Varalakshmi Vrat 2023: ಮನೆಯಲ್ಲಿ ಸುಖ, ಸಂಪತ್ತಿಗಾಗಿ ವರಲಕ್ಷ್ಮಿ ವ್ರತದ ದಿನದಂದು ಈ 4 ವಸ್ತುಗಳನ್ನು ಮನೆಗೆ ತಪ್ಪದೆ ತನ್ನಿ...
ವರಮಹಾಲಕ್ಷ್ಮಿ ವ್ರತವು ಮಹಿಳೆಯರು ಆಚರಿಸುವ ಅತ್ಯಂತ ಪವಿತ್ರ ಮತ್ತು ನೆಚ್ಚಿನ ಹಬ್ಬವಾಗಿದೆ. ಈ ಹಬ್ಬವನ್ನು ನಮ್ಮ ಕರ್ನಾಟಕದಲ್ಲಿ ಬಹಳ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ವರಮಹಾಲಕ್ಷ್ಮಿ ವ್ರತದ ದಿನದಂದು ಕೆಲವು ವಸ್ತುಗಳನ್ನು ಮನೆಗೆ ತಂದರೆ ಲಕ್ಷ್ಮಿಯೇ ಮನೆಗೆ ಬಂದಂತೆ ಎಂಬ ನಂಬಿಕೆ ಇದೆ. ಹಾಗಾದರೆ ವರಮಹಾಲಕ್ಷ್ಮಿ ವ್ರತದ ಈ ದಿನ ಮನೆಗೆ ಯಾವ ರೀತಿಯ ವಸ್ತುಗಳನ್ನು ತರಬೇಕು..? ಇದರಿಂದ ಆಗುವ ಲಾಭಗಳೇನು ಎಂಬುದನ್ನು ಈಗ ತಿಳಿಯೋಣ.
ಪ್ರತಿ ವರ್ಷ ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬವನ್ನು ದಕ್ಷಿಣ ಭಾರತದಲ್ಲಿ ವಿಶೇಷವಾಗಿ ಆಚರಿಸಲಾಗುತ್ತದೆ. ಸಂಪತ್ತಿನ ದೇವತೆಯಾದ ಲಕ್ಷ್ಮಿ ದೇವಿಗೆ ಸಮರ್ಪಿತವಾದ ವರಮಹಾಲಕ್ಷ್ಮಿ ವ್ರತವನ್ನು ಈ ವರ್ಷ ಆಗಸ್ಟ್ 25 ರಂದು ಶುಕ್ರವಾರ ಆಚರಿಸಲಾಗುತ್ತದೆ. ಈ ಶುಭ ಸಂದರ್ಭದಲ್ಲಿ ಲಕ್ಷ್ಮಿ ದೇವಿಗೆ ಇಷ್ಟವಾದ ವಸ್ತುಗಳನ್ನು ಮನೆಗೆ ತರುವುದು ಮನೆಗೆ ಸಂತೋಷ ಮತ್ತು ಸಮೃದ್ಧಿಯನ್ನು ಆಹ್ವಾನಿಸಿದಂತಾಗುತ್ತದೆ. ವರಮಹಾಲಕ್ಷ್ಮಿ ಹಬ್ಬದ ದಿನ ಮನೆಗೆ ಏನೆಲ್ಲಾ ವಸ್ತುಗಳನ್ನು ತರಬೇಕು ಎಂಬುದನ್ನು ಈಗ ತಿಳಿಯೋಣ...

1. ತೆಂಗಿನಕಾಯಿ:
ಸಮೃದ್ಧಿಯ ದೇವತೆಯಾದ ಲಕ್ಷ್ಮಿ ದೇವಿಗೆ ಚಿಕ್ಕ ತೆಂಗಿನಕಾಯಿಯೆಂದರೆ ತುಂಬಾ ಇಷ್ಟ. ವರಮಹಾಲಕ್ಷ್ಮಿ ಹಬ್ಬದಂದು ಅಂತಹ ತೆಂಗಿನಕಾಯಿಯನ್ನು ಮನೆಗೆ ತಂದರೆ ಅಥವಾ ಅಂತಹ ತೆಂಗಿನಕಾಯಿಯನ್ನು ಮನೆಯಲ್ಲಿಟ್ಟರೆ ಶೀಘ್ರವೇ ಅವಳು ಸಂತೋಷಪಡುತ್ತಾಳೆ. ಹಾಗಾಗಿ ಈ ಬಾರಿ ವರಮಹಾಲಕ್ಷ್ಮಿ ಹಬ್ಬದಂದು ಚಿಕ್ಕ ತೆಂಗಿನಕಾಯಿಯನ್ನು ಮನೆಗೆ ತೆಗೆದುಕೊಂಡು ಹೋಗುವುದನ್ನು ಮರೆಯಬೇಡಿ.
2. ಲಕ್ಷ್ಮಿ ಚಿಪ್ಪುಗಳು: (Lakshmi Shells)
ಅರಿಶಿನ ಬಣ್ಣದ ಲಕ್ಷ್ಮಿ ಚಿಪ್ಪುಗಳು ಅಂದರೆ ಲಕ್ಷ್ಮಿ ದೇವಿಗೆ ಪ್ರಿಯವಾದವುಗಳಲ್ಲಿ ಒಂದಾಗಿದೆ. ವರಮಹಾಲಕ್ಷ್ಮಿಯ ದಿನದಂದು ಲಕ್ಷ್ಮಿ ದೇವಿಯನ್ನು ಪೂಜಿಸುವಾಗ ಈ ಲಕ್ಷ್ಮಿ ಚಿಪ್ಪುಗಳನ್ನು ಲಕ್ಷ್ಮಿ ದೇವಿಯ ಕೃಪೆಗಾಗಿ ಅರ್ಪಿಸಬೇಕು. ಈ ದಿನ ಲಕ್ಷ್ಮಿ ದೇವಿಯನ್ನು ಪೂಜಿಸಿದ ನಂತರ 11 ಲಕ್ಷ್ಮಿ ಚಿಪ್ಪುಗಳನ್ನು ಹಳದಿ ಬಟ್ಟೆಯಲ್ಲಿ ಕಟ್ಟಿ ಮತ್ತು ನಿಮ್ಮ ಮನೆಯ ಉತ್ತರ ಭಾಗದಲ್ಲಿ ಇರಿಸಿ. ಇದರಿಂದ ಲಕ್ಷ್ಮೀ ದೇವಿಯ ಆಶೀರ್ವಾದ ಸಿಗಲಿದೆ.
3. ಶಂಖ:
ಸಮುದ್ರ ಮಂಥನದ ಸಮಯದಲ್ಲಿ ಲಕ್ಷ್ಮಿ ದೇವಿಯೊಡನೆ ಕಾಣಿಸಿಕೊಂಡ 14 ಪವಿತ್ರ ರತ್ನಗಳಲ್ಲಿ ಇದು ಕೂಡ ಒಂದಾಗಿದೆ. ಇದನ್ನು ಲಕ್ಷ್ಮಿ ದೇವಿಯ ನೆಚ್ಚಿನ ವಸ್ತುವೆಂದು ಪರಿಗಣಿಸಲಾಗಿದೆ. ಶಾಸ್ತ್ರಗಳಲ್ಲಿ ದಕ್ಷಿಣಾವರ್ತಿ ಶಂಖವನ್ನು ಲಕ್ಷ್ಮಿ ದೇವಿಯ ಸಹೋದರ ಎಂದು ಹೇಳಲಾಗುತ್ತದೆ. ಮನೆಯಲ್ಲಿ ಈ ಶಂಖವನ್ನು ಪೂಜಿಸುವುದರಿಂದ ಲಕ್ಷ್ಮಿ ದೇವಿಯ ಆಶೀರ್ವಾದ ಮತ್ತು ವಿಷ್ಣುವಿನ ಆಶೀರ್ವಾದವನ್ನು ಪಡೆಯಬಹುದು ವಿಷ್ಣು ಪುರಾಣದ ಪ್ರಕಾರ ಲಕ್ಷ್ಮಿ ದೇವಿಯು ದಕ್ಷಿಣಾವರ್ತಿ ಶಂಖದಲ್ಲಿ ನೆಲೆಸಿದ್ದಾಳೆ. ಇದರಿಂದ ಮನೆಯಲ್ಲಿ ಈ ಶಂಖವನ್ನು ಪೂಜಿಸಿದರೆ ಆ ಮನೆಯಲ್ಲಿ ಎಂದೂ ಹಣದ ಕೊರತೆ ಉಂಟಾಗುವುದಿಲ್ಲ ಎಂಬ ನಂಬಿಕೆ ಇದೆ.

4. ಪಾರಿಜಾತ ಹೂಗಳು:
ಸಮುದ್ರ ಮಂಥನದ ಸಮಯದಲ್ಲಿ ಕಂಡುಬರುವ 14 ರತ್ನಗಳಲ್ಲಿ ಪಾರಿಜಾತ ಹೂವುಗಳು ಒಂದಾಗಿದೆ. ಈ ಪವಿತ್ರ ಸಸ್ಯವು ಅವುಗಳಲ್ಲಿ ಒಂದಾಗಿದೆ. ಇಂದ್ರನು ಈ ಗಿಡವನ್ನು ಸ್ವರ್ಗಲೋಕಕ್ಕೆ ತೆಗೆದುಕೊಂಡು ಹೋಗಿ ನೆಟ್ಟನು. ಈ ಸಸ್ಯ ಲಕ್ಷ್ಮಿ ದೇವಿಗೆ ಅತ್ಯಂತ ಪ್ರಿಯವಾದದ್ದು ಆಗಿದೆ. ಇಂದಿಗೂ ಈ ಸಸ್ಯವು ಭೂಮಿಯ ಮೇಲೆ ವರದಾನವಾಗಿದೆ.
ಈ ವಿಶಿಷ್ಟ ಸಸ್ಯವನ್ನು ಮನೆಯಲ್ಲಿ ನೆಡುವುದರಿಂದ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ. ವರಮಹಾಲಕ್ಷ್ಮಿ ವ್ರತದ ದಿನದಂದು ಮೇಲಿನ 4 ವಸ್ತುಗಳಲ್ಲಿ ಯಾವುದಾದರೂ ಒಂದನ್ನು ಮನೆಗೆ ತರಲು ಪ್ರಯತ್ನಿಸಿ. ಇವುಗಳನ್ನು ಮನೆಗೆ ತಂದರೆ ಆ ಮನೆಯಲ್ಲಿ ಯಾವತ್ತೂ ಹಣದ ಕೊರತೆಯಾಗುವುದಿಲ್ಲ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications