ, ತಂದಿಹುದೋ ಜೇನಿಗೂ ಸವಿಯಾದ ಬೆಲ್ಲದುಂಡೆಯ ತಿಂಗಳುಗಳೇ ಸಿಹಿಯಾಯ್ತು
ಇರಲಿ ಮಧ್ಯೆ ಬೇವಿನಾ ಚಿಗುರು, ಮಾಡಲಿ ಮತ್ತೆ ಬರುವ ಸಿಹಿದಿನಗಳ ಇನ್ನಷ್ಟು ಮತ್ತಷ್ಟು ಮೆಲುಕಿದರಾಯ್ತು
ಪಂಚಾಂಗವ ಓದಿ, ಗ್ರಹ ಗತಿಯನು ತಿಳಿದು, ಗುರು, ಶುಕ್ರ, ಶನಿ, ಚಂದಿರನೂ ಮಂಗಲನೂ ಏನೆಲ್ಲ ತಂದರಾಯ್ತು
ನಾವು ಮಾತ್ರ, ನೀವು, ನೀವು, ಅವರು, ಉಳಿದವರೆಲ್ಲ ನಗು ನಗುತ ನಗುವ ಸಾರುತ ಒಲುಮೆ ಬೀರಿದರಾಯ್ತು
ಇದೆ ಉಗಾದಿಯ ಸಾರ, ಇದೆ ಚೆಲುವಿನ ಗೆಲುವು, ಇದಲ್ಲವೇ ನಮ್ಮೆಲ್ಲರ ಸಂತಸದ ಗುಟ್ಟು, ನಮ್ಮೆಲ್ಲರ ಒಗ್ಗಟ್ಟು
ಹಾಡೊಣ ಬನ್ನಿರಿ ಹೊಸ ದಿನದ ಹಾಡು, ಕುಣಿಯೋಣ ಬನ್ನಿರೀ, ಕರೆದು ಬನ್ನಿ ಕೈ ಕೈ ಜೋಡಿಸುತ ನೆಗೆದು ಹೆಜ್ಜೆಯಿಟ್ಟು
ನಗುವ ಚೆಲ್ಲಿರಿ, ನಕ್ಕು ಅರಳಿದ ಮಲ್ಲಿಗೆಯ ಚೆಲ್ಲಿರಿ, ಸಿಹಿ ದಾಳಿಂಬೆ, ಮಾವಿನ ರಸಕೂ ಸಿಹಿಯಾದ ಒಡನಾಟದ ನಂಟು
ನಿಮ್ಮ ಒಡಲಿನ ಬೆಲ್ಲವ ಎಲ್ಲರ ಮಡಲಿನಲ್ಲಿ ನೀಡುತ್ತಾ ನಡೆವಾಗ ಮತ್ತೆ ಮಾಯದಲಿ ಹಿರಿದಾಗಲಿ ನಿಮ್ಮ ಮಡಲ ಗಂಟು
ಇನ್ನೊಂದು ಕವನ
ಯುಗಾದಿ : ಯುಗದ ಸಂಭ್ರಮ ಬರೀ ಭ್ರಮೆ
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications