ಜಯನಗರ ಫಲಿತಾಂಶ: ಚಿತ್ರಗಳಲ್ಲಿ ನೋಡಿ ಮುನ್ನಡೆ-ಹಿನ್ನಡೆಯ ಟ್ರೆಂಡ್
ಬೆಂಗಳೂರು, ಜೂನ್ 13: ಜಯನಗರ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಬಿಡುಗಡೆಯಾಗಿದೆ. ಕಾಂಗ್ರೆಸ್ಸಿನ ಸೌಮ್ಯಾ ರೆಡ್ಡಿ 54457 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದರೆ, ಬಿಜೆಪಿಯ ಬಿ ಎನ್ ಪ್ರಹ್ಲಾದ್ 51568 ಮತ ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರವಿಕೃಷ್ಣಾ ರೆಡ್ಡಿ 1861 ಮತಗಳನ್ನಷ್ಟೇ ಪಡೆದು, ಸೋಲೊಪ್ಪಿಕೊಂಡರು.
ಐದನೇ ಸುತ್ತಿನ ನಂತರ ಉಭಯ ಪಕ್ಷದ ಅಭ್ಯರ್ಥಿಗಳ ನಡುವೆ ಇದ್ದ ಅಂತರ ಕೊಂಚ ಕಡಿಮೆಯಾಗುತ್ತ, ಫಲಿತಾಂಶದ ಕುರಿತು ಕುತೂಹಲ ಏರ್ಪಟ್ಟಿತ್ತು. ಜೂನ್ 11 ರಂದು ನಡೆದ ಚುನಾವಣೆಯ ಫಲಿತಾಂಶ ಇಂದು(ಜೂನ್ 13) ಹೊರಬೀಳುತ್ತಿದ್ದು, ಫಲಿತಾಂಶದ ಪ್ರತಿ ಸುತ್ತಿನ ಮತ ಎಣಿಕೆಯಲ್ಲೂ ಟ್ರೆಂಡ್ ಹೇಗಿತ್ತು ಎಮಬ ಕುರಿತ ಚಿತ್ರ ಸಹಿತ ಮಾಹಿತಿ ಇಲ್ಲಿದೆ.
ಕ್ಷೇತ್ರದ ಬಿಜೆಪಿ ಅಭಯರ್ಥಿಯಾಗಿದ್ದ ಬಿ ಎನ್ ವಿಜಯಕುಮಾರ್ ಅವರ ಅಕಾಲಿಕ ಮರಣದಿಂದಾಗಿ ಮೇ 12 ರಂದು ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಲಾಗಿತ್ತು. ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಗೃಹಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯಾರೆಡ್ಡಿ, ಬಿಜೆಪಿ ಅಭ್ಯರ್ಥಿಯಾಗಿ ದಿ.ವಿಜಯಕುಮಾರ್ ಅವರ ಸಹೋದರ ಬಿ ಎನ್ ಪ್ರಹ್ಲಾದ್, ಪಕ್ಷೇತರ ಅಭ್ಯರ್ಥಿಯಾಗಿ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣರೆಡ್ಡಿ ಕಣದಲ್ಲಿದ್ದಾರೆ. ಜೆಡಿಎಸ್ ಅಭ್ಯರ್ಥಿ, ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.
ಮೊದಲ ಹಲವು ಸುತ್ತುಗಳಲ್ಲಿ ಸುಲಭ ಮುನ್ನಡೆ ಗಳಿಸಿದ್ದ ಸೌಮ್ಯ ರೆಡ್ಡಿ ಕೊನೆಯ ಮೂರ್ನಾಲ್ಕು ಸುತ್ತುಗಳಲ್ಲಿ ಕಡಿಮೆ ಮತಗಳಿಸುವ ಮೂಲಕ ಪ್ರಯಾಸದಲ್ಲೇ ಗೆಲುವುಸಾಧಿಸಿದರು.

















-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications