ಕರ್ನಾಟಕ ವಿಧಾನಸಭೆ ಚುನಾವಣೆಯ ವಿಶೇಷತೆಗಳು
ಬೆಂಗಳೂರು, ಮೇ 11: ರಾಜಕೀಯ ಪಕ್ಷಗಳು, ಜನರು ಕಾತರದಿಂದ ಕಾಯುತ್ತಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಇನ್ನು ಉಳಿದಿರುವುದು ಕೆಲವೇ ಗಂಟೆಗಳು ಮಾತ್ರ. ಚುನಾವಣೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮುಗಿಸಿರುವ ಚುನಾವಣಾ ಆಯೋಗ ಮತದಾರರ ಅಂತಿಮ ಪಟ್ಟಿಯನ್ನೂ ಈಗಾಗಲೇ ಬಿಡುಗಡೆ ಮಾಡಿದೆ. ಜೊತೆಗೆ ಚುನಾವಣೆಯ ವಿಶೇಷತೆಗಳ ಬಗ್ಗೆಯೂ ಮಾಹಿತಿಯನ್ನು ನೀಡಿದೆ.
ಈ ಬಾರಿ ರಾಜ್ಯದಲ್ಲಿ ಒಟ್ಟು 5,06,90,538 (5.06 ಕೋಟಿ) ಮತದಾರರಿದ್ದಾರೆ. ಇದರಲ್ಲಿ 2,56,75,579 ಪುರುಷ ಮತದಾರರಾದರೆ, ಮಹಿಳಾ ಮತದಾರರ ಸಂಖ್ಯೆ 2,50,09,904. ಇನ್ನು 5,055 ತೃತೀಯ ಲಿಂಗಿ ಮತದಾರರೂ ರಾಜ್ಯದಲ್ಲಿದ್ದಾರೆ.
ಈ ಬಾರಿ ಹೊಸದಾಗಿ 12,92,881 ಜನರು ಮತದಾರರ ಪಟ್ಟಿಗೆ ಹೆಸರು ನೋಂದಾವಣೆ ಮಾಡಿಕೊಂಡಿದ್ದಾರೆ. ಇವರೆಲ್ಲಾ ಮೊದಲ ಬಾರಿಗೆ ಮತಚಲಾವಣೆ ಮಾಡಲಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬರೋಬ್ಬರಿ 6,03,678 ಮತದಾರರಿದ್ದರೆ, ಚಿಕ್ಕಮಗಳೂರಿನ ಶೃಂಗೇರಿ ಕ್ಷೇತ್ರದಲ್ಲಿ ರಾಜ್ಯದಲ್ಲೇ ಕನಿಷ್ಠ 1,66,026 ಜನರು ಮತದಾನ ಮಾಡುವ ಹಕ್ಕು ಹೊಂದಿದ್ದಾರೆ.
ರಾಜ್ಯದಲ್ಲಿ ಒಟ್ಟು 58,008 ಮತಗಟ್ಟೆಗಳಿವೆ. ಇವುಗಳಲ್ಲಿ ಶೇಕಡಾ 20 ಸೂಕ್ಷ್ಮ ಮತಗಟ್ಟೆಗಳಾಗಿವೆ. ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಈ ಬಾರಿ ಕರ್ನಾಟಕದಲ್ಲಿ ಮತದಾನ ನಡೆಯಲಿದೆ.
224 ಕ್ಷೇತ್ರಗಳಲ್ಲಿ ಜಯನಗರದ ಬಿಜೆಪಿ ಅಭ್ಯರ್ಥಿ ಸಾವನ್ನಪ್ಪಿದ್ದರಿಂದ 223 ಕ್ಷೇತ್ರಗಳಲ್ಲಿ ಮಾತ್ರ ಮತದಾನ ನಡೆಯುತ್ತಿದೆ.
ಇದೇ ಮೇ 15ರಂದು ಬಹು ನಿರೀಕ್ಷಿತ ಕರ್ನಾಟಕ ಚುನಾವಣಾ ಕದನದ ಫಲಿತಾಂಶ ಹೊರ ಬೀಳಲಿದೆ.

-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications