ಮಾವು-ಬೇವು ಎಲೆಗಳ ತೋರಣದ ಸಿಂಗಾರ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವರ್ಷದಲ್ಲಿ ಬರುವ ಮೂರೂವರೆ ದಿನಗಳ ಶುಭಗಳಿಗೆ ಅತ್ಯಂತ ಶ್ರೇಷ್ಠವಾದದು. ಇದರಲ್ಲಿ ಯುಗಾದಿಯೂ ಒಂದಾಗಿದೆ. ಯುಗಾದಿ ದಿನದಂದು ಕೈಗೊಳ್ಳುವ ಕಾರ್ಯಗಳು ಯಶಸ್ವಿಯಾಗುತ್ತವೆ ಎಂಬ ನಂಬಿಕೆ ಜನರಲ್ಲಿದೆ. ಹಾಗಾಗಿ ಯುಗಾದಿ ಹಬ್ಬದ ದಿನದಂದು ಹೊಸ ಕಾರ್ಯ ಚಟುವಟಿಕೆ, ಹೊಸ ಪದಾರ್ಥಗಳ ಖರೀದಿ ಸೇರಿದಂತೆ ಹಲವು ಕೆಲಸ ಕಾರ್ಯಗಳನ್ನು ಆರಂಭಿಸುವುದನ್ನು ನಾವು ಕಾಣಬಹುದು. ಮಲ್ಲಿನಾಥನೆಂಬ 14ನೇ ತೀರ್ಥಂಕರ ಹುಟ್ಟಿದ್ದು ಹಾಗೂ ಆದಿ ತೀರ್ಥಂಕರನ ಮಗ ಭರತ ಚಕ್ರವರ್ತಿ ದಿಗ್ವಿಜಯ ಸಾಧಿಸಿದ್ದು ಯಗಾದಿಯ ದಿನವಾದ್ದರಿಂದ ಯುಗಾದಿ ಹಬ್ಬವು ಜೈನರಿಗೂ ಮಹತ್ವದ ದಿನವಾಗಿದೆ.
ಪೌರಾಣಿಕ ಮಹತ್ವ : ವೇದಗಳ ಕಾಲದಿಂದಲೂ ನಡೆದು ಬಂದಿದ್ದು, ಈ ಕುರಿತಂತೆ ಅಥರ್ವಣ ವೇದ, ಶತಪಥ ಬ್ರಾಹ್ಮಣ, ಧರ್ಮಸಿಂಧು, ನಿರ್ಣಯ ಸಿಂಧು ಮುಂತಾದ ಧರ್ಮಶಾಸ್ತ್ರ ಗ್ರಂಥಗಳಲ್ಲಿ ಯುಗಾದಿಯ ಬಗ್ಗೆ ಉಲ್ಲೇಖವಿದೆ. ಹೇಮಾದ್ರಿ ಪಂಡಿತನ ಚತುರ್ವರ್ಗ ಚಿಂತಾಮಣ ಎಂಬ ಪುರಾಣ ಗ್ರಂಥದಲ್ಲಿ ಬ್ರಹ್ಮ ದೇವನು ಚೈತ್ರಮಾಸದ ಶುಕ್ಲಪಕ್ಷದ ಮೊದಲನೆಯ ದಿನದ ಸೂರ್ಯೋದಯ ಕಾಲ ಅರ್ಥಾತ್ ಯುಗಾದಿಯಂದು ಭೂಮಂಡಲವನ್ನು ಸೃಷ್ಟಿಸಿದ. ಅಂದೇ ಗ್ರಹ, ನಕ್ಷತ್ರ, ಮಾಸ, ಋತು, ವರ್ಷಾಧಿಪತಿಯನ್ನು ಸೃಷ್ಟಿಸಿ ಕಾಲಗಣನೆ ಆರಂಭಿಸಿದನೆಂದು ಉಲ್ಲೇಖಿಸಲಾಗಿದೆ.
ಶ್ರೀರಾಮನು ರಾವಣನನ್ನು ಸಂಹರಿಸಿ ಅಯೋಧ್ಯೆಗೆ ಬಂದು ರಾಜ್ಯವಾಳಲು ಪ್ರಾರಂಭಿಸಿದ್ದು, ಶಾಲಿವಾಹನ ಶಕೆ ಆರಂಭವಾದದ್ದು ಕೂಡ ಯುಗಾದಿ ದಿನವೇ ಎಂದು ಹೇಳಲಾಗುತ್ತಿದೆ. ಯುಗಾದಿ ಹಬ್ಬದ ಆಚರಣೆ ಒಂದು ಕಡೆಯಿಂದ ಮತ್ತೊಂದು ಕಡೆಗೆ ವಿಭಿನ್ನವಾಗಿರುವುದನ್ನು ನಾವು ಕಾಣಬಹುದಾದರೂ ಸಾಮಾನ್ಯವಾಗಿ ಹಬ್ಬದ ದಿನದಂದು ಸೂರ್ಯೋದಯಕ್ಕೂ ಮುನ್ನ ಅಂದರೆ ಮುಂಜಾನೆ ಎದ್ದು ಮಂಗಳ ಸ್ನಾನ ಮಾಡಿ ಶ್ರೀರಾಮನನ್ನು ಸ್ಮರಣೆ ಮಾಡಿ ಹೊಸಬಟ್ಟೆ ತೊಟ್ಟು ಮನೆಯನ್ನೆಲ್ಲ ಮಾವು-ಬೇವು ಎಲೆಗಳ ತೋರಣದಿಂದ ಸಿಂಗರಿಸಿ ಹೊಸವರ್ಷವನ್ನು ಬರಮಾಡಿಕೊಳ್ಳಲಾಗುತ್ತದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications