ಹೊಸ ಜೀವನಕ್ಕೆ ಚೈತನ್ಯ ತುಂಬುವ ಯುಗಾದಿ

ನಮ್ಮ ಧರ್ಮದಲ್ಲಿ ಪ್ರತಿ ಸಂವತ್ಸರಕ್ಕೆ (ಅಂದರೆ ಪ್ರತಿ ವರ್ಷಕ್ಕೆ) ಒಂದೊಂದು ಹೆಸರು ಕೊಡಲಾಗಿದೆ. ಸಂವತ್ಸರಗಳು ಒಟ್ಟು 60 ಇದ್ದು, ಅವು ಒಂದಾದ ಮೇಲೊಂದು ಬರುತ್ತವೆ. ಈ ಹಿಂದೆ ಕಳೆದುದು (ಅಂದರೆ 26 ಮಾರ್ಚ್ 2009ವರೆಗು ಒಂದು ವರ್ಷ ಕಾಲ ಕಳೆದ ಸಂವತ್ಸರ) "ಸರ್ವಧಾರಿ ನಾಮ ಸಂವತ್ಸರ". ಪ್ರತಿ ಸಂವತ್ಸರವು ಚೈತ್ರ ಶುದ್ಧ ಪ್ರತಿಪದದಿಂದ, ಫಾಲ್ಗುಣ ಕೃಷ್ಣ ಅಮವಾಸ್ಯದವರೆಗೆ ಒಂದೊಂದಾಗಿ ಬರುತ್ತವೆ. ಇಲ್ಲಿ ಗಮನಿಸಬೇಕಾದ ಇನ್ನೊಂದು ವಿಷಯವೇನೆಂದರೆ ಒಬ್ಬ 60 ವರ್ಷದ ವ್ಯಕ್ತಿ ಹಿಂದೂ ಪಂಚಾಂಗದ ಎಲ್ಲ ಸಂವತ್ಸರಗಳನ್ನು ನೋಡಿರುತ್ತಾನೆ. ಈ ನಿಮಿತ್ತವಾಗಿ ಕೆಲವು ಮನೆಗಳಲ್ಲಿ "ಶಷ್ಟಾಬ್ದಿ" (60 ವರ್ಷದ ಶಾಂತಿ) ಆಚರಿಸುವ ಸಾಂಪ್ರದಾಯಿಕ ಪದ್ಧತಿಯು ಇದೆ. ಅದರ ಬಗ್ಗೆ ವಿವರವಾಗಿ ಇನ್ನೊಂದು ಕಡೆ ಬರೆಯುತ್ತೇನೆ.
ಯುಗಾದಿಯ ದಿನ ಆಚರಿಸಬೇಕಾದ ಕಾರ್ಯಕ್ರಮಗಳು:
ಚೈತ್ರ ಶುಕ್ಲ ಪ್ರತಿಪದ ಮುಂಜಾನೆ ಎದ್ದು ಶಾಂತವಾದ ಮನಸ್ಸಿನಿಂದ ಹಿರಿಯರು ಹೇಳಿದ ಹಾಗೆ ಕೇಳುತ್ತಾ ತುಪ್ಪದ ಪಾತ್ರೆಯಲ್ಲಿ ಮುಖವನ್ನು ನೋಡಿ ಅಮೇಲೆ ಕನ್ನಡಿಯಲ್ಲಿ ಮುಖವನ್ನು ವೀಕ್ಷಿಸಬೇಕು. ಬಂಧು ಬಾಂಧವರಿಂದ ಕೂಡಿಕೊಂಡು ಅಭ್ಯಂಗ ಸ್ನಾನ ಮಾಡಿ, ಪೂಜಾದಿಗಳನ್ನು ಪೂರೈಸಿ ಹೊಸ ಬಟ್ಟೆಗಳನ್ನು ತೊಟ್ಟು, ದೈವಜ್ಞರಿಂದ, ಅಂದರೆ ಶಾಸ್ತ್ರಜ್ಞ ಜೋತಿಷಿಗಳಿಂದ ಆ ವರ್ಷದ ಫಲಗಳನ್ನು ಕೇಳಿ ತಿಳಿಯಬೇಕು. ಇದು ಅಲ್ಲದೇ ಇನ್ನೊಂದು ಸಂಪ್ರದಾಯವಿದೆ. ಮುಂಜಾನೆ ಎದ್ದಾಕ್ಷಣ ಪಂಚಾಂಗ ಶ್ರವಣ ಮಾಡುವವರು ಇದ್ದಾರೆ. ಎರಡೂ ಒಳ್ಳೆಯ ಮಾರ್ಗಗಳೇ. ಇದರ ಜೊತೆ ಈ ಕೆಳಗಿನ ಪದ್ಧತಿಗಳನ್ನು ಆಚರಿಸಬೇಕು.
1) ಪಂಚಾಂಗ ಪೂಜೆಯನ್ನು ಮಾಡಬೇಕು.
2) ಗುರು-ಹಿರಿಯರಿಗೆ ನಮಸ್ಕರಿಸಿ ಅವರಿಂದ ಆಶೀರ್ವಾದವನ್ನು ಸ್ವೀಕರಿಸಬೇಕು.
3) ಮನೆಯವರೆಲ್ಲರೂ ಸೇರಿ "ಬೇವು-ಬೆಲ್ಲ" ಸ್ವೀಕಾರ ಮಾಡಬೇಕು. ಬೇವು, ಇದು ದುಃಖದ - ಪಾಪದ ಸಂಕೇತ. ಬೆಲ್ಲ, ಇದು ಪುಣ್ಯದ-ಸುಖದ ಸಂಕೇತ. ಈ ಎರಡೂ ಅವಸ್ಥೆಯನ್ನು ಅತ್ಯಂತ ಧೈರ್ಯವಾಗಿ ಎದರಿಸುತ್ತೇನೆ ಎಂದು ಯುಗಾದಿಯ ದಿನವೇ ಪ್ರತಿಜ್ಞೆಗೈಯುವ ಒಂದು ಕೆಲಸ.
4) ತೈಲಾಭ್ಯಂಗನ ಅವಶ್ಯವಾಗಿ ಮಾಡಲೇಬೇಕು. ತೈಲಸ್ನಾನದ ಮಹತ್ವವನ್ನು ಶಾಸ್ತ್ರದಲ್ಲಿ ಈ ರೀತಿ ಹೇಳಲಾಗಿದೆ:
ವಸಂತ ಋತುವಿನ ಮೊದಲನೆಯ ದಿನವಾದ ಬಲಿ ಪ್ರತಿಪದಾ ದಿನದಂದು ಯಾವನು ಎಣ್ಣೆಯನ್ನು ಹಚ್ಚಿ ಸ್ನಾನ ಮಾಡುವುದಿಲ್ಲವೋ ಅವನು ದರಿದ್ರನು ಹಾಗೂ ಮಹಾನರಕಗಾಯಿಯಾಗಿತ್ತಾನೆ ಎಂದು ವಸಿಷ್ಠಸ್ಮುತಿಯಲ್ಲಿ ಹೇಳಲಾಗಿದೆ.
(ಕೃಪೆ : ವ್ಯಾಸ ವಿದ್ಯಾ ಪ್ರತಿಷ್ಠಾನ, ಧಾರವಾಡ)
(ಬಡ ಹುಡುಗರ ಏಳಿಗೆಗಾಗಿ ಮೂಲಭೂತ ಸೌಕರ್ಯಗಳ ಜೊತೆ ವಿದ್ಯಾಭ್ಯಾಸ, ವೇದಾಧ್ಯಯನ ಮುಂತಾಗಿ ಹಲವಾರು ಸೌಲತ್ತುಗಳನ್ನು ನೀಡುತ್ತ, ಅನೇಕ ವಿದ್ಯಾರ್ಥಿಗಳನ್ನ ಪೋಷಿಸುತ್ತ ಶ್ರಮಿಸುತ್ತಿದೆ ವ್ಯಾಸ ವಿದ್ಯಾ ಪ್ರತಿಷ್ಠಾನ. ಶ್ರೀಕಾಂತಾಚಾರ ಬಿದರಕುಂದಿಯವರು ಗುರುಗಳಾಗಿ ವಿದ್ಯಾರ್ಥಿಗಳನ್ನು ಹೊಸದಿಕ್ಕಿನೆಡೆಗೆ ನಡೆಸುತ್ತಿದ್ದಾರೆ.)
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications