Infographics: ಬೆಂಗಳೂರು ಮಳೆ ಆರ್ಭಟ, ಯಾವ ಏರಿಯಾದಲ್ಲಿ ಎಷ್ಟು ಮಳೆ?
ಬೆಂಗಳೂರು ಜೂ.18: ಕೆಲ ಕಾಲ ಬ್ರೇಕ್ ತೆಗೆದುಕೊಂಡಿದ್ದ ಮುಂಗಾರು ಮಾರುತಗಳು ಈ ವಾರಾಂತ್ಯದಲ್ಲಿ ಬೆಂಗಳೂರಿನ ಆಗಸದಲ್ಲಿ ಜಂಗೀಕುಸ್ತಿ ಇಳಿದಂತೆ ಕಾಣುತ್ತಿದೆ. ಒಂದು ರಾತ್ರಿ ಮಳೆಗೆ ಎರಡು ಜೀವಗಳು ಅಸುನೀಗಿವೆ. ಹಲವೆಡೆ ಆಸ್ತಿ ಪಾಸ್ತಿ ನಾಶಗೊಂಡಿವೆ. ಮುಂಗಾರು ಮಳೆ ಸ್ವಾಗತಿಸಲು ಸಜ್ಜಾಗದ ಬಿಬಿಎಂಪಿ ನಮಗೆ ಮಳೆ ಸಂಬಂಧಿಸಿದಂತೆ ದೂರುಗಳು ಹೆಚ್ಚಾಗಿ ಬಂದಿಲ್ಲ ಎಂದು ಸುಮ್ಮನಾಗಿದ್ದಾರೆ.
ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ ಮಹಾದೇವಪುರ ವಲಯ ವ್ಯಾಪ್ತಿಯೊಂದರಲ್ಲೇ ಅತ್ಯಧಿಕ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದ್ದಲ್ಲದೆ, ಕೆ.ಆರ್ ಪುರದಲ್ಲಿನ ಕೃಷ್ಣ ಥಿಯೇಟರ್ನ ಗೋಡೆ ಕುಸಿದಿದೆ. ಮಹಾದೇವಪುರದಲ್ಲಿ ವಾಸವಿದ್ದ ಶಿವಮೊಗ್ಗ ಮೂಲದ ಮಿಥುನ್ ಎಂಬಾತ ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ.
ರಾಮಮೂರ್ತಿ ನಗರದ ಚರ್ಚ್ ರಸ್ತೆಯ ಅಂಬೇಡ್ಕರ್ ನಗರದಲ್ಲಿ ರಾಜಕಾಲುವೆ ತ್ಯಾಜ್ಯದಿಂದ ಕಟ್ಟಿಕೊಂಡು ಮಳೆ ನೀರು ರಸ್ತೆಗೆ ಮತ್ತು ಸುಮಾರು ಹತ್ತು ಮನೆಗಳಿಗೆ ನುಗ್ಗಿದೆ. ಶಿವಾನಂದ ವೃತ್ತ, ಓಕಳಿಪುರಂ, ಯಲಹಂಕದಲ್ಲಿ ರಸ್ತೆ ಅಂಡರ್ ಪಾಸ್ಗಳಲ್ಲಿ ಒಂದು ಅಡಿಗೂ ಹೆಚ್ಚು ನೀರು ನಿಂತಿತ್ತು. ವಾಹನ ಸವಾರರು ಸಂಚರಿಸಲು ಪರದಾಡಿದರು. ತ್ಯಾಜ್ಯದಿಂದ ಬ್ಲಾಕ್ ಆದ ಪರಿಣಾಮ ಒಳಚರಂಡಿ ನೀರು ರಸ್ತೆ ಮೇಲೆ ಉಕ್ಕಿ ಹರಿಯಿತು.

ಯಲಹಂಕ, ಮಹಾದೇವಪುರ, ಕೆ.ಆರ್ ಪುರಂ, ಮೆಜೆಸ್ಟಿಕ್ ಸುತ್ತಮುತ್ತ, ಕಾಟನ್ ಪೇಟೆ, ವಿದ್ಯಾರಣ್ಯಪುರ, ಕೆ.ಆರ್ ಮಾರುಕಟ್ಟೆ, ಟೌನ್ ಹಾಲ್, ರಾಜಾಜಿನಗರ, ನಾಯಂಡಹಳ್ಳಿ ಸೇರಿದಂತೆ ವಿವಿಧೆಡೆ ಮುಖ್ಯರಸ್ತೆಗಳಲ್ಲೇ ಮಳೆ ನೀರು ತುಂಬಿ ಹರಿದಿದೆ. ಅದರಲ್ಲೇ ವಾಹನ ಸವಾರರು ಸಂಚರಿಸಿದ್ದಾರೆ.
ಮಹಾದೇವಪುರ ವ್ಯಾಪ್ತಿಯ ಹೊರಮಾವು ವೊಂದರಲ್ಲೇ ಅತ್ಯಧಿಕ 146 ಮಿ.ಮೀ. ಮಳೆ ದಾಖಲಾಗಿದೆ. ಉಳಿದಂತೆ ದೊಡ್ಡಾನೆಕ್ಕುಂದಿ 106 ಮಿ.ಮೀ, ಎಚ್ ಎ ಎಲ್ ವಿಮಾನ ನಿಲ್ದಾಣ 103 ಮಿ.ಮೀ., ಯಲಹಂಕ ಮತ್ತು ಜಕ್ಕೂರು ತಲಾ 88 ಮಿ.ಮೀ., ಅಟ್ಟೂರ 86ಮಿ.ಮೀ., ಕೊಡಿಗೇಹಳ್ಳಿ 73ಮಿ.ಮೀ., ರಾಜ್ ಮಹಲ್ ಗುಟ್ಟಹಳ್ಳಿ 68 ಮಿ.ಮೀ., ಕೆ.ಆರ್ ಪುರಂ 77ಮಿ.ಮೀ., ಹೂಡಿ 72ಮಿ.ಮೀ., ಕುಶಾಲನಗರ 33ಮಿ.ಮೀ., ವಿಶ್ವನಾಥ ನಾಗೇನಹಳ್ಳಿ 32ಮಿ.ಮೀ, ನಾಗಪುರ 29ಮಿ. ಮೀ. ಮಳೆ ದಾಖಲಾಗಿದೆ.

ಹೊಸಕೆರೆಹಳ್ಳಿ, ಬನಶಂಕರಿ, ವಿದ್ಯಾಪೀಠ, ಬಸವನಗುಡಿ, ನಾಯಂಡನಹಳ್ಳಿ, ವಿಜಯನಗರ, ಕೆಂಗೇರಿ, ಬಸವೇಶ್ವರ ನಗರ ಸೇರಿದಂತೆ ಹಲವೆಡೆ ಶನಿವಾರ ಸಂಜೆ ಕೂಡಾ ಮಳೆ ಸುರಿಯುತ್ತಿದೆ. ಭಾನುವಾರವೂ ಮಳೆ ಬೆಂಗಳೂರಿನ ಹಲವೆಡೆ ಮುಂದುವರೆಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವರದಿ ತಿಳಿಸಿದೆ.
-
Bengaluru Weather: ಬೆಂಗಳೂರಲ್ಲಿ ಬೇಸಿಗೆ ಆರಂಭದಲ್ಲೇ 40 ಡಿಗ್ರಿಯತ್ತ ತಾಪಮಾನ: ಉರಿ ಬಿಸಿಲು, ಸೆಕೆಯಿಂದ ಹೈರಾಣಾದ ಜನ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications