Rahul Gandhi: ಇಂಡಿಯಾ ಒಕ್ಕೂಟ 295 ಸ್ಥಾನಗಳನ್ನು ಗೆಲ್ಲಲಿದೆ; ರಾಹುಲ್ ಗಾಂಧಿಗೆ ಏಕೆ ಇಷ್ಟು ನಂಬಿಕೆ?
ನವದೆಹಲಿ, ಜೂನ್. 03: ಲೋಕಸಭಾ ಚುನಾವಣೆಯ ಏಳನೇ ಹಂತದ ಮತದಾನ ಮುಗಿದ ತಕ್ಷಣ ಎಕ್ಸಿಟ್ ಪೋಲ್ ಫಲಿತಾಂಶಗಳು ಬಿಡುಗಡೆಯಾಗಿವೆ. ಬಹುತೇಕ ಎಲ್ಲಾ ಸಮೀಕ್ಷೆಗಳು ಕೂಡ ಈ ಬಾರಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿ ಕೂಟವೇ ಆಡಳಿತಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದಿವೆ. ಆದರೆ, ಕಾಂಗ್ರೆಸ್ ನಾಯಕ ರಾಹು್ ಗಾಂಧಿ ಇಂಡಿಯಾ ಒಕ್ಕೂಟ 295 ಲೋಕಸಭಾ ಸ್ಥಾನಗಳನ್ನು ಗೆಲ್ಲುತ್ತದೆ ಎಂಬ ಗಟ್ಟಿ ವಿಶ್ವಾಸದಲ್ಲಿದ್ದಾರೆ.
ಎಕ್ಸಿಟ್ ಪೋಲ್ ಸಮೀಕ್ಷೆಗಳನ್ನು ಬಿಜೆಪಿ ಬಿಟ್ಟು ಇತರ ಎಲ್ಲಾ ಪಕ್ಷಗಳು ತಿರಸ್ಕರಿಸಿವೆ. ಹಾಗೆಯೇ ಕಾಂಗ್ರೆಸ್ ನಾಯಕ ಮತ್ತು ಸಂಸದ ರಾಹುಲ್ ಗಾಂಧಿ ಕೂಡ ಈ ಎಕ್ಸಟ್ ಪೋಲ್ಗಳನ್ನು "ಮೋದಿ ಮಾಧ್ಯಮ ಸಮೀಕ್ಷೆ" ಎಂದು ಕರೆದಿದ್ದಾರೆ. ಜೊತೆಗೆ ಇಂಡಿಯಾ ಬ್ಲಾಕ್ 295 ಲೋಕಸಭಾ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿಗೆ ಜೈ ಎಂದ ಎಕ್ಸಿಟ್ ಪೋಲ್ಗಳು
ಈಗಷ್ಟೇ ಮುಗಿದಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಎಕ್ಸಿಟ್ ಪೋಲ್ಗಳು ಹೇಳಿವೆ. ಇದರ ಬೆನ್ನಲ್ಲೇ ಮಾತನಾಡಿರುವ ರಾಹುಲ್ ಗಾಂಧಿ, "ಇದು ಮೋದಿ ಸಮೀಕ್ಷೆ... ಇದನ್ನು ಎಕ್ಸಿಟ್ ಪೋಲ್ ಎನ್ನುವುದಿಲ್ಲ. ಇದನ್ನು ಮೋದಿ ಮೀಡಿಯಾ ಸಮೀಕ್ಷೆ ಎಂದು ಕರೆಯಲಾಗುತ್ತದೆ. ಇದು ಮೋದಿಜಿಯವರ ಸಮೀಕ್ಷೆ, ಅವರ ಫ್ಯಾಂಟಸಿ ಸಮೀಕ್ಷೆ. ನೀವು ಸಿದ್ದು ಮೂಸೆವಾಲಾ ಅವರ 295 ಹಾಡು ಕೇಳಿದ್ದೀರಾ..?" ಎಂದು ತಮಾಷೆ ಮಾಡಿದ್ದಾರೆ.
ಇದಕ್ಕೂ ಮುನ್ನ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಲೋಕಸಭೆ ಅಭ್ಯರ್ಥಿಗಳು, ಶಾಸಕಾಂಗ ಪಕ್ಷದ ನಾಯಕರು ಮತ್ತು ರಾಜ್ಯ ಘಟಕದ ಅಧ್ಯಕ್ಷರೊಂದಿಗೆ ಸಭೆ ನಡೆಸಿದ್ದರು. ರಾಹುಲ್ ಗಾಂಧಿ ಅಷ್ಟೇ ಅಲ್ಲದೆ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕೂಡ ಎಕ್ಸಿಟ್ ಪೋಲ್ ಸಮೀಕ್ಷೆಯನ್ನು ತಳ್ಳಿಹಾಕಿದ್ದಾರೆ.
ಎಕ್ಸಿಟ್ ಪೋಲ ಬಿಡುಗಡೆಯಾದ ಶನಿವಾರದಂದು, ಭಾರತ ಬಣದ ಹಿರಿಯ ನಾಯಕರು ಸಬೆ ನಡೆಸಿದ್ದರು. ತಮ್ಮ ಬಣವು 272 ರ ಮೆಜಾರಿಟಿ ದಾಟುತ್ತದೆ ಎಂದು ಹೇಳಿಕೊಂಡರು. ಸಭೆಯಲ್ಲಿ ಅನೇಕ ನಾಯಕರು ದೂರದರ್ಶನ ಚಾನೆಲ್ಗಳಲ್ಲಿ ಎಕ್ಸಿಟ್ ಪೋಲ್ ಚರ್ಚೆಗಳಿಂದ ದೂರವಿರುವ ಕಾಂಗ್ರೆಸ್ ನಿರ್ಧಾರವು ತಪ್ಪು ಸಂದೇಶ ನೀಡುತ್ತಿದೆ ಎಂದು ಆರೋಪಿಸಿದ್ದರು.
ಕೊನೆಗೆ ತಮ್ಮ ವಕ್ತಾರರನ್ನು ಕಳುಹಿಸಲು ನಿರ್ಧರಿಸಿದ್ದ ಕಾಂಗ್ರೆಸ್ ಇತರೆ ಪಕ್ಷಗಳ ಜತೆ ಸಮಾಲೋಚನೆ ನಡೆಸದೆ ನಿರ್ಧಾರ ಪ್ರಕಟಿಸಿತ್ತು. ಕಾಂಗ್ರೆಸ್ ಸೋಲನ್ನು ಒಪ್ಪಿಕೊಂಡಿದೆ ಎಂದು ಬಿಜೆಪಿ ಈಗಾಗಲೇ ಹೇಳಿಕೊಂಡಿದೆ. ತರುವಾಯ, ಕಾಂಗ್ರೆಸ್ ಸೇರಿದಂತೆ ಭಾರತ ಬ್ಲಾಕ್ನ ನಾಯಕರು ಚರ್ಚೆಯಲ್ಲಿ ಭಾಗವಹಿಸುತ್ತಾರೆ ಎಂದು ಕಾಂಗ್ರೆಸ್ ಘೋಷಿಸಿತು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications