ಗದಗದಲ್ಲಿ ಗೆದ್ದವರು, ಸೋತವರು: ಚಿತ್ರಸಹಿತ ಮಾಹಿತಿ
ಗದಗ, ಮಾರ್ಚ್ 21: ಮುದ್ರಣಾಲಯಗಳ ಜಿಲ್ಲೆ ಗದಗದಲ್ಲಿ 2013 ರ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕಕ್ಕೆ ನಾಲ್ಕು ಕ್ಷೇತ್ರವನ್ನೂ ಕಾಂಗ್ರೆಸ್ ಗೆದ್ದಿತ್ತು. ಈ ಬಾರಿ ಜಿಲ್ಲೆಯ ಮತದಾರ ಯಾರಿಗೆ ಒಲಿಯಲಿದ್ದಾನೆ ಎಂಬ ಕುತೂಹಲ ಇದ್ದೇ ಇದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಕುಮಾರವ್ಯಾಸನ ತವರು ನೆಲವಾದ ಗದಗ ಕನ್ನಡ ಸಾರಸ್ವತಲೋಕಕ್ಕೆ ನೀಡಿದ ಕೊಡುಗೆ ಅಪಾರ. ಗದುಗಿನ ನಾರಣಪ್ಪ ಎಂಬುದು ಕುಮಾರವ್ಯಾಸನ ಮೂಲ ಹೆಸರಾಗಿತ್ತು. ಗಾನಯೋಗಿ ಪಂಚಾಕ್ಷರಿ ಗವಾಯಿ ಅವರೂ ಗದಗದವರು.
ಗದಗದಲ್ಲಿ ಎಲ್ಲೇ ಕಲ್ಲು ಹೊಡೆದರೂ ಅದು ಪ್ರಿಂಟಿಂಗ್ ಪ್ರೆಸ್ ಅಥವಾ ಕೈಮಗ್ಗದ ಕಾರ್ಖಾನೆಗೆ ಹೋಗಿ ಬೀಳುತ್ತದೆ ಎಂಬಷ್ಟರ ಮಟ್ಟಿಗೆ ಈ ಜಿಲ್ಲೆಯಲ್ಲಿ ಮುದ್ರಣಾಲಯ ಮತ್ತು ಕೈಮಗ್ಗದ ಕಾರ್ಖಾನೆಗಳಿದ್ದವಂತೆ!
ಉತ್ತರ ಕನ್ನಡ ಜಿಲ್ಲೆಯ ರಾಜಕೀಯ ಬಲಾಬಲದ ಚಿತ್ರಮಾಹಿತಿ
ಮಹದಾಯಿ ಪ್ರಕರಣವೇ ಪ್ರಮುಖ ಸಮಸ್ಯೆಯಾಗಿದ್ದು, ಅದರ ಪರಿಹಾರಕ್ಕೆ ಕಂಕಣಬದ್ಧರಾಗುವವರನ್ನೇ ಜನರು ಆರಿಸುವುದು ನಿಶ್ಚಿತ. ಈ ಹಿನ್ನೆಲೆಯಲ್ಲಿ 2013 ರ ವಿಧಾನಸಭೆ ಚುನಾವಣೆಯಲ್ಲಿ ಗದಗದಲ್ಲಿ ಗೆದ್ದವರು ಯಾರು, ಸೋತವರು ಯಾರು ಎಂಬ ಕಿರು ಮಾಹಿತಿ ಇಲ್ಲಿದೆ.