'ಕಾಲಾ' ಚಿತ್ರದ ಬಗ್ಗೆ ಸಂಪೂರ್ಣ ಮಾಹಿತಿ ಇನ್ಫೋಗ್ರಾಫಿಕ್ಸ್ನಲ್ಲಿ
ಸೂಪರ್ಸ್ಟಾರ್ ರಜನೀಕಾಂತ್ ಅಭಿನಯದ 'ಕಾಲಾ' ಚಿತ್ರ ಜೂನ್ 7 ಕ್ಕೆ ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ. ಆದರೆ ಕರ್ನಾಟಕದಲ್ಲಿ ಈ ಚಿತ್ರ ವಿವಾದಕ್ಕೆ ಈಡಾಗಿದೆ.
ರಜನೀಕಾಂತ್ ಅವರು ಕಾವೇರಿ ಬಗ್ಗೆ ನೀಡಿದ್ದ ಹೇಳಿಕೆ ಕನ್ನಡಿಗರನ್ನು ಬೇಸರಕ್ಕೆ ತಳ್ಳಿದೆ ಹಾಗಾಗಿ ಕೆಲವು ಕನ್ನಡ ಪರ ಸಂಘಟನೆಗಳು ಸೇರಿದಂತೆ ಇನ್ನೂ ಕೆಲವು ಸಂಘಟನೆಗಳು 'ಕಾಲಾ' ಚಿತ್ರದ ವಿರುದ್ಧ ತೊಡೆತಟ್ಟಿವೆ. ಏನೇ ಆಗಲಿ 'ಕಾಲಾ'ವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಬಿಡೆವು ಎಂದಿದ್ದಾರೆ.
ಇದರಿಂದ ಚಿಂತಿತಗೊಂಡ ನಿರ್ಮಾಪಕರಾದ ರಜನೀಕಾಂತ್ ಮಗಳು ಸೌಂದರ್ಯ ಹಾಗೂ ಅಳಿಯ ಧನುಷ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ 'ಕಾಲಾ' ಚಿತ್ರಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. ಆದರೆ ಚಿತ್ರವನ್ನು ಪ್ರದರ್ಶನ ಮಾಡುವಂತೆ ಚಿತ್ರಮಂದಿರಗಳಿಗೆ ಸೂಚಿಸಲು ಮಾತ್ರ ಒಲ್ಲೆ ಎಂದಿದೆ.
ಪ್ರತಿಭಟನೆಗೆ ಹೆದರಿ ಚಿತ್ರಮಂದಿರಗಳು ಚಿತ್ರವನ್ನು ಬಿಡುಗಡೆಗೆ ಮನಸ್ಸು ಮಾಡುತ್ತಿಲ್ಲ. ಕರ್ನಾಟಕದಲ್ಲಿ ಭಾರಿ ಅಭಿಮಾನಿಗಳನ್ನು ಹೊಂದಿರುವ ತಲೈವಾಗೆ ಇಲ್ಲಿ ಚಿತ್ರ ಬಿಡುಗಡೆ ಆಗಲಿಲ್ಲವೆಂದರೆ ಆಗುವ ನಷ್ಟದ ಅಂದಾಜು ಇದೆ ಹಾಗಾಗಿ ಅವರು ಈಗಾಗಲೇ ಚಿತ್ರವನ್ನು ಪ್ರದರ್ಶಿಸಲು ಅನುವು ಮಾಡಿಕೊಡುವಂತೆ ಮನವಿ ಮಾಡಿದ್ದಾರೆ.
140 ಕೋಟಿ ವೆಚ್ಚದ ಈ ಚಿತ್ರವನ್ನು ರಂಜಿತ್ ನಿರ್ದೇಶಿಸಿದ್ದಾರೆ. ಹುಮಾ ಖುರೇಶಿ ನಾಯಕ ನಟಿಯಾಗಿ ನಟಿಸಿದ್ದಾರೆ. 'ಕಾಲಾ' ಚಿತ್ರದ ಬಗ್ಗೆ ಸಂಪೂರ್ಣ ಮಾಹಿತಿ ಇನ್ಫೋಗ್ರಾಫಿಕ್ಸ್ನಲ್ಲಿ ನೀಡಲಾಗಿದೆ.



-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications