ಜಯನಗರ ಫಲಿತಾಂಶ: ಚಿತ್ರಗಳಲ್ಲಿ ನೋಡಿ ಮುನ್ನಡೆ-ಹಿನ್ನಡೆಯ ಟ್ರೆಂಡ್
ಬೆಂಗಳೂರು, ಜೂನ್ 13: ಜಯನಗರ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಬಿಡುಗಡೆಯಾಗಿದೆ. ಕಾಂಗ್ರೆಸ್ಸಿನ ಸೌಮ್ಯಾ ರೆಡ್ಡಿ 54457 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದರೆ, ಬಿಜೆಪಿಯ ಬಿ ಎನ್ ಪ್ರಹ್ಲಾದ್ 51568 ಮತ ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರವಿಕೃಷ್ಣಾ ರೆಡ್ಡಿ 1861 ಮತಗಳನ್ನಷ್ಟೇ ಪಡೆದು, ಸೋಲೊಪ್ಪಿಕೊಂಡರು.
ಐದನೇ ಸುತ್ತಿನ ನಂತರ ಉಭಯ ಪಕ್ಷದ ಅಭ್ಯರ್ಥಿಗಳ ನಡುವೆ ಇದ್ದ ಅಂತರ ಕೊಂಚ ಕಡಿಮೆಯಾಗುತ್ತ, ಫಲಿತಾಂಶದ ಕುರಿತು ಕುತೂಹಲ ಏರ್ಪಟ್ಟಿತ್ತು. ಜೂನ್ 11 ರಂದು ನಡೆದ ಚುನಾವಣೆಯ ಫಲಿತಾಂಶ ಇಂದು(ಜೂನ್ 13) ಹೊರಬೀಳುತ್ತಿದ್ದು, ಫಲಿತಾಂಶದ ಪ್ರತಿ ಸುತ್ತಿನ ಮತ ಎಣಿಕೆಯಲ್ಲೂ ಟ್ರೆಂಡ್ ಹೇಗಿತ್ತು ಎಮಬ ಕುರಿತ ಚಿತ್ರ ಸಹಿತ ಮಾಹಿತಿ ಇಲ್ಲಿದೆ.
ಕ್ಷೇತ್ರದ ಬಿಜೆಪಿ ಅಭಯರ್ಥಿಯಾಗಿದ್ದ ಬಿ ಎನ್ ವಿಜಯಕುಮಾರ್ ಅವರ ಅಕಾಲಿಕ ಮರಣದಿಂದಾಗಿ ಮೇ 12 ರಂದು ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಲಾಗಿತ್ತು. ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಗೃಹಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯಾರೆಡ್ಡಿ, ಬಿಜೆಪಿ ಅಭ್ಯರ್ಥಿಯಾಗಿ ದಿ.ವಿಜಯಕುಮಾರ್ ಅವರ ಸಹೋದರ ಬಿ ಎನ್ ಪ್ರಹ್ಲಾದ್, ಪಕ್ಷೇತರ ಅಭ್ಯರ್ಥಿಯಾಗಿ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣರೆಡ್ಡಿ ಕಣದಲ್ಲಿದ್ದಾರೆ. ಜೆಡಿಎಸ್ ಅಭ್ಯರ್ಥಿ, ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.
ಮೊದಲ ಹಲವು ಸುತ್ತುಗಳಲ್ಲಿ ಸುಲಭ ಮುನ್ನಡೆ ಗಳಿಸಿದ್ದ ಸೌಮ್ಯ ರೆಡ್ಡಿ ಕೊನೆಯ ಮೂರ್ನಾಲ್ಕು ಸುತ್ತುಗಳಲ್ಲಿ ಕಡಿಮೆ ಮತಗಳಿಸುವ ಮೂಲಕ ಪ್ರಯಾಸದಲ್ಲೇ ಗೆಲುವುಸಾಧಿಸಿದರು.

















-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications