ಹೊಸ ಸಂವತ್ಸರದ ಆಗಮನ- ಕವಿಗಳಿಗೆ ನಮನ
ಸಂಭವಾಮಿ ಯುಗೇ...ಯುಗೇ. ಯುಗಾದಿಯಂದು ಬೇವು-ಬೆಲ್ಲ ಸೇವಿಸುವಾಗ ಕೆಳಗಿನ ಈ ಶ್ಲೋಕಗಳನ್ನು ಉಚ್ಚರಿಸಿ ತಿನ್ನುವಂತೆ ಹಿರಿಯರು ಹೇಳುತ್ತಾರೆ.
"ಶತಾಯು ವಜ್ರ ದೇಹಾಯ ಸರ್ವ ಸಂಪತ್ಕರಾಯಚ ಸರ್ವರಿಷ್ಟ ವಿನಾಶಯ ನಿಂಭಕಂದಳ ಭಕ್ಷಣಂ". ಹೊಸತು ವರುಷ, ಹೊಸತು ಹರುಷ, ಹೊಸತು ಹೊಸತು ತರುವ ವಿಜಯ ನಾಮ ಸಂವತ್ಸರದ ಹೊಸವರುಷಕ್ಕೆ ಕೆಲವೊಂದು "ಯುಗಾದಿ" ಕವನಗಳ (ಆಯ್ದ ಪದಗಳ) ಪಠಣ, ಮನನ.
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ|
ಹೊಂಗೆ ಹೂಂವ ತೊಂಗಲಲಿ ಭೃಂಗದ ಸಂಗೀತ ಕೇಳಿ ಮತ್ತೆ ಕೇಳ ಬರುತಿದೆ
ಬೇವಿನ ಕಹಿ ಬಾಳಿನಲ್ಲಿ ಹೂವಿನ ನಸುಗಂಪು ಸೂಸಿ ಜೀವಕಳೆಯ ತರುತಿದೆ||

ವರಕವಿ ಬೇಂದ್ರೆಯವರ ಈ ಕವನ ಮನಕೆ ಆಪ್ತವೆನಿಸುವುದು. "ಯುಗ ಯುಗಾದಿ ಕಳೆದರೂ" ಕವನದ ಶ್ರವಣವೂ, ಪಂಚಾಂಗ ಪಠಣದಷ್ಟೇ ಮುಖ್ಯ. ಯುಗಾದಿಗೆ ಯುಗಾದಿಯೇ ಸಾಟಿ. ಪ್ರತಿವರುಷವೂ ಪ್ರಭವದಿಂದ -ಅಕ್ಷಯದ ತನಕ 60 ಹೆಸರುಗಳಿಂದ ಆಚರಿಸುವ ಯುಗಾದಿ, ಮುಂಬರುವ ದಿನಗಳು "ಬೇವಿನ ಕಹಿ ಬಾಳಿನಲ್ಲಿ, ಹೂವಿನ ನಸುಗಂಪು ಸೂಸಿ" ಒಳ್ಳೆಯದಾಗುವುದು ಎಂಬ "ಜೀವಕಳೆಯ ತರುವ" ಭರವಸೆಯ ಅಭಯ ಹಸ್ತ.
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ...ಕುಲವಧು ಚಿತ್ರದಲಿ ಅಳವಡಿಸಿಕೊಂಡು, ಎಸ್. ಜಾನಕಿಯವರ ಕೋಕಿಲ ಕಂಠದಿಂದ ಹೊಮ್ಮಿರುವ, ಹೊಸ ಯುಗದ ಹುಟ್ಟು ಹಬ್ಬದ ಆಗಮನವನು ಸೂಚಿಸುವ ಈ ಕವನವನ್ನು ಎಷ್ಟೇ ಬಾರಿ ಕೇಳಿದರೂ ತೃಪ್ತಿಯಾಗದೆ ಮತ್ತೆ ಮತ್ತೆ ಕೇಳಬೇನಿಸುತ್ತದೆ. ಯುಗಾದಿ ಬಂತೆಂದರೆ ಸಾಕು ಪ್ರಕೃತಿಯಲ್ಲೊಂದು ಹೊಸ ಪುಳಕ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications