ಭಟ್ಕಳನೇ ಚಿನ್ನಸ್ವಾಮಿ ಕ್ರೀಡಾಂಗಣ ಸ್ಫೋಟ ರುವಾರಿ
ಬೆಂಗಳೂರು, ಸೆ.11: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ 2010ರಲ್ಲಿ ನಡೆದ ಸ್ಫೋಟಗಳ ಹಿಂದಿನ ರುವಾರಿ ನಾನೇ ಎಂದು ಬಂಧಿತ ಉಗ್ರ ಯಾಸಿನ್ ಭಟ್ಕಳ ತಪ್ಪೊಪ್ಪಿಗೆ ನೀಡಿದ್ದಾನೆ. ಕಳೆದ 10 ದಿನಗಳಿಂದ ಯಾಸಿನ್ ಭಟ್ಕಳನ ವಿಚಾರಣೆ ತೀವ್ರಗೊಳಿಸಲಾಗಿದ್ದು, ಹೊಸ ಹೊಸ ಸಂಗತಿಗಳು ಬೆಳಕಿಗೆ ಬರುತ್ತಿದೆ.
ಏಪ್ರಿಲ್ 17, 2010ರಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ ಬಾಂಬ್ ಸ್ಫೋಟಗಳನ್ನು ಯಶಸ್ವಿಗೊಳಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದಾಗಿ ಯಾಸಿನ್ ಹೇಳಿಕೆ ನೀಡಿದ್ದಾನೆ. ಕಳೆದ ಆಗಸ್ಟ್ 28 ರಂದು ಬಂಧಿತನಾದ ಯಾಸೀನ್ ವಿಚಾರಣೆ ಸದ್ಯಕ್ಕೆ ಜಾರಿಯಲ್ಲಿದ್ದು, ದೇಶದ ಅನೇಕ ವಿಧ್ವಂಸಕ ಕೃತ್ಯಗಳ ಹಿಂದೆ ಇವನ ಕೈವಾಡ ಇರುವುದು ಸಾಬೀತಾಗಿದೆ.
ಜರ್ಮನ್ ಬೇಕರಿ ಸ್ಫೋಟ (ಫೆಬ್ರವರಿ 13, 2010) ಹಾಗೂ ಮುಂಬೈ ಸ್ಫೋಟ (ಜುಲೈ 13, 2011) ಸಂಚು ರೂಪಿಸಿದ್ದು ಕೂಡಾ ಯಾಸಿನ್ ಎಂದು ತಿಳಿದು ಬಂದಿದೆ.
2011ರಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಾಜ್ ಭಟ್ಕಳ, ಇಕ್ಬಾಲ್ ಭಟ್ಕಳ ಹಾಗೂ ಮೋಹ್ಸಿನ್ ಚೌಧರಿ ಮುಂತಾದ ಇಂಡಿಯನ್ ಮುಜಾಹಿದ್ದೀನ್ ಮುಖಂಡರ ಮೇಲೆ ಶಂಕೆ ವ್ಯಕ್ತವಾಗಿತ್ತು. ಈಗ ಯಾಸೀನ್ ಹೇಳಿಕೆ ನಂತರ ಪ್ರಕರಣದ ತನಿಖೆ ಸರಿ ದಾರಿಯಲ್ಲಿ ಸಾಗಿದೆ ಎಂಬುದು ಸ್ಪಷ್ಟವಾಗಿದೆ.

ಸ್ಫೋಟಕಗಳ ಬಗ್ಗೆ ಮಾಹಿತಿ ಇಲ್ಲ. ಎಲ್ಲಿಂದ ಪೂರೈಕೆಯಾಗುತ್ತದೆ. ಯಾರು ಕಳಿಸುತ್ತಾರೆ ಎಂಬುದು ನಮಗೂ ತಿಳಿದಿರುವುದಿಲ್ಲ. ನಾವು ಆನ್ ಲೈನ್ ಚಾಟ್ ಮೂಲಕ ವಿಷಯ ವಿನಿಯಮ ಮಾಡಿಕೊಳ್ಳುತ್ತೇವೆ ಎಂದು ಯಾಸಿನ್ ಹೇಳಿದ್ದಾನೆ.
ಭಾರತ-ನೇಪಾಳದ ಗಡಿಭಾಗದ ಗೋರಕ್ ಪುರದಲ್ಲಿ ಬಂಧಿತನಾದ ಯಾಸಿನ್ ಭಟ್ಕಳ ನಿಂದ ಇನ್ನಷ್ಟು ಮಾಹಿತಿಗಳು ಹೊರ ಬೀಳುವ ಸಾಧ್ಯತೆಗಳಿವೆ.
ಮಂಗಳೂರಿನಲ್ಲಿ ಉಗ್ರರ ಅಡಗುತಾಣ: ಹೈದರಾಬಾದ್ ಸ್ಫೋಟಕ್ಕೆ ಮುನ್ನ ಉಗ್ರರು ಮಂಗಳೂರಿನ ಅಡಗುತಾಣಗಳಲ್ಲಿ ಕಾಲ ಕಳೆದಿದ್ದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಗೆ ಮಾಹಿತಿ ಸಿಕ್ಕಿದೆ.
ಇಂಡಿಯನ್ ಮುಜಾಹಿದೀನ್ ಸಹಸ್ಥಾಪಕ ಯಾಸಿನ್ ಭಟ್ಕಳನ ಸಹಚರ ಅಸಾದುಲ್ಲಾ ಅಖ್ತರ್ ಅಲಿಯಾಸ್ ಹಡ್ಡಿ. ತನಿಖೆಯ ವೇಳೆ ತಮ್ಮ ಅಡಗುದಾಣಗಳ ಬಗ್ಗೆ ವಿವರ ನೀಡಿರುವ ಅಸಾದುಲ್ಲಾ, ಆ ಪ್ರದೇಶಗಳನ್ನು ಎನ್ಐಎ ಅಧಿಕಾರಿಗಳಿಗೆ ತೋರಿಸಿದ್ದಾನೆ.
ಮಂಗಳೂರು ಹಾಗೂ ಹೈದರಾಬಾದ್ನಲ್ಲಿದ್ದ ಉಗ್ರರ ಅಡಗುತಾಣಗಳನ್ನು ತನಿಖಾ ಅಧಿಕಾರಿಗಳಿಗೆ ತೋರಿಸಿಕೊಟ್ಟಿದ್ದಾನೆ ಅಸಾದುಲ್ಲಾ. ಜತೆಗೆ ಮಂಗಳೂರಿನಲ್ಲಿನ ವೆಸ್ಟರ್ನ್ ಯೂನಿಯನ್ ಮನಿ ಟ್ರಾನ್ಸ್ಫರ್ ಶಾಖೆಯೊಂದನ್ನೂ ತೋರಿಸಿದ್ದಾನೆ. ಹೈದರಾಬಾದ್ ಸ್ಫೋಟಕ್ಕೂ ಮೊದಲು ಇದೇ ಶಾಖೆಗೆ ಪಾಕಿಸ್ತಾನದಿಂದ ಹಣ ಬರುತ್ತಿತ್ತು. ಅದನ್ನು ನಾವು ಪಡೆದುಕೊಳ್ಳುತ್ತಿದ್ದೆವು. ನಾನು, ಭಟ್ಕಳ್, ವಖಾಸ್ ಹಾಗೂ ತಹ್ಸೀನ್ ಅಖ್ತರ್ ಇಲ್ಲೇ ವಾಸಿಸುತ್ತಿದ್ದೆವು ಎಂದಿದ್ದಾನೆ.
ಭಟ್ಕಳನ ಲ್ಯಾಪ್ ಟಾಪ್ 3 ಸಾವಿರ ಇಮೇಲ್ ಗಳು ದೊರೆತಿದ್ದು, ಅವೆಲ್ಲವೂ ರಹಸ್ಯ ಭಾಷೆಯಲ್ಲಿವೆ.ಜತೆಗೆ ಚಾಟ್ ಹಿಸ್ಟರಿ ಕೂಡಾ ಶೋಧಿಸಬೇಕಿದೆ. ಇವುಗಳನ್ನು ವಿವಿಧ ಸ್ಫೋಟಗಳ ಬಗ್ಗೆ ಪಾಕಿನಲ್ಲಿದ್ದ ಉಗ್ರರಿಗೆ ಮಾಹಿತಿ ನೀಡಲು ಕಳುಹಿಸಿರಬಹುದು ಎಂದು ಅಂದಾಜಿಸಲಾಗಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications