ಗಡಿ ಜಿಲ್ಲೆಯಲ್ಲಿ "ಹೊನ್ನೇರು" ಸಂಭ್ರಮ, ಏನಿದು? ಯುಗಾದಿಗೂ ಇದಕ್ಕೂ ಏನು ಸಂಬಂಧ?-ಮಾಹಿತಿ
ಚಾಮರಾಜನಗರ, ಏಪ್ರಿಲ್, 09: ಇಂದು ಉಳುಮೆ ಮಾಡಲು ನೇಗಿಲು ಬಿಟ್ಟು ಟ್ರ್ಯಾಕ್ಟರ್ಗಳನ್ನು ಹೆಚ್ಚು ಜನರು ಅವಲಂಬಿಸಿದ್ದಾರೆ. ಇವತ್ತಿನ ದಿನಗಳಲ್ಲಿ ಯಾರ ಮನೆಯಲ್ಲೂ ಎತ್ತುಗಳು ಮತ್ತು ಎತ್ತಿನ ಗಾಡಿಗಳು ಇದ್ದಿಯೋ ಅವರು ಯುಗಾದಿ ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡುತ್ತಾರೆ. ಇಂದು ಗಡಿಜಿಲ್ಲೆ ಚಾಮರಾಜನಗರದ ಬಹುಪಾಲು ಹಳ್ಳಿಗಳಲ್ಲಿ ಯುಗಾದಿ ಹಬ್ಬವನ್ನು ಹೊಸ ವರ್ಷದ ಜೊತೆಗೆ ಕೃಷಿ ಚಟುವಟಿಕೆಗಳನ್ನು ಆರಂಭ ಮಾಡುತ್ತಾರೆ. ಈ ಮೂಲಕ 'ಹೊನ್ನೇರು' ಕಟ್ಟುವ ಸಂಪ್ರದಾಯವನ್ನು ಇಂದಿಗೂ ಆಚರಿಸಿಕೊಂಡು ಬರಲಾಗುತ್ತಿದೆ.
ಇಂದು ಕೂಡ ಯುಗಾದಿ ಹಬ್ಬದ ದಿನ ಹೊನ್ನೇರಿನ ಸಂಭ್ರಮ ಜಿಲ್ಲೆಯಾದ್ಯಂತ ಕಾಣಿಸಿಕೊಂಡಿದೆ. ಯುಗಾದಿ ಬಂತೆಂದರೆ ರೈತರ ಕೃಷಿ ಚಟುವಟಿಕೆಗಳಿಗೆ ಜೀವ ಬಂತು ಎಂದೇ ಅರ್ಥ. ಹೀಗಾಗಿಯೇ ಚಾಮರಾಜನಗರ ಜಿಲ್ಲೆಯ ದೊಡ್ಡರಾಯ ಪೇಟೆ, ಹಂಗಳ, ಹೆಬ್ಬಸೂರು, ಜ್ಯೋತಿಗೌಡನಪುರ, ಹೊನ್ನೂರು, ಹನೂರು ತಾಲ್ಲೂಕಿನ ರಾಮಾಪುರ, ಪೊನ್ನಾಚಿ ಮೊದಲಾದ ಗ್ರಾಮಗಳಲ್ಲಿ ಹೊನ್ನೇರು ಕಟ್ಟುವ ಸಂಪ್ರದಾಯ ಇಂದಿಗೂ ಆಚರಿಸಿಕೊಂಡು ಬರಲಾಗುತ್ತಿದೆ.

ಏನಿದು ಹೊನ್ನೇರು?: ಯುಗಾದಿ ಶುರುವಾಗುತ್ತಿದ್ದಂತೆ ಮಳೆ ಬರಲಿದ್ದು, ಕೃಷಿ ಚಟುವಟಿಕೆಗಳು ಆರಂಭವಾಗುತ್ತವೆ. ಎತ್ತುಗಳು ಮತ್ತು ಗಾಡಿಗೆ ಹೊಂಬಾಳೆ ಕಟ್ಟಿ ಪೂಜೆ ಸಲ್ಲಿಸಿ ಗೊಬ್ಬರವನ್ನು ಜಮೀನುಗಳಿಗೆ ಸಿಂಪಡಿಸುವ ಸಂಪ್ರದಾಯಕ್ಕೆ ಹೊನ್ನೇರು ಎಂದು ಕರೆಯುತ್ತಾರೆ. 'ಹೊನ್ನೇರು' ಅನ್ನದಾತರ ಚಿನ್ನದ ತೇರಾಗಿದೆ.
ಚಾಮರಾಜನಗರ ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಈ ಸಂಪ್ರದಾಯವನ್ನು ಇಂದಿಗೂ ಅದ್ಧೂರಿಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ನೂತನ ವರ್ಷದ ಮೊದಲ ದಿನ ರೈತರು ಆ ವರ್ಷದ ಕೃಷಿ ಚಟುವಟಿಕೆ ವಿಧಿವತ್ತಾಗಿ ಅಡಿಯಿಡುವ ಸಂಪ್ರದಾಯ ತಲ-ತಲಾಂತರದಿಂದ ನಡೆದುಕೊಂಡು ಬಂದಿದ್ದು, ಇಂದಿಗೂ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಈ ವಿಶೇಷ ಆಚರಣೆ ಜೀವಂತವಾಗಿದೆ.
ಎತ್ತುಗಳಿಗೆ ಅಲಂಕಾರ: ಹೊನ್ನೇರಿನ ವಿಶೇಷತೆ ಎಂದರೆ ಸೂರ್ಯೋದಯಕ್ಕೂ ಮುನ್ನ ರೈತರು ತಮ್ಮ ಎತ್ತುಗಳನ್ನು ತೊಳೆಯುತ್ತಾರೆ. ಬಳಿಕ ಎತ್ತುಗಳ ಕೊಂಬುಗಳಿಗೆ ಹೊಂಬಾಳೆ, ಕೊರಳಿಗೆ ಬಿಳಿಗಣಗಲೆ ಹೂವು, ಮಂಡೆ ಹುರಿ ಕಟ್ಟಿ ಅಲಂಕರಿಸುತ್ತಾರೆ.
ಎತ್ತಿನ ಗಾಡಿಗಳಿಗೂ ಸಿಂಗಾರ: ಎತ್ತಿನ ಗಾಡಿಗಳನ್ನು ಸಹ ಬಣ್ಣಗಳಿಂದ ಶೃಂಗರಿಸಿ, ಮಾವಿನ ಎಲೆ, ಬಾಳೆ ಕಂದು, ಹೊಂಬಾಳೆಗಳನ್ನು ಕಟ್ಟಿ ಶೃಂಗರಿಸಿದ ಎತ್ತಿನ ಗಾಡಿಗಳಿಗೆ ಸಾಂಕೇತಿಕವಾಗಿ ಒಂದಿಷ್ಟು ಕೊಟ್ಟಿಗೆ ಗೊಬ್ಬರ ತುಂಬುತ್ತಾರೆ. ಬಳಿಕ ನೊಗ ಹೂಡಿದ ಎತ್ತುಗಳು ಹಾಗೂ ಎತ್ತಿನ ಗಾಡಿಗಳನ್ನು ಮಂಗಳವಾದ್ಯಗಳೊಂದಿಗೆ ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುತ್ತದೆ.
ಹೊನ್ನೇರುಗಳ ಮೆರವಣಿಗೆ ಸಾಗುತ್ತಿದ್ದಾಗ ಮುತ್ತೈದೆಯರು ಹೊನ್ನೇರಿಗೆ ಪೂಜೆ ಸಲ್ಲಿಸುತ್ತಾರೆ. ನಂತರ ರೈತರು ತಮ್ಮ ಜಮೀನುಗಳಲ್ಲಿ ಗೊಬ್ಬರ ಸುರಿದು, ಸಾಂಕೇತಿಕವಾಗಿ ಉಳುಮೆ ಮಾಡಿ ಕೃಷಿ ಚಟುವಟಿಕೆಗಳ ಆರಂಭಕ್ಕೆ ಮುನ್ನುಡಿ ಬರೆಯುತ್ತಾರೆ.
ಹಬ್ಬಕ್ಕೆ ಭೂರಿ ಭೋಜನ: ಗೊಬ್ಬರ ಸಿಂಪಡಿಸಿದ ಬಳಿಕ ಮನೆಗೆ ಹಿಂತಿರುಗುವ ರೈತರು ಮನೆಯಲ್ಲಿ ಇಡ್ಲಿ, ಹೋಳಿಗೆ ಹಾಗೂ ಪಾಯಸದ ಭೋಜನ ಸವಿದು ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸುತ್ತಾರೆ. ಹೊನ್ನೇರು ನಿಜಕ್ಕೂ ಅನ್ನದಾತನ ರಥವೇ ಆಗಿದ್ದು, ಇಡೀ ಕುಟುಂಬದವರು ಹೊಸ ಬಟ್ಟೆ ಧರಿಸಿ ಚಿಣ್ಣರನ್ನು ಕೃಷಿ ಚಟುವಟಿಕೆಯಲ್ಲಿ ತೊಡಗುತ್ತಾರೆ.
ರೈತನ ಅವಿಭಾಜ್ಯ ಅಂಗವಾದ ಜೋಡೆತ್ತಿಗೆ ಇಂದು ವಿಶೇಷ ಸ್ಥಾನ ಸಿಗಲಿದ್ದು, ಅದಕ್ಕೆ ಮಕ್ಕಳ ಕೈಯಿಂದ ಪೂಜೆ ಸಲ್ಲಿಸುವುದು ವಿಶೇಷ. ವರ್ಷದ ಮೊದಲ ದಿನವಾದ ಇಂದು ಜಿಲ್ಲೆಯ ರೈತರು ವಿಧಿವತ್ತಾಗಿ ಕೃಷಿಗೆ ಅಡ್ಡಿಯಿಟ್ಟಿದ್ದಾರೆ. ಈ ಮೂಲಕ ಹೊನ್ನೇರು ರೈತರ ಯುಗಾದಿ ಸಂಭ್ರಮವನ್ನು ಹೆಚ್ಚಿಸಿದೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ












Click it and Unblock the Notifications