ಯುಗಾದಿಗೆ ಕೊಡಗಿನ ರೈತರ ಚಿನ್ನದ ಉಳುಮೆ

ಉತ್ಸವದ ದಿನ ಮುಂಜಾನೆ ರೈತರು ತಮಗೆ ಸೇರಿದ ಎತ್ತು ಹಾಗೂ ದನಕರುಗಳನ್ನು ನದಿಯ ನೀರಿನಿಂದ ತೊಳೆದು ಅವುಗಳ ಗವುಸು ಹಾಗೂ ಕೊಂಬಿಗೆ ಹಣಸು ವಸ್ತ್ರಾಂಲಕಾರದಿಂದ ಸಿಂಗರಿಸಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ತಾವು ಹೊಸ ಉಡುಗೆ-ತೊಡಿಗೆ ತೊಟ್ಟು ತಮ್ಮ ಕೃಷಿ ಪರಿಕರಗಳಾದ ನೇಗಿಲು, ನೊಗ, ಎತ್ತಿನಗಾಡಿಯೊಂದಿಗೆ ಹತ್ಯಾರುಗಳನ್ನು ಒಪ್ಪವಾಗಿ ಜೋಡಿಸಿ ಪೂಜೆ ಸಲ್ಲಿಸುತ್ತಾರೆ. ಮನೆಗಳಲ್ಲಿ ಉತ್ಸವದ ಅಂಗವಾಗಿ ಹೋಳಿಗೆ, ಪಾಯಸ ಮತ್ತಿತರ ಭಕ್ಷ್ಯ ಭೋಜನವನ್ನು ತಯಾರಿಸಿ ತಮ್ಮ ಜಾನುವಾರುಗಳಿಗೆ ತಿನ್ನಿಸಿ, ತಾವು ಸೇವಿಸಿ ಸಂಭ್ರಮಿಸುತ್ತಾರೆ.
ಅಂದು ಹೊಸ ಪಂಚಾಂಗದಂತೆ ಗ್ರಾಮದ ಹಿರಿಯ ವ್ಯಕ್ತಿ ನೇಗಿಲು ಮತ್ತು ಭೂಮಿಗೆ ಪೂಜೆ ಸಲ್ಲಿಸಿ ಹೊನ್ನಾರು (ಚಿನ್ನದ ಉಳುಮೆ) ಹೂಡಿ ವರ್ಷಧಾರೆ ಉಳುಮೆಗೆ ಚಾಲನೆ ನೀಡುತ್ತಾರೆ. ಬಳಿಕ ಮಂಗಳವಾದ್ಯಗಳೊಂದಿಗೆ ಮೆರವಣಿಗೆ ಹೊರಟ ಹೊನ್ನಾರುಗಳು ಗ್ರಾಮದ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿ ನಂತರ ಉಳುಮೆ ಆರಂಭಿಸಿ ಈ ವರ್ಷ ಉತ್ತಮ ಮಳೆ ಬೆಳೆಯಾಗಲಿ ಎಂದು ಪ್ರಕೃತಿಯನ್ನು ಪೂಜಿಸಲಾಗುತ್ತದೆ. ಆ ನಂತರ ರೈತರು ತಮ್ಮ ತಮ್ಮ ಜಮೀನಿಗೆ ತೆರಳಿ ಉಳುಮೆ ಆರಂಭಿಸುತ್ತಾರೆ.
ಉತ್ತರ ಕೊಡಗಿನ ಶಿರಂಗಾಲ, ತೊರೆನೂರು, ಮಣಜೂರು, ಕೂಡಿಗೆ, ಮದಾಲಪುರ, ಹುಲುಸೆ, ಭುವನಗಿರಿ, ಮೊದಲಾದ ಗ್ರಾಮಗಳಲ್ಲಿ ಜನಪದ ಸಂಸ್ಕೃತಿಯ ಹೊನ್ನಾರು ಉತ್ಸವವನ್ನು ಹಿಂದಿನ ಕಾಲದಿಂದಲೂ ನಡೆಸಿಕೊಂಡು ಬರಲಾಗುತ್ತಿದೆ. ಎತ್ತುಗಳ ಬದಲಿಗೆ ಯಂತ್ರವನ್ನು ಬಳಸುವ ಇಂದಿನ ಆಧುನಿಕ ಯುಗದಲ್ಲಿಯೂ ರೈತರು ಹಬ್ಬವನ್ನು ಆಚರಿಸುವ ಮೂಲಕ ನಮ್ಮ ಸಂಸ್ಕೃತಿ ಸಂಪ್ರದಾಯದ ಉಳಿವಿಗೆ ಶ್ರಮಿಸುತ್ತಿರುವುದು ಶ್ಲಾಘನೀಯ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications