Infographics: ಖಾಸಗಿ ಪಾಲಾಗಲಿವೆ ನಾಲ್ಕು ವಿಮಾನ ನಿಲ್ದಾಣಗಳು
ನವದೆಹಲಿ, ಮಾರ್ಚ್ 15: ಕೇಂದ್ರ ಸರ್ಕಾರ ದೇಶದ ಆರು ವಿಮಾನ ನಿಲ್ದಾಣಗಳಲ್ಲಿನ ತನ್ನ ಬಂಡವಾಳಗಳನ್ನು ವಾಪಸ್ ಪಡೆದುಕೊಳ್ಳುವ ಮೂಲಕ ಅವುಗಳ ನಿರ್ವಹಣೆಯನ್ನು ಈಗಾಗಲೇ ಖಾಸಗಿ ವಲಯಕ್ಕೆ ಒಪ್ಪಿಸಿದೆ. ಈ ಆರೂ ವಿಮಾನ ನಿಲ್ದಾಣಗಳ ನಿರ್ವಹಣೆ ಬಿಡ್ಡಿಂಗ್ಅನ್ನು ಅದಾನಿ ಸಮೂಹ ಪಡೆದುಕೊಂಡಿದ್ದು ವಿವಾದ ಸೃಷ್ಟಿಸಿತ್ತು.
ಆದರೆ ಕೆಲವು ಪ್ರಮುಖ ಕ್ಷೇತ್ರಗಳಿಂದ ತನ್ನ ಷೇರುಗಳನ್ನು ಹಿಂದಕ್ಕೆ ಪಡೆದು, ಅವುಗಳನ್ನು ಸಂಪೂರ್ಣವಾಗಿ ಖಾಸಗಿಗೆ ಒಪ್ಪಿಸುವ ಮೂಲಕ ತನ್ನ ಆರ್ಥಿಕ ಸ್ಥಿತಿ ಸುಧಾರಿಸಿಕೊಳ್ಳಲು 2.5 ಲಕ್ಷ ಕೋಟಿ ಸಂಗ್ರಹದ ಗುರಿ ಹೊಂದಿರುವ ಸರ್ಕಾರ ಈಗ ಬೆಂಗಳೂರು, ಮುಂಬೈ, ಹೈದರಾಬಾದ್ ಮತ್ತು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿನ ತನ್ನ ಷೇರುಗಳನ್ನು ಕೂಡ ಮಾರಾಟ ಮಾಡಿ, ಅವುಗಳನ್ನು ಸಹ ಸಂಪೂರ್ಣವಾಗಿ ಖಾಸಗಿ ತೆಕ್ಕೆಗೆ ಒಪ್ಪಿಸಲು ನಿರ್ಧರಿಸಿದೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸರ್ಕಾರದ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಮತ್ತು ರಾಜ್ಯ ಸರ್ಕಾರಗಳು ಶೇ 26ರಷ್ಟು ಷೇರುಗಳನ್ನು ಹೊಂದಿವೆ. ಹೈದರಾಬಾದ್ನಲ್ಲಿ ಸಹ ಎಎಐ ಮತ್ತು ಆಂಧ್ರಪ್ರದೇಶ ಸರ್ಕಾರಗಳು ಸಹ ಶೇ 26ರಷ್ಟು ಷೇರುಗಳನ್ನು ಹೊಂದಿವೆ.
ಬೆಂಗಳೂರು, ದೆಹಲಿ, ಮುಂಬೈ ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳಲ್ಲಿ ಜಂಟಿ ನಿರ್ವಹಣೆಯಲ್ಲಿನ ತನ್ನ ಷೇರು ಮೊತ್ತವನ್ನು ಹಿಂದಕ್ಕೆ ತೆಗೆದುಕೊಳ್ಳಲು ನಾಗರಿಕ ವಿಮಾನಯಾನ ಸಚಿವಾಲಯ ಅನುಮತಿ ಪಡೆದುಕೊಳ್ಳಲಿದೆ. ಇದಕ್ಕೆ ಶೀಘ್ರದಲ್ಲಿಯೇ ಸಚಿವ ಸಂಪುಟ ಅನುಮೋದನೆ ದೊರಕುವ ಸಾಧ್ಯತೆ ಇದೆ.
ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದಾನಿ ಸಮೂಹ ಶೇ 74ರಷ್ಟು ಷೇರುಗಳನ್ನು ಹೊಂದಿದ್ದರೆ, ಎಎಐ ಶೇ 26ರಷ್ಟು ಷೇರುಗಳನ್ನು ಹೊಂದಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಜಿಎಂಆರ್ ಸಮೂಹ ಶೇ 54ರಷ್ಟು, ಎಎಐ ಶೇ 26 ಹಾಗೂ ಫ್ರಾಪೋರ್ಟ್ ಎಜಿ ಮತ್ತು ಎರಾಮನ್ ಮಲೇಷ್ಯಾ ತಲಾ ಶೇ 10ರಷ್ಟು ಷೇರುಗಳನ್ನು ಹೊಂದಿದೆ.

-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ










Click it and Unblock the Notifications