Makara Sankranti 2024: ಮಕರ ಸಂಕ್ರಾಂತಿಯಂದು ಗ್ರಹದೋಷದಿಂದ ಮುಕ್ತರಾಗುವುದು ಹೇಗೆ?
ಗ್ರಹಗಳ ರಾಜ ಸೂರ್ಯ ದೇವ ಮಕರ ರಾಶಿಯನ್ನು ಪ್ರವೇಶಿಸಿದಾಗ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತದೆ. ಇದು ಹಿಂದೂ ಧರ್ಮದ ಪ್ರಮುಖ ಹಬ್ಬವಾಗಿದೆ. ಈ ದಿನ ಸೂರ್ಯ ದೇವರನ್ನು ಪೂಜಿಸಲಾಗುತ್ತದೆ. ಮಕರ ಸಂಕ್ರಾಂತಿಯ ದಿನದಂದು ಸೂರ್ಯ ದೇವರನ್ನು ಪೂಜಿಸುವುದರಿಂದ ಎಲ್ಲಾ ತೊಂದರೆಗಳು ದೂರವಾಗಿ ಮನೆಯಲ್ಲಿ ಸಮೃದ್ಧಿ ಮತ್ತು ಸಂತೋಷ ನೆಲೆಸುತ್ತದೆ.
ಸೂರ್ಯನ ಉತ್ತರಾಯಣ ಚಲನೆಯು ಇಂದಿನಿಂದ ಪ್ರಾರಂಭವಾಗುತ್ತದೆ. ಮಕರ ಸಂಕ್ರಾಂತಿಯ ದಿನದಿಂದ ಕರ್ಮಗಳು ಕೊನೆಗೊಳ್ಳುತ್ತವೆ. ಮದುವೆಯಂತಹ ಶುಭ ಕಾರ್ಯಗಳ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕಲಾಗುತ್ತದೆ.

ಈ ವರ್ಷ ಮಕರ ಸಂಕ್ರಾಂತಿ ಹಬ್ಬವನ್ನು ಜನವರಿ 15 ರಂದು ಆಚರಿಸಲಾಗುತ್ತದೆ. ಸೂರ್ಯ ದೇವನು ಧನು ರಾಶಿಯನ್ನು ತೊರೆದು ಮಕರ ರಾಶಿಯನ್ನು ಪ್ರವೇಶಿಸುತ್ತಾನೆಯೇ ಎಂಬುದರ ಮೇಲೆ ಇದು ಅವಲಂಬಿತವಾಗಿರುತ್ತದೆ.
ಮಕರ ಸಂಕ್ರಾಂತಿ ದಿನಾಂಕ ಮತ್ತು ಮಂಗಳಕರ ಸಮಯ
ಜ್ಯೋತಿಷ್ಯಶಾಸ್ತ್ರದ ಲೆಕ್ಕಾಚಾರದ ಪ್ರಕಾರ, ಈ ವರ್ಷ ಜನವರಿ 15 ರಂದು, ಸೂರ್ಯ ದೇವ ಧನು ರಾಶಿಯಿಂದ ಹೊರಬಂದು 02:54 ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಆದ್ದರಿಂದ ಜನವರಿ 15ರಂದು ಮಕರ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿಮ ಶುಭ ಮುಹೂರ್ತ ಈ ಕೆಳಗಿನಂತಿರುತ್ತದೆ.
ಮಕರ ಸಂಕ್ರಾಂತಿ ಪುಣ್ಯಕಾಲ - 07:15 ರಿಂದ 06:21 ರವರೆಗೆ
ಮಕರ ಸಂಕ್ರಾಂತಿ ಮಹಾ ಪುಣ್ಯಕಾಲ - 07:15 ರಿಂದ 09:06 ರವರೆಗೆ
ಮಕರ ಸಂಕ್ರಾಂತಿಯಂದು ಸ್ನಾನ ಮತ್ತು ದಾನದ ಮಹತ್ವ

ಮಕರ ಸಂಕ್ರಾಂತಿಯಂದು ಪವಿತ್ರ ನದಿಯಲ್ಲಿ ಸ್ನಾನ ಮಾಡಿ ದಾನ ಮಾಡುವ ಸಂಪ್ರದಾಯವಿದೆ. ಈ ದಿನ ಗಂಗಾನದಿಯಲ್ಲಿ ಸ್ನಾನ ಮಾಡಿದ ನಂತರ ದಾನ ಮಾಡುವುದರಿಂದ ನಮ್ಮ ಇಹಲೋಕ ಮತ್ತು ಮುಂದಿನ ಪರಲೋಕ ಎರಡಲ್ಲೂ ದೇವರ ಮೆಚ್ಚುಗೆಯನ್ನು ಪಡೆಯಬಹುದು. ಅದಲ್ಲದೆ ಹಿಂದಿನ ಜನ್ಮದ ದುಷ್ಕೃತ್ಯಗಳಿಂದ ಮುಕ್ತಿ ಪಡೆದು ಜೀವನ ಸುಖಮಯವಾಗುತ್ತದೆ. ಈ ದಿನ ಗಂಗಾ ಸ್ನಾನ ಮಾಡುವುದರಿಂದ 10 ಅಶ್ವಮೇಧ ಯಾಗಗಳನ್ನು ಮಾಡಿ 1000 ಗೋವುಗಳನ್ನು ದಾನ ಮಾಡಿದಂತೆಯೇ ಪುಣ್ಯವು ದೊರೆಯುತ್ತದೆ ಎಂದು ನಂಬಲಾಗಿದೆ.
ಈ ವಸ್ತುಗಳನ್ನು ದಾನ ಮಾಡುವುದು ಮಂಗಳಕರ
ಮಕರ ಸಂಕ್ರಾಂತಿಯ ದಿನದಂದು ಶುಭ ಮುಹೂರ್ತದಲ್ಲಿ ಸ್ನಾನ ಮಾಡಿ ಪಾದರಕ್ಷೆ, ಅನ್ನ, ಎಳ್ಳು, ಬೆಲ್ಲ, ಬೆಚ್ಚನೆಯ ಬಟ್ಟೆ, ಹೊದಿಕೆಗಳನ್ನು ದಾನ ಮಾಡಿದರೆ ಶನಿ ಮತ್ತು ಸೂರ್ಯದೇವರ ಆಶೀರ್ವಾದ ಸಿಗುತ್ತದೆ. ಈ ದಿನದಂದು ಮೊದಲು ಯಾವುದೇ ಪವಿತ್ರ ನದಿಯಲ್ಲಿ ಸ್ನಾನ ಮಾಡಬೇಕು. ನಿಮಗೆ ಗಂಗಾ ಸ್ನಾನ ಮಾಡಲು ಸಾಧ್ಯವಾಗದಿದ್ದರೆ, ಸ್ನಾನದ ನೀರಿನಲ್ಲಿ ಎಳ್ಳು ಮತ್ತು ಗಂಗಾಜಲವನ್ನು ಸ್ವಲ್ಪ ಬೆರೆಸಿ ಮನೆಯಲ್ಲಿ ಸ್ನಾನ ಮಾಡಿ. ಇದರ ನಂತರ ದಾನ ಮಾಡಿ. ಇದರಿಂದ ಗ್ರಹದೋಷ ದೂರವಾಗುತ್ತದೆ.
ಈ ರೀತಿ ಸೂರ್ಯನಿಗೆ ನೀರನ್ನು ಅರ್ಪಿಸಿ
ಮಕರ ಸಂಕ್ರಾಂತಿಯಂದು ಸ್ನಾನದ ನಂತರ ಕಪ್ಪು ಎಳ್ಳು, ಬೆಲ್ಲ, ಕೆಂಪು ಚಂದನ, ಕೆಂಪು ಹೂವುಗಳು ಮತ್ತು ಅಕ್ಷತೆಯನ್ನು ಬೆರೆಸಿದ ನೀರನ್ನು ಸೂರ್ಯನಿಗೆ ಅರ್ಪಿಸಿ. ಹಾಗೆಯೇ ಸೂರ್ಯ ದೇವರ ಮಂತ್ರಗಳನ್ನು ಪಠಿಸಿ. ಇದರಿಂದ ಜೀವನದಲ್ಲಿ ಬರುವ ಎಲ್ಲಾ ಕಷ್ಟಗಳು ದೂರವಾಗುತ್ತವೆ. ಜೊತೆಗೆ ಮನೆಯಲ್ಲಿ ಸುಖ: ಶಾಂತಿ ನೆಮ್ಮದಿ ನೆಲೆಸಲಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications