ದಾವಣಗೆರೆ : 2013ರಲ್ಲಿ ಸೋತವರು, ಗೆದ್ದವರು
ದಾವಣಗೆರೆ, ಮಾರ್ಚ್ 08 : ಕರ್ನಾಟಕ ರಾಜ್ಯದ ಮಧ್ಯ ಕರ್ನಾಟಕದ ಪ್ರಮುಖ ಜಿಲ್ಲೆ ದಾವಣಗೆರೆ. ಜವಳಿ ಉದ್ಯಮಕ್ಕೆ ಜಿಲ್ಲೆ ಪ್ರಸಿದ್ಧಿ ಪಡೆದಿದೆ. ಕರ್ನಾಟಕದ ಮ್ಯಾಂಚೆಸ್ಟರ್ ಎಂದು ದಾವಣಗೆರೆಯನ್ನು ಕರೆಯುತ್ತಿದ್ದರು.
ದಾವಣಗೆರೆ ಕರ್ನಾಟಕದ ಪ್ರಮುಖ ವ್ಯಾಪಾರಿ ಕೇಂದ್ರವೂ ಹೌದು. ಹತ್ತಿ, ಮೆಕ್ಕೆಜೋಳ, ಕಡಲೆ, ಸೂರ್ಯಕಾಂತಿ, ಭತ್ತವನ್ನು ಜಿಲ್ಲೆಯಲ್ಲಿ ಪ್ರಮುಖವಾಗಿ ಬೆಳೆಯಾಗುತ್ತದೆ. ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಅಧ್ಯಯನಕ್ಕಾಗಿಯೂ ಹಲವಾರು ಹೊರ ರಾಜ್ಯದ ವಿದ್ಯಾರ್ಥಿಗಳು ದಾವಣಗೆರೆಗೆ ಆಗಮಿಸುತ್ತಾರೆ.
ದಾವಣಗೆರೆ ಜಿಲ್ಲೆಯ ಕ್ಷೇತ್ರಗಳ ಪರಿಚಯ
ದಾವಣಗೆರೆಯ ಬೆಣ್ಣೆದೋಸೆ ಬಹಳ ಪ್ರಸಿದ್ಧಿಪಡೆದಿದೆ. ವಿಶಿಷ್ಟವಾದ ಸಿಹಿ ತಿನಿಸು ಗುಳ್ಳಡಿಕಿ ಉಂಡಿ ದಾವಣಗೆರೆಯಲ್ಲಿ ಮಾತ್ರ ಮಾಡಲಾಗುತ್ತದೆ. ರಾಜಕೀಯವಾಗಿ 8 ವಿಧಾನಸಭಾ ಕ್ಷೇತ್ರಗಳನ್ನು ಜಿಲ್ಲೆ ಒಳಗೊಂಡಿದೆ
1997ರಲ್ಲಿ ಮುಖ್ಯಮಂತ್ರಿಯಾಗಿದ್ದ ಜೆ.ಎಚ್.ಪಟೇಲರು ದಾವಣಗೆರೆಯನ್ನು ಜಿಲ್ಲೆಯನ್ನಾಗಿ ಮಾಡಿದರು. ಅದಕ್ಕೂ ಮೊದಲು ದಾವಣಗೆರೆ ಚಿತ್ರದುರ್ಗ ಜಿಲ್ಲೆಗೆ ಸೇರಿತ್ತು.