Infographics: ಅ.16ರಂದು ಚಿನ್ನದ ಬೆಲೆ ಯಾವ ನಗರದಲ್ಲಿ ಎಷ್ಟು ಏರಿಕೆ?
ಬೆಂಗಳೂರು, ಅಕ್ಟೋಬರ್ 16: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ ಸ್ವಲ್ಪ ಏರಿಕೆಯಾಗಿದೆ.
ಶನಿವಾರ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ಮೇಲೆ 10 ರೂ ಏರಿಕೆಯಾಗಿ 47,080ರೂ. ಆಗಿದೆ. ಇನ್ನು 24 ಕ್ಯಾರೆಟ್ ಅಪರಂಜಿ ಚಿನ್ನ ಕೂಡ 10 ರೂ. ಏರಿಕೆಯಾಗಿ 48,080 ರೂ. ಆಗಿದೆ. ಇನ್ನು ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,200 ರೂ. ಇದ್ದು, 24 ಕ್ಯಾರೆಟ್ ಚಿನ್ನದ ಬೆಲೆ 48,220 ರೂ. ಆಗಿದೆ. ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 47,000 ಇದ್ದು 24 ಕ್ಯಾರೆಟ್ ಚಿನ್ನದ ಬೆಲೆ 51,230 ರೂ. ಆಗಿದೆ.
ಕಳೆದ 30 ದಿನಗಳಲ್ಲಿ ಸ್ಪಾಟ್ ಗೋಲ್ಡ್ ಗರಿಷ್ಠ 1803.78 ಡಾಲರ್ ಹಾಗೂ ಕನಿಷ್ಠ 1728.92 ಡಾಲರ್ ತಲುಪಿತ್ತು. ಇದೇ ಅವಧಿಯಲ್ಲಿ ಬೆಳ್ಳಿ ದರ ಗರಿಷ್ಠ 23.90 ಡಾಲರ್ ಹಾಗೂ ಕನಿಷ್ಠ 21.57 ಡಾಲರ್ ಮುಟ್ಟಿತ್ತು. ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ, ಬರೋಡಾ, ಅಹಮದಾಬಾದ್, ಜೈಪುರ, ಲಕ್ನೋ, ಕೊಯಮತ್ತೂರು, ಮಧುರೈ, ವಿಜಯವಾಡ, ಪಾಟ್ನಾ, ನಾಗಪುರ, ಚಂಡೀಗಢ, ನಾಸಿಕ್, ಭುವನೇಶ್ವರ ಮುಂತಾದ ನಗರಗಳಲ್ಲಿ ಅಕ್ಟೋಬರ್ 16 ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ. ಚಿತ್ರ ವಿನ್ಯಾಸ: ಭರತ್ ಎಚ್.ಸಿ.

ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಕೊರೊನಾ ಲಾಕ್ ಡೌನ್, ಹವಾಮಾನ ವೈಪರೀತ್ಯ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ. ಸೆಪ್ಟೆಂಬರ್ ತಿಂಗಳಲ್ಲಿ ಚಿನ್ನದ ಆಮದು ಹೆಚ್ಚಿನ ಪ್ರಮಾಣದಲ್ಲಿದ್ದರೂ ದೇಶಿ ಮಾರುಕಟ್ಟೆಯಲ್ಲಿ ಬೇಡಿಕೆ ಹಿಗ್ಗಿಲ್ಲ, ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರದ ನಿರೀಕ್ಷೆಯಂತೂ ಇದ್ದೇ ಇದೆ.
ಕೊರೊನಾ ವೈರಸ್ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು.
ಲಾಕ್ಡೌನ್ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.
ಬೆಂಗಳೂರು ದಕ್ಷಿಣ ಭಾರತದಲ್ಲಿ ಬೆಳ್ಳಿಯಂತಹ ಲೋಹದ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿಯನ್ನು ಖರೀದಿಸಲು ಯೋಜಿಸುವಾಗ, ಬ್ರಾಂಡೆಡ್ ಆಭರಣಗಳನ್ನು ಮಾರಾಟ ಮಾಡುವ ಪ್ರಮಾಣೀಕೃತ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸುವುದು ಉತ್ತಮ. ಬೆಂಗಳೂರಿನಲ್ಲಿ ಹೂಡಿಕೆ ಉದ್ದೇಶಗಳಿಗಾಗಿ ಬೆಳ್ಳಿ ಅತ್ಯಂತ ಜನಪ್ರಿಯ ವಸ್ತು.
ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ?
ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 16:44,200ರೂ (600 ರೂ. ಇಳಿಕೆ) , 48,220 ರೂ(650 ರೂಇಳಿಕೆ)
ಅಕ್ಟೋಬರ್ 15:44,800 ರೂ, 48,870 ರೂ
ಅಕ್ಟೋಬರ್ 14: 44,700, ರೂ48,760 ರೂ
ಅಕ್ಟೋಬರ್ 13: 44,150, 48, 160 ರೂ
ಅಕ್ಟೋಬರ್ 12: 44,150, 48, 160 ರೂ
ಅಕ್ಟೋಬರ್ 11: 43,900 ರೂ (-) 47,890 ರೂ (-)
ಅಕ್ಟೋಬರ್ 10: 43,900 ರೂ (-) 47,890 ರೂ (-)
ಬೆಳ್ಳಿ ಬೆಲೆ ಕೆ.ಜಿಗೆ 63,600 ರೂಪಾಯಿ
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ












Click it and Unblock the Notifications