ಯುಗಾದಿ ಕೇವಲ ಹಬ್ಬವಲ್ಲ, ಅದು ಬದಲಾವಣೆಯ ಪ್ರತೀಕ
ನಮ್ಮ ಸಂಸ್ಕೃತಿಯೇ ಹಾಗೆ, ಪ್ರತಿಯೊಂದು ಆಚರಣೆಯನ್ನು ನಾನಾವಿಧವಾದ ಪ್ರಯೋಜನಗಳ ದೃಷ್ಟಿಯಲ್ಲಿ ವಿಮರ್ಶಿಸಿ ವಿಧಿಸಿರುತ್ತದೆ. ಈ ಆಚರಣೆಗಳು ಏನೇನು, ಯಾಕೆ ಆಚರಿಸುತ್ತೇವೆ ಎನ್ನುವುದು ನಮಗೆ ಗೊತ್ತಿಲ್ಲದಿರಬಹುದು , ಆದರೆ ಅದರ ಉಪಯೋಗವಿಲ್ಲ ಎಂದೇನಿಲ್ಲ. ಉದಾಹರಣೆಗೆ ಯುಗಾದಿಯ ಎಳ್ಳು-ಬೆಲ್ಲ , ಏಕಾದಶಿಯ ಉಪವಾಸ, ಧನುರ್ಮಾಸದ ಹುಗ್ಗಿ (ಪೊಂಗಲ್) ಹೀಗೆ ಎಲ್ಲವೂ ಆರೋಗ್ಯದ ದೃಷ್ಟಿಯಿಂದ ಆಯಾ ಕಾಲಕ್ಕೆ ಅತ್ಯುತ್ತಮ. ದೀಪಾವಳಿಯ ಗೋಪೂಜೆ, ನವರಾತ್ರಿಯ ಗಜಾಶ್ವಾದಿಗಳ ಪೂಜೆಗಳು ಮನುಷ್ಯ ಮತ್ತು ಪ್ರಾಣಿಗಳ ನಡುವೆ ಬಾಂಧವ್ಯವನ್ನು ಧೃಡಗೊಳಿಸಲು ಸಹಾಯಕ. ಹೀಗೆ ಎಲ್ಲ ಆಚರಣೆಗಳೂ ಒಂದು ವೈಶಿಷ್ಟ್ಯಪೂರ್ಣವಾದ ಗಂಭೀರವಾದ ಅರ್ಥವನ್ನು ಹೊಂದಿವೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಇದರಂತೆ ನಮ್ಮ ನವವರ್ಷವಾದ ಯುಗಾದಿಯೂ ಒಂದು ವಿಶಿಷ್ಟವಾದ ಆಚರಣೆ. ಜನವರಿ ಒಂದರಂದು ಹೊಸವರ್ಷವೆನ್ನಲು ಬದಲಾಗುವುದು ಕ್ಯಾಲೆಂಡರ್ ಒಂದೇ. ಆದರೆ ಯುಗಾದಿಯಂದು ಹಾಗಲ್ಲ. ಪೂರ್ಣಪ್ರಕೃತಿಯು ಮಾಗಿಯ ಚಳಿಗೆ ನಿರಾಭರಣೆಯಾಗಿ ನಂತರದ ವಸಂತಕ್ಕೆ ಹಸಿರ ಸಿರಿಯ ಹೊದ್ದು ಅಲಂಕೃತಳಾಗುವ ಸಮಯ. ಮಾವಿನ ಚಿಗುರಿನ ತೋರಣ, ಕೋಗಿಲೆಯ ಪಂಚಮದ ದನಿಯ ಸುಪ್ರಭಾತ ಒಂದು ಹೊಸಪ್ರಪಂಚವನ್ನೇ ಸ್ವಾಗತಿಸುತ್ತದೆ. ಅಂತಹ ಯುಗಾದಿಯ ಸಮಯವಲ್ಲವೇ ಹೊಸವರ್ಷ.

ನಿಜವಾಗಿಯೂ ಒಬ್ಬ ನೈಸರ್ಗಿಕ ವಾತಾವರಣವನ್ನು ಅನುಭವಿಸುವವನು ಆರಾಧಿಸುವವನು ಹೊಸ ಚೈತನ್ಯದೊಂದಿಗೆ ಈ ಯುಗಾದಿಯನ್ನೇ ಹೊಸವರ್ಷವೆಂದು ಸ್ವಾಗತಿಸಲು ಉತ್ಸುಕನಾಗಿರುತ್ತಾನೆ. ಒಂದು ಸಂವತ್ಸರ ಚಕ್ರವು ಮುಗಿದು ಹೊಸ ವರ್ಷಪ್ರಾರಂಭವಾಗುವ ಸಮಯವೇ ಯುಗಾದಿ. ಹಾಗಾಗಿ ಯುಗಾದಿ ಹಬ್ಬವು ಸಂವತ್ಸರಾರಂಭ, ನವವರ್ಷಪ್ರತಿಪದಾ ಎಂಬ ಬೇರೆ ಬೇರೆ ಹೆಸರಿನಿಂದ ಕರೆಯಲ್ಪಡುತ್ತದೆ.

ಪ್ರಾಪ್ತೇ ನೂತನವತ್ಸರೇ ಪ್ರತಿಗೃಹಂ ಕುರ್ಯಾದ್ಧ್ವಜಾರೋಪಣಂ
ಸ್ನಾನಂ ಮಂಗಲಮಾಚರೇತ್ ದ್ವಿಜವರೈಃ ಸಾಕಂ ಸುಪೂಜ್ಯೋತ್ಸವೈಃ |
ದೇವಾನಾಂ ಗುರುಯೋಷಿತಾಂ ಚ ಶಿಶವೋsಲಂಕಾರವಸ್ತ್ರಾದಿಭಿಃ
ಸಂಪೂಜ್ಯಾ ಗಣಕಃ ಫಲಂ ಚ ಶೃಣುಯಾತ್ತಸ್ಮಾಚ್ಚ ಲಾಭಪ್ರದಂ ||
ಈ ಶ್ಲೋಕವು ಹೊಸವರ್ಷದ ಆರಂಭದಲ್ಲಿ ನಾವು ಆಚರಿಸಬೇಕಾದ ವಿಧಿಗಳನ್ನು ತಿಳಿಸುತ್ತದೆ. ಪ್ರತಿ ಮನೆಯನ್ನೂ ತಳಿರು ತೋರಣಗಳಿಂದ ಅಲಂಕರಿಸಬೇಕು. ಪ್ರತಿಯೊಬ್ಬನು ಅಭ್ಯಂಜನವನ್ನು ಮಾಡಿಕೊಳ್ಳಬೇಕು. ವಿಪ್ರರೊಡನೆ ಪೂಜೆಗಳನ್ನು ಉತ್ಸವಗಳನ್ಮು ಆಚರಿಸಬೇಕು. ದೇವ- ಗುರುಗಳಿಗೆ ನೂತನ ವಸ್ತ್ರಾದಿಗಳನ್ನು ಸಮರ್ಪಿಸುವುದರ ಜೊತೆಗೆ ಸ್ತ್ರೀ-ಮಕ್ಕಳಾದಿಯಾಗಿ ಎಲ್ಲರೂ ಹೊಸ ವಸ್ತ್ರಗಳನ್ನು ಧರಿಸಬೇಕು. ನಂತರ ತಿಥಿ ವಾರ ನಕ್ಷತ್ರ ಯೋಗ ಕರಣಗಳೆಂಬ ಪಂಚ ಅಂಶಗಳನ್ನೊಳಗೊಂಡ ಪಂಚಾಂಗವನ್ನು ಪೂಜಿಸಿ ವರ್ಷಫಲವನ್ನು ಶ್ರವಣ ಮಾಡಬೇಕು ಎನ್ನುವುದೇ ಇದರ ತಾತ್ಪರ್ಯ.
ಇದರ ಜೊತೆಗೆ ಬೇವುಬೆಲ್ಲದ ಸೇವನೆ ಎಲ್ಲರಿಗೂ ತಿಳಿದಿರುವ ಸಂಪ್ರದಾಯವೇ ಆಗಿದೆ.
ಶತಾಯುರ್ವಜ್ರದೇಹಾಯ ಸರ್ವಸಂಪತ್ಕರಾಯ ಚ
ಸರ್ವಾರಿಷ್ಟವಿನಾಶಾಯ ನಿಂಬಕಂದಳಭಕ್ಷಣಂ || ಈ ಶ್ಲೋಕದ ತಾತ್ಪರ್ಯ ಹೀಗಿದೆ. 'ನೂರುವರ್ಷ ಅರೋಗಿಯಾಗಿ ಇರುವಂಥ ದೇಹ ಎಲ್ಲ ಸಂಪತ್ತುಗಳು ಮತ್ತು ಎಲ್ಲ ದುರಿತಗಳನ್ನು ನಾಶ, ಇವುಗಳು ಈ ಬೇವಿನೆಲೆಯ ಭಕ್ಷಣೆಯಿಂದ ದೊರೆಯುತ್ತದೆ. ಬೇವಿನ ಎಲೆಯು ನಮ್ಮ ದೇಹಕ್ಕೆ ಬಿಸಿಲಿನ ಬೇಗೆಯನ್ನು ತಡೆಯುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಬೆಲ್ಲವೂ ಆರೋಗ್ಯದಾಯಕ'.

ಇಂತಹ ಅತ್ಯುತ್ತಮ ಬೇವು-ಬೆಲ್ಲದ ಭಕ್ಷಣವು ಆರೋಗ್ಯದ ದೃಷ್ಟಿಯಿಂದಷ್ಟೇ ಅಲ್ಲದೆ ಮಾನಸಿಕವಾಗಿ ಸುಖದುಃಖಗಳನ್ನು ಸಮಾನವಾಗಿ ಸ್ವೀಕರಿಸಬೇಕೆಂದು ತಿಳಿಸುತ್ತದೆ. ಏರಿಳಿತದ ಜೀವನದಲ್ಲಿ "ಸುಖದುಃಖೇ ಸಮೇಕೃತ್ವಾ" ಎಂಬ ಗೀತಾವಾಕ್ಯದಂತೆ ಬದುಕಬೇಕು ಎನ್ನುವುದರ ದ್ಯೋತಕವೇ ಈ ಬೇವುಬೆಲ್ಲ. ಇಂತಹ ಬೇವುಬೆಲ್ಲದ ಹಬ್ಬವು ಎಲ್ಲರಿಗೂ ಶುಭಫಲಗಳನ್ನು ನೀಡಲಿ. ನೂತನ ವರ್ಷದಲ್ಲಿ ನೂತನ ಸತ್ಸಂಕಲ್ಪಗಳಿಂದ ಮುನ್ನೆಡೆಯುವಂತಾಗಲಿ. ಎಲ್ಲರಿಗೂ ಹೊಸವರ್ಷದ ಶುಭಾಶಯಗಳು.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications