ಕೇದಾರನಾಥಸ್ವಾಮಿಗೆ ಪೂಜೆ ಆರಂಭ; ಯಾತ್ರೆ ಇನ್ನೂ ಇಲ್ಲ
ಡೆಹ್ರಾಡೂನ್, ಸೆ.11- ಹಿಂದೆಂದೂ ಕಂಡು ಕೇಳರಿಯದ ಹಿಮಾಲಯ ಸುನಾಮಿಯಲ್ಲಿ ನಲುಗಿ ಹೋಗಿದ್ದ ಪುರಾಣಪ್ರಸಿದ್ಧ ಕೇದಾರನಾಥದಲ್ಲಿ ಶುಭವಾ ಅಂತ ಮಹಾಶಿವನಿಗೆ ಇಂದು ಬುಧವಾರ ಬೆಳಗ್ಗೆ 7 ಗಂಟೆಯಿಂದ 11 ಗಂಟೆ ವರೆಗೆ ಪೂಜೆ ಪುನಸ್ಕಾರಗಳು ಮತ್ತೆ ನೆರವೇರಿದೆ.
ಉತ್ತರಾಖಂಡದ ಮುಖ್ಯಮಂತ್ರಿ ವಿಜಯ್ ಬಹುಗುಣ ಅವರೇ ಖುದ್ದು ಪೂಜಾಕೈಂಕರ್ಯದಲ್ಲಿ ಭಾಗವಹಿಸಬೇಕಿತ್ತಾದರೂ ಪ್ರತಿಕೂಲ ಹವಾಮಾನದಿಂದಾಗಿ ಅವರ ಹೆಲಿಕಾಪ್ಟರ್ ಮೇಲೇಳಲಿಲ್ಲ. ಹಾಗಾಗಿ ಕೇದಾರನಾಥಕ್ಕೆ ತೆರಳಿ ಈಶ್ವರ ಪೂಜೆಯಲ್ಲಿ ಪಾಲ್ಗೊಳ್ಳಲು ಅವರಿಗೆ ಸಾಧ್ಯವಾಗಿಲ್ಲ.
ಉತ್ತರಖಂಡದಲ್ಲಿ ಸುರಿದ ಮಹಾಮಳೆಯಿಂದ ತೀರ್ಥಯಾತ್ರಿಗಳ ಬದುಕಷ್ಟೇ ಅಲ್ಲ ಸ್ಥಳೀಯರ ಮನೆಮಠ ಅಲ್ಲದೆ ಪವಿತ್ರ ಕೇದಾರನಾಥ ದೇಗುಲಕ್ಕೇ ಭಾರಿ ಧಕ್ಕೆಯೊದಗಿದ್ದ ಕಾರಣ 86 ದಿನಗಳ ಬಳಿಕ (ಜೂನ್ 16ರ ನಂತರ) ಕೇದಾರನಾಥ ದೇವಾಲಯದಲ್ಲಿ ಪೂಜೆ ಮತ್ತು ಪ್ರಾರ್ಥನಾ ಕಾರ್ಯಗಳು ಬುಧವಾರದಿಂದ ಪುನಾರಂಭಗೊಂಡಿದೆ.

ಪೂಜೆ-ಪ್ರಾರ್ಥನೆಯಷ್ಟೇ; ತೀರ್ಥಯಾತ್ರೆ ಇನ್ನೂ ಇಲ್ಲ
ಆದರೆ ಗಮನಿಸಿ ಕೇದಾರನಾಥದಲ್ಲಿ ಪೂಜೆ-ಪ್ರಾರ್ಥನೆ ಕಾರ್ಯಗಳಷ್ಟೇ ಆರಂಭಗೊಳ್ಳಲಿದ್ದು, ರಸ್ತೆ ಸಹಿತ ಮೂಲಸೌಕರ್ಯಗಳೆಲ್ಲವೂ ತೀರಾ ಹಾನಿಗೀಡಾಗಿರುವುದರಿಂದ, ಭಕ್ತರಿಗೆ ದೇವಸ್ಥಾನಕ್ಕೆ ಅವಕಾಶ ಇರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದಿನಿಂದ ಪುನರಾರಂಭವಾಗುವ ಪೂಜೆ ಇನ್ನು ಮುಂದೆ ನಿರಂತರವಾಗಿ ನೆರವೇರಲಿದೆ. 24 ಮಂದಿ ಅರ್ಚಕರು ಸಹಾಯಕ ಸಿಬ್ಬಂದಿ ಈ ಪೂಜಾ ಕೈಂಕರ್ಯಗಳನ್ನು ಸತತವಾಗಿ ನೆರವೇರಿಸಲಿದೆ.

24 ಮಂದಿ ತಂಡದಿಂದ ವಿಜೃಂಭಣೆಯ ಪೂಜೆ
ಕೇದಾರನಾಥ-ಬದರೀನಾಥ ಸಮಿತಿ ಮತ್ತು ಆಡಳಿತಾತ್ಮಕ ಅಧಿಕಾರಿಗಳ ತಂಡದ ಮೇಲ್ವಿಚಾರಣೆಯಲ್ಲಿ ಗರ್ಭಗುಡಿಯನ್ನು ಮರುನಿರ್ಮಿಸಲಾಗಿದೆ. ದೇವಸ್ಥಾನದ ಪವಿತ್ರೀಕರಣ ಹಾಗೂ ದೋಷ ಪರಿಹಾರ ಕಾರ್ಯಕ್ರಮದ ಬಳಿಕ ಅರ್ಚಕರು ಮತ್ತು ದೇವಸ್ಥಾನ ಸಮಿತಿ ಅಧಿಕಾರಿಗಳು ಸೇರಿದಂತೆ 24 ಸದಸ್ಯರ ತಂಡದ ಸಮ್ಮುಖದಲ್ಲಿ ಪೂಜಾ ಕಾರ್ಯಗಳು ವಿಜೃಂಭಣೆಯಿಂದ ಪುನಾರಂಭಗೊಳ್ಳಲಿವೆ.

ಖುದ್ದು ಮುಖ್ಯಮಂತ್ರಿ ಪೂಜೆಯಲ್ಲಿ ಭಾಗಿ
ಪೂಜಾ ಕಾರ್ಯಕ್ರಮದ ಅಂತಿಮ ಸಿದ್ಧತೆಗಾಗಿ ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕರಾದ ರಾವಲ್ ಭೀಮಾ ಶಂಕರಲಿಂಗ ಶಿವಾಚಾರ್ಯ ಅವರು ಹೆಲಿಕಾಪ್ಟರ್ ಮೂಲಕ ದೇವಾಲಯಕ್ಕೆ ಆಗಮಿಸಿದ್ದಾರೆ. ಉತ್ತರಾಖಂಡದ ಮುಖ್ಯಮಂತ್ರಿ ವಿಜಯ್ ಬಹುಗುಣ ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಪ್ರಾರ್ಥನೆಯಲ್ಲಿ ಭಾಗವಹಿಸಲಿದ್ದಾರೆ.

ಕೇದರನಾಥ ಯಾತ್ರೆ ಬಗ್ಗೆ ಸೆ 30 ಮಹತ್ವದ ಸಭೆ:
ಈ ಮಧ್ಯೆ, ಮುಖ್ಯಮಂತ್ರಿ ವಿಜಯ್ ಬಹುಗುಣ ಅವರು ಕೇದಾರನಾಥ ಸ್ವಾಮಿಯ ಭಕ್ತರಲ್ಲಿ ಉತ್ಸಾಹ ಕಡಿಮೆಯಾಗಿಲ್ಲ. ಈಗಲೂ ಕೇದಾರನಾಥ ಯಾತ್ರೆಗೆ ಭಾರಿ ಬೇಡಿಕೆಯಿದೆ. ಆದರೆ ಇಲ್ಲಿನ ಪರಿಸ್ಥಿತಿ ಆಶಾದಾಯಕವಾಗಿಲ್ಲ. ಇಲ್ಲಿನ ಹವಾಮಾನ ಮತ್ತು ground realities ಸುಧಾರಿಸುತ್ತಿದ್ದಂತೆ ಭಕ್ತರಿಗೆ ಮತ್ತೆ ಅವಕಾಶ ಕಲ್ಪಿಸಲಾಗುವುದು. ಈ ಸಂಬಂಧ ಇದೇ ಸೆಪ್ಟೆಂಬರ್ 30ಕ್ಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಭಕ್ತಾದಿಗಳಿಗೆ ಕೇದರನಾಥ ಯಾತ್ರೆ ಪುನರಾರಂಭದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಹುಗುಣರು ಭರವಸೆ ನೀಡಿದ್ದಾರೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications