ಕನ್ನಡ ಕವನ : ಯುಗಾದಿ ಅಂದರೆ...

ಚಿಗುರಿನ ಪಲ್ಲವಿ
ನೆನಪಿನ ಚರಣ
ಹೊಸ ಠರಾವು
ಹಳೆಯ ಬೇಸರಕ್ಕೆ ವಿಚ್ಛೇದನ
ತೊಳೆದ ಮನೆ
ಬೆಳಗುವ ಮನಸ್ಸು
ಹೊಸ ಬಟ್ಟೆ
ಒಬ್ಬಟ್ಟಿನ ತಟ್ಟೆ
ಸಂಕಲ್ಪಗಳ ತೇರು
ಭಾವ ಪುನರುತ್ಥಾನ
ಪ್ರಕೃತಿಯ ಪರಿಭ್ರಮಣೆ
ತನ್ನಿಂದ ತಾನೆ ನಡೆಯುವ ಒಂದು ಮಾಯೆ
ಹಳೇ ಮಾತಿಗೆ ಹೊಸ ಮೌನ
ಇತಿಹಾಸದ ಅಟ್ಟಹಾಸಕ್ಕೆ ಹೊಸ ಮಂದಹಾಸ
ತಾಳ್ಮೆಯ ತಳಿರು
ಅರಿವಿನ ಹೂರಣ
ತಿಳಿವಿನ ರಂಗೋಲಿ
ಬದುಕಿನ ಆರಂಭ
ನಂದನದ ಜೊತೆಗಾತಿ
ಸಂಭ್ರಮದ ದಿಬ್ಬಣ
ನವೋಲ್ಲಾಸಕ್ಕೆ ನಾಂದಿ
ಕಾಲಕ್ಕೆ ಕನ್ನಡಿ
ನವಯುಗದ ಮುನ್ನುಡಿ
ಭರವಸೆ ನೀಡುವ ಅಭಯ ಹಸ್ತ
ಜೀವಂತಿಕೆಯ ಪರಮಾವಧಿ
ಕನಸುಗಳ ಆದಿ
ಪರಿಸರದಲ್ಲೆಲ್ಲ ಪ್ರಸನ್ನತೆಯನ್ನು ಪ್ರಚೋದಿಸುವ ಪರ್ವಕಾಲ
ಅದಮ್ಯ ಚೇತನದ ಸಂಕೇತ
ಪಂಚಾಂಗ ಶ್ರವಣ
ನೂತನ ವಸ್ತ್ರಧಾರಣ
ಹೋಳಿಗೆ ಪಾಯಸ ಭೋಜನ
ಬೇವು-ಬೆಲ್ಲ ಸೇವನ
ಶುಭಾಶಂಸನ
ವಸಂತನ ಆಗಮನ
ಚೈತನ್ಯದ ಆಗರ
ನೋವು ನಲಿವಿನ ಸಂಭ್ರಮ
ಜೀವಸಂಕುಲದ ಸಂತಸ
ಚಿಗುರೆಲೆಗಳ ಸೊಗಡು
ಹೂದುಂಬಿಯ ರಸದೌತಣ
ಮತ್ತೊಂದು ಸಂವತ್ಸರಕ್ಕೆ ಸ್ವಾಗತ
ಬೀಳ್ಕೊಂಡ ವರ್ಷದ ಸಿಂಹಾವಲೋಕನ
ಸೂರ್ಯೋದಯದ ಹರ್ಷೋದಯ
More From
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications