Infographics:ಶೇಕಡವಾರು ಮತ ಗಳಿಕೆ, ಅತಿ ಹೆಚ್ಚು ಸ್ಥಾನ RJD ಟಾಪ್
ಕೊವಿಡ್ 19 ಸಂಕಷ್ಟದ ನಡುವೆ ಸಕಲ ಸುರಕ್ಷತಾ ನಿಯಮಗಳನ್ನು ಅನುಸರಿಸಿ ಬಿಹಾರದಲ್ಲಿ 243 ವಿಧಾನಸಭಾ ಸ್ಥಾನಗಳಿಗಾಗಿ ಮೂರು ಹಂತಗಳಲ್ಲಿ ಚುನಾವಣೆ ನಡೆಸಲಾಯಿತು. ನವೆಂಬರ್ 11ರಂದು ಸುರ್ಯೋದಯಕ್ಕೂ ಮುನ್ನ ಅಂತಿಮ ಫಲಿತಾಂಶ ಹೊರಬಂದಿದೆ.
ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ ಶೇಕಡವಾರು ಮತ ಗಳಿಕೆ, ಅತಿ ಹೆಚ್ಚು ಸ್ಥಾನ ಪಡೆದ ಪಕ್ಷವಾಗಿ ಹೊರ ಹೊಮ್ಮಿದೆ. ಇನ್ನೊಂದೆಡೆ ಆಡಳಿತಾರೂಢ ಜೆಡಿಯುಗಿಂತ ಬಿಜೆಪಿ ಅಧಿಕ ಸ್ಥಾನ ಗಳಿಸಿರುವುದು ವಿಶೇಷ. ಎಐಎಂಐಎಂ ಈ ಬಾರಿ 5 ಸ್ಥಾನ ಗಳಿಸಿ ಭರ್ಜರಿ ಪ್ರದರ್ಶನ ನೀಡಿದೆ.
ಬಿಹಾರದ 38 ಜಿಲ್ಲೆಗಳಲ್ಲಿ 55 ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ತಡರಾತ್ರಿ ನಡೆದು 3755 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಿದೆ.
ಆರ್ ಜೆಡಿ 75 ಸ್ಥಾನ ಗಳಿಸಿದರೆ ಬಿಜೆಪಿ 74 ಸ್ಥಾನ ಗಳಿಸಿದೆ. ಎನ್ಡಿಎ ಮಿತ್ರಪಕ್ಷಗಳಾದ ಎಚ್ಎಎಂ ಹಾಗೂ ವಿಐಪಿ ತಲಾ 4 ಸ್ಥಾನ ಗಳಿಸಿವೆ. ಎಲ್ ಜೆಪಿ 1 ಸ್ಥಾನಕ್ಕೆ ತೃಪ್ತಿ ಪಟ್ಟಿದೆ.
2015ರಲ್ಲಿ ರಾಷ್ಟ್ರೀಯ ಜನತಾ ದಳ 80 ಸ್ಥಾನ, ಜನತಾ ದಳ ಯುನೈಟೆಡ್ 71, ಕಾಂಗ್ರೆಸ್ 27 ಗಳಿಸಿದ್ದವು. ಬಿಜೆಪಿ 53 ಸ್ಥಾನ, ಎಲ್ ಜೆಪಿ 2 ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ ಸೆಕ್ಯುಲರ್ 1, ಇತರೆ 10 ಸ್ಥಾನ ಗಳಿಸಿದ್ದವು. ಬಿಜೆಪಿ ಶೇ 24ರಷ್ಟು ಮತಗಳಿಕೆ, ಅರ್ ಜೆ ಡಿ ಶೇ 18 ಹಾಗೂ ಜೆಡಿಯು ಶೇ 17ರಷ್ಟು, ಕಾಂಗ್ರೆಸ್ ಶೇ 7, ಎಲ್ ಜೆಪಿ ಶೇ 4.8ರಷ್ಟು ಮತ ಗಳಿಸಿದ್ದವು.
ಬಿಹಾರ ವಿಧಾನಸಭೆ ಚುನಾವಣೆ ಜೊತೆಗೆ ದೇಶದ 11 ರಾಜ್ಯಗಳಲ್ಲಿನ 59 ವಿಧಾನಸಭಾ ಕ್ಷೇತ್ರಗಳಿಗೆ ನಡೆಸಲಾದ ಚುನಾವಣೆಯ ಫಲಿತಾಂಶವೂ ನವೆಂಬರ್ 10ರಂದು ಪ್ರಕಟವಾಗಿದೆ. ಬಿಹಾರದಲ್ಲಿ ಮಿತ್ರಪಕ್ಷ ಜೆಡಿಯುವನ್ನು ಹಿಂದಿಕ್ಕಿ ಭಾರತೀಯ ಜನತಾ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿದ ಸಾಧನೆ ಮಾಡಿದೆ. ಇದೇ ರೀತಿ ಉಪ ಚುನಾವಣೆ ರಿಪೋರ್ಟ್ ಕಾರ್ಡ್ ನೋಡಿದರೆ 59 ಕ್ಷೇತ್ರಗಳಲ್ಲಿ 41 ಬಿಜೆಪಿ ಪಾಲಾಗಿದ್ದು, ಭರ್ಜರಿ ಫಲಿತಾಂಶ ನೀಡಿದೆ.
ಬಿಹಾರದ ಪಕ್ಷವಾರು ಫಲಿತಾಂಶ, ಶೇಕಡಾವಾರು ಮತಗಳಿಕೆ, 11 ರಾಜ್ಯಗಳ ಉಪ ಚುನಾವಣೆ ಫಲಿತಾಂಶ ವಿವರ ಯಾವ ಪಕ್ಷಕ್ಕೆ ಲಾಭ, ಯಾವುದಕ್ಕೆ ನಷ್ಟ ವಿವರ ಇಲ್ಲಿದೆ..


Recommended Video

-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications