ಯುಗಾದಿಗೆ ಕೊಡಗಿನ ರೈತರ ಚಿನ್ನದ ಉಳುಮೆ

ಉತ್ಸವದ ದಿನ ಮುಂಜಾನೆ ರೈತರು ತಮಗೆ ಸೇರಿದ ಎತ್ತು ಹಾಗೂ ದನಕರುಗಳನ್ನು ನದಿಯ ನೀರಿನಿಂದ ತೊಳೆದು ಅವುಗಳ ಗವುಸು ಹಾಗೂ ಕೊಂಬಿಗೆ ಹಣಸು ವಸ್ತ್ರಾಂಲಕಾರದಿಂದ ಸಿಂಗರಿಸಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ತಾವು ಹೊಸ ಉಡುಗೆ-ತೊಡಿಗೆ ತೊಟ್ಟು ತಮ್ಮ ಕೃಷಿ ಪರಿಕರಗಳಾದ ನೇಗಿಲು, ನೊಗ, ಎತ್ತಿನಗಾಡಿಯೊಂದಿಗೆ ಹತ್ಯಾರುಗಳನ್ನು ಒಪ್ಪವಾಗಿ ಜೋಡಿಸಿ ಪೂಜೆ ಸಲ್ಲಿಸುತ್ತಾರೆ. ಮನೆಗಳಲ್ಲಿ ಉತ್ಸವದ ಅಂಗವಾಗಿ ಹೋಳಿಗೆ, ಪಾಯಸ ಮತ್ತಿತರ ಭಕ್ಷ್ಯ ಭೋಜನವನ್ನು ತಯಾರಿಸಿ ತಮ್ಮ ಜಾನುವಾರುಗಳಿಗೆ ತಿನ್ನಿಸಿ, ತಾವು ಸೇವಿಸಿ ಸಂಭ್ರಮಿಸುತ್ತಾರೆ.
ಅಂದು ಹೊಸ ಪಂಚಾಂಗದಂತೆ ಗ್ರಾಮದ ಹಿರಿಯ ವ್ಯಕ್ತಿ ನೇಗಿಲು ಮತ್ತು ಭೂಮಿಗೆ ಪೂಜೆ ಸಲ್ಲಿಸಿ ಹೊನ್ನಾರು (ಚಿನ್ನದ ಉಳುಮೆ) ಹೂಡಿ ವರ್ಷಧಾರೆ ಉಳುಮೆಗೆ ಚಾಲನೆ ನೀಡುತ್ತಾರೆ. ಬಳಿಕ ಮಂಗಳವಾದ್ಯಗಳೊಂದಿಗೆ ಮೆರವಣಿಗೆ ಹೊರಟ ಹೊನ್ನಾರುಗಳು ಗ್ರಾಮದ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿ ನಂತರ ಉಳುಮೆ ಆರಂಭಿಸಿ ಈ ವರ್ಷ ಉತ್ತಮ ಮಳೆ ಬೆಳೆಯಾಗಲಿ ಎಂದು ಪ್ರಕೃತಿಯನ್ನು ಪೂಜಿಸಲಾಗುತ್ತದೆ. ಆ ನಂತರ ರೈತರು ತಮ್ಮ ತಮ್ಮ ಜಮೀನಿಗೆ ತೆರಳಿ ಉಳುಮೆ ಆರಂಭಿಸುತ್ತಾರೆ.
ಉತ್ತರ ಕೊಡಗಿನ ಶಿರಂಗಾಲ, ತೊರೆನೂರು, ಮಣಜೂರು, ಕೂಡಿಗೆ, ಮದಾಲಪುರ, ಹುಲುಸೆ, ಭುವನಗಿರಿ, ಮೊದಲಾದ ಗ್ರಾಮಗಳಲ್ಲಿ ಜನಪದ ಸಂಸ್ಕೃತಿಯ ಹೊನ್ನಾರು ಉತ್ಸವವನ್ನು ಹಿಂದಿನ ಕಾಲದಿಂದಲೂ ನಡೆಸಿಕೊಂಡು ಬರಲಾಗುತ್ತಿದೆ. ಎತ್ತುಗಳ ಬದಲಿಗೆ ಯಂತ್ರವನ್ನು ಬಳಸುವ ಇಂದಿನ ಆಧುನಿಕ ಯುಗದಲ್ಲಿಯೂ ರೈತರು ಹಬ್ಬವನ್ನು ಆಚರಿಸುವ ಮೂಲಕ ನಮ್ಮ ಸಂಸ್ಕೃತಿ ಸಂಪ್ರದಾಯದ ಉಳಿವಿಗೆ ಶ್ರಮಿಸುತ್ತಿರುವುದು ಶ್ಲಾಘನೀಯ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications