ಮಾವು-ಬೇವು ಎಲೆಗಳ ತೋರಣದ ಸಿಂಗಾರ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವರ್ಷದಲ್ಲಿ ಬರುವ ಮೂರೂವರೆ ದಿನಗಳ ಶುಭಗಳಿಗೆ ಅತ್ಯಂತ ಶ್ರೇಷ್ಠವಾದದು. ಇದರಲ್ಲಿ ಯುಗಾದಿಯೂ ಒಂದಾಗಿದೆ. ಯುಗಾದಿ ದಿನದಂದು ಕೈಗೊಳ್ಳುವ ಕಾರ್ಯಗಳು ಯಶಸ್ವಿಯಾಗುತ್ತವೆ ಎಂಬ ನಂಬಿಕೆ ಜನರಲ್ಲಿದೆ. ಹಾಗಾಗಿ ಯುಗಾದಿ ಹಬ್ಬದ ದಿನದಂದು ಹೊಸ ಕಾರ್ಯ ಚಟುವಟಿಕೆ, ಹೊಸ ಪದಾರ್ಥಗಳ ಖರೀದಿ ಸೇರಿದಂತೆ ಹಲವು ಕೆಲಸ ಕಾರ್ಯಗಳನ್ನು ಆರಂಭಿಸುವುದನ್ನು ನಾವು ಕಾಣಬಹುದು. ಮಲ್ಲಿನಾಥನೆಂಬ 14ನೇ ತೀರ್ಥಂಕರ ಹುಟ್ಟಿದ್ದು ಹಾಗೂ ಆದಿ ತೀರ್ಥಂಕರನ ಮಗ ಭರತ ಚಕ್ರವರ್ತಿ ದಿಗ್ವಿಜಯ ಸಾಧಿಸಿದ್ದು ಯಗಾದಿಯ ದಿನವಾದ್ದರಿಂದ ಯುಗಾದಿ ಹಬ್ಬವು ಜೈನರಿಗೂ ಮಹತ್ವದ ದಿನವಾಗಿದೆ.
ಪೌರಾಣಿಕ ಮಹತ್ವ : ವೇದಗಳ ಕಾಲದಿಂದಲೂ ನಡೆದು ಬಂದಿದ್ದು, ಈ ಕುರಿತಂತೆ ಅಥರ್ವಣ ವೇದ, ಶತಪಥ ಬ್ರಾಹ್ಮಣ, ಧರ್ಮಸಿಂಧು, ನಿರ್ಣಯ ಸಿಂಧು ಮುಂತಾದ ಧರ್ಮಶಾಸ್ತ್ರ ಗ್ರಂಥಗಳಲ್ಲಿ ಯುಗಾದಿಯ ಬಗ್ಗೆ ಉಲ್ಲೇಖವಿದೆ. ಹೇಮಾದ್ರಿ ಪಂಡಿತನ ಚತುರ್ವರ್ಗ ಚಿಂತಾಮಣ ಎಂಬ ಪುರಾಣ ಗ್ರಂಥದಲ್ಲಿ ಬ್ರಹ್ಮ ದೇವನು ಚೈತ್ರಮಾಸದ ಶುಕ್ಲಪಕ್ಷದ ಮೊದಲನೆಯ ದಿನದ ಸೂರ್ಯೋದಯ ಕಾಲ ಅರ್ಥಾತ್ ಯುಗಾದಿಯಂದು ಭೂಮಂಡಲವನ್ನು ಸೃಷ್ಟಿಸಿದ. ಅಂದೇ ಗ್ರಹ, ನಕ್ಷತ್ರ, ಮಾಸ, ಋತು, ವರ್ಷಾಧಿಪತಿಯನ್ನು ಸೃಷ್ಟಿಸಿ ಕಾಲಗಣನೆ ಆರಂಭಿಸಿದನೆಂದು ಉಲ್ಲೇಖಿಸಲಾಗಿದೆ.
ಶ್ರೀರಾಮನು ರಾವಣನನ್ನು ಸಂಹರಿಸಿ ಅಯೋಧ್ಯೆಗೆ ಬಂದು ರಾಜ್ಯವಾಳಲು ಪ್ರಾರಂಭಿಸಿದ್ದು, ಶಾಲಿವಾಹನ ಶಕೆ ಆರಂಭವಾದದ್ದು ಕೂಡ ಯುಗಾದಿ ದಿನವೇ ಎಂದು ಹೇಳಲಾಗುತ್ತಿದೆ. ಯುಗಾದಿ ಹಬ್ಬದ ಆಚರಣೆ ಒಂದು ಕಡೆಯಿಂದ ಮತ್ತೊಂದು ಕಡೆಗೆ ವಿಭಿನ್ನವಾಗಿರುವುದನ್ನು ನಾವು ಕಾಣಬಹುದಾದರೂ ಸಾಮಾನ್ಯವಾಗಿ ಹಬ್ಬದ ದಿನದಂದು ಸೂರ್ಯೋದಯಕ್ಕೂ ಮುನ್ನ ಅಂದರೆ ಮುಂಜಾನೆ ಎದ್ದು ಮಂಗಳ ಸ್ನಾನ ಮಾಡಿ ಶ್ರೀರಾಮನನ್ನು ಸ್ಮರಣೆ ಮಾಡಿ ಹೊಸಬಟ್ಟೆ ತೊಟ್ಟು ಮನೆಯನ್ನೆಲ್ಲ ಮಾವು-ಬೇವು ಎಲೆಗಳ ತೋರಣದಿಂದ ಸಿಂಗರಿಸಿ ಹೊಸವರ್ಷವನ್ನು ಬರಮಾಡಿಕೊಳ್ಳಲಾಗುತ್ತದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications