1000 ರುಪಾಯಿ ನೋಟು ಮತ್ತೆ ಚಲಾವಣೆಗೆ? ಪಿ. ಚಿದಂಬರಂ ಹೇಳಿದ್ದಿಷ್ಟು
ಭಾರತೀಯ ರಿಸರ್ವ್ ಬ್ಯಾಂಕ್ 2000 ರುಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದಿದೆ. ಆರ್ಬಿಐ ಶುಕ್ರವಾರ ಈ ಬಗ್ಗೆ ಪ್ರಕಟಣೆ ನೀಡಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ₹2000 ಮುಖಬೆಲೆಯ ನೋಟುಗಳನ್ನು ನೀಡುವುದನ್ನು ನಿಲ್ಲಿಸುವಂತೆ ಆರ್ಬಿಐ ಬ್ಯಾಂಕ್ಗಳಿಗೆ ಸೂಚಿಸಿದೆ.
ಭಾರತೀಯ ರಿಸರ್ವ್ ಬ್ಯಾಂಕ್ನ ಈ ಕ್ರಮದ ಬಗ್ಗೆ ಕೇಂದ್ರದ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಪ್ರತಿಕ್ರಿಯೆ ನೀಡಿದ್ದು, ಇದು ಅನಿರೀಕ್ಷಿತವೇನಲ್ಲ ಎಂದು ಹೇಳಿದ್ದಾರೆ. ನಾವು ನಿರೀಕ್ಷೆ ಮಾಡಿದಂತೆಯೇ ಕೇಂದ್ರ ಸರ್ಕಾರ/ಆರ್ಬಿಐ ನಡೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.

ಟ್ವೀಟ್ ಮಾಡಿರುವ ಅವರು, "ನಿರೀಕ್ಷೆಯಂತೆ, ಸರ್ಕಾರ/ಆರ್ಬಿಐ 2000 ರೂ ನೋಟನ್ನು ಹಿಂಪಡೆದಿದೆ ಮತ್ತು ನೋಟುಗಳನ್ನು ಬದಲಾಯಿಸಲು ಸೆಪ್ಟೆಂಬರ್ 30 ರವರೆಗೆ ಸಮಯ ನೀಡಿದೆ. 2000 ರೂಪಾಯಿ ನೋಟು ಅಷ್ಟೇನೂ ಜನಪ್ರಿಯ ವಿನಿಮಯ ಮಾಧ್ಯಮವಲ್ಲ. ನಾವು ಇದನ್ನು ನವೆಂಬರ್ 2016 ರಲ್ಲಿ ಹೇಳಿದ್ದೇವೆ, ಈಗ ನಾವು ಹೇಳಿದ್ದು ಸರಿ ಎಂದು ಸಾಬೀತಾಗಿದೆ" ಎಂದು ಹೇಳಿದ್ದಾರೆ.
As expected, the government/RBI have withdrawn the Rs 2000 note and given time until September 30 to exchange the notes
— P. Chidambaram (@PChidambaram_IN) May 19, 2023
The Rs 2000 note is hardly a popular medium of exchange. We said this in November 2016 and we have been proved correct
The Rs 2000 note was a band-aid to…
1000 ರುಪಾಯಿ ನೋಟು ಮತ್ತೆ ಚಲಾವಣೆಗೆ?
"ಜನಪ್ರಿಯ ಮತ್ತು ವ್ಯಾಪಕವಾಗಿ ವಿನಿಮಯವಾಗುತ್ತಿದ್ದ 500 ಮತ್ತು 1000 ರೂಪಾಯಿ ನೋಟು ಅಮಾನ್ಯೀಕರಣದ ಮೂರ್ಖತನದ ನಿರ್ಧಾರವನ್ನು ಮುಚ್ಚಿಹಾಕಲು 2000 ರೂಪಾಯಿ ನೋಟು ಬ್ಯಾಂಡ್-ಆಯ್ಡ್ ಆಗಿತ್ತು. ನೋಟು ಅಮಾನ್ಯೀಕರಣದ ಕೆಲವು ವಾರಗಳ ನಂತರ, ಸರ್ಕಾರ/ಆರ್ಬಿಐ 500 ರೂ ಮುಖಬೆಲೆಯ ನೋಟನ್ನು ಪುನಃ ಪರಿಚಯಿಸುವಂತೆ ಒತ್ತಾಯಿಸಲಾಯಿತು" ಎಂದು ಹೇಳಿದ್ದಾರೆ.
ಸರ್ಕಾರ/ ಆರ್ಬಿಐ 1000 ರುಪಾಯಿ ಮುಖಬೆಲೆಯ ನೋಟುಗಳನ್ನು ಮತ್ತೆ ಪರಿಚಯಿಸಿದರೆ ಕೂಡ ನನಗೆ ಅಚ್ಚರಿಯಾಗುವುದಿಲ್ಲ. ನೋಟು ಅಮಾನ್ಯೀಕರಣ ಒಂದು ಪೂರ್ಣ ಸುತ್ತು ಹಾಕಿಕೊಂಡು ಬಂದಿದೆ! ಎಂದು ಟ್ವೀಟ್ ಮಾಡಿದ್ದಾರೆ.
ಈಗ ರೂ.2000 ಮೌಲ್ಯದ ನೋಟುಗಳನ್ನು ನಿಷೇಧ ಮಾಡಿರುವ ಪ್ರಧಾನಿ @narendramodi ಯವರು, 2016ರಲ್ಲಿ ರೂ.500 ಮತ್ತು ರೂ.1000 ನೋಟುಗಳನ್ನು ನಿಷೇಧ ಮಾಡಿದಾಗ ತಿಳಿಸಿದ್ದ ಯಾವ ಉದ್ದೇಶಗಳು ಈಡೇರಿವೆ ಎನ್ನುವುದನ್ನು ದೇಶದ ಜನರಿಗೆ ಮೊದಲು ತಿಳಿಸಬೇಕು.
— Siddaramaiah (@siddaramaiah) May 19, 2023
1/2
ನೋಟು ಹಿಂಪಡೆದಿದ್ದಕ್ಕೆ ಸಿದ್ಧರಾಮಯ್ಯ ಟೀಕೆ
ನೋಟು ಹಿಂಪಡೆದಿರುವುದಕ್ಕೆ ಕರ್ನಾಟಕ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಟೀಕೆ ಮಾಡಿದ್ದಾರೆ. "ಈಗ ರೂ.2000 ಮೌಲ್ಯದ ನೋಟುಗಳನ್ನು ನಿಷೇಧ ಮಾಡಿರುವ ಪ್ರಧಾನಿ
ನರೇಂದ್ರ ಮೋದಿಯವರು, 2016ರಲ್ಲಿ ರೂ.500 ಮತ್ತು ರೂ.1000 ನೋಟುಗಳನ್ನು ನಿಷೇಧ ಮಾಡಿದಾಗ ತಿಳಿಸಿದ್ದ ಯಾವ ಉದ್ದೇಶಗಳು ಈಡೇರಿವೆ ಎನ್ನುವುದನ್ನು ದೇಶದ ಜನರಿಗೆ ಮೊದಲು ತಿಳಿಸಬೇಕು." ಎಂದು ಒತ್ತಾಯಿಸಿದ್ದಾರೆ
"ಈಗ ರೂ.2000 ಮೌಲ್ಯದ ನೋಟು ನಿಷೇಧಿಸುವುದಿದ್ದರೆ 2016ರಲ್ಲಿ ಅದನ್ನು ಚಲಾವಣೆಗೆ ತಂದದ್ದು ಯಾಕೆ? ಯಾವ ಕಾರಣಕ್ಕಾಗಿ ಈಗ ಇದನ್ನು ನಿಷೇಧಿಸಲಾಗಿದೆ? ಕಪ್ಪು ಹಣವನ್ನು ನಿಯಂತ್ರಿಸುವ ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ." ಎಂದು ಟೀಕಿಸಿದ್ದಾರೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications