Infographics: ಕರ್ನಾಟಕದ ಪ್ರಥಮ ಪ್ರಜೆಗಳ ಪಟ್ಟಿ 1956-2021
ಬೆಂಗಳೂರು, ಜುಲೈ 11: ಕರ್ನಾಟಕದ 19ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಜುಲೈ 11 ರಂದು ಬೆಳಗ್ಗೆ 10.30ಕ್ಕೆ ನೂತನ ರಾಜ್ಯಪಾಲರ ಪ್ರಮಾಣವಚನ ಕಾರ್ಯಕ್ರಮ ನಡೆಸಲಾಯಿತು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಕರ್ನಾಟಕದ ರಾಜ್ಯಪಾಲರ ಹೆಸರು ಹಾಗೂ ಅವರ ಅಧಿಕಾರಾವಧಿಯ ವಿವರ ಇಲ್ಲಿದೆ. ಈ ಪಟ್ಟಿಯಲ್ಲಿ ಹಂಗಾಮಿ ರಾಜ್ಯಪಾಲರ ಹೆಸರು ಸೇರಿದೆ.
ರಾಜ್ಯಸಭೆಯ ಸದಸ್ಯರಾಗಿದ್ದ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಎನ್ಡಿಎ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಂಪುಟ ಸಚಿವರಾಗಿದ್ದರು. ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ನಗ್ಡಾದಲ್ಲಿ 1948ರ ಮೇ 18ರಂದು ಪರಿಶಿಷ್ಟ ಕುಟುಂಬದಲ್ಲಿ ಜನಿಸಿರುವ 73 ವರ್ಷದ ಗೆಹ್ಲೋಟ್ ಅವರು, ಉಜ್ಜಯಿನಿಯ ವಿಕ್ರಮ್ ವಿಶ್ವವಿದ್ಯಾಲಯದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದಾರೆ. ಅವರಿಗೆ ಡಾ. ಬಿ.ಆರ್. ಅಂಬೇಡ್ಕರ್ ಸಾಮಾಜಿಕ ವಿಜ್ಞಾನಗಳ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಕ್ಷಣವೇ ನಿರ್ಗಮಿತ ರಾಜ್ಯಪಾಲರಾದ ವಜುಭಾಯಿ ಅವರು ಹೂಗುಚ್ಛ ನೀಡಿ ಅಭಿನಂದಿಸಿದರು. ಈ ಮುನ್ನ ರಾಜ್ಯದ ಮುಖ್ಯಕಾರ್ಯದರ್ಶಿಗಳು ರಾಷ್ಟ್ರಪತಿಯವರು ಹೊರಡಿಸಿರುವ ನೇಮಕಾತಿ ಆದೇಶವನ್ನು ವಾಚಿಸಿದರು.
19 ಮಂದಿ ರಾಜ್ಯಪಾಲರು: ಜಯಚಾಮರಾಜೇಂದ್ರ ಒಡೆಯರ್, ಎಸ್ಎಂ ಶ್ರೀನಾಗೇಶ್, ವಿ.ವಿ ಗಿರಿ, ಗೋಪಾಲ್ ಸ್ವರೂಪ್ ಪಾಠಕ್, ಧರ್ಮ ವೀರ, ಮೋಹಲ್ ಲಾಲ್ ಸುಖಾಡಿಯಾ, ಉಮಾಶಂಕರ್ ದೀಕ್ಷಿತ್, ಗೋವಿಂದ್ ನಾರಾಯಣ್, ಅಶೋಕ್ ನಾಥ್ ಬ್ಯಾನರ್ಜಿ, ಪಿ ವೆಂಕಟಸುಬ್ಬಯ್ಯ, ಭಾನು ಪ್ರತಾಪ್ ಸಿಂಗ್, ಖುರ್ಷದ್ ಅಲಂ ಖಾನ್, ವಿ.ಎಸ್ ರಮಾದೇವಿ, ಟಿ.ಎನ್ ಚತುರ್ವೇದಿ, ರಾಮೇಶ್ವರ್ ಠಾಕೂರ್, ಹನ್ಸ್ ರಾಜ್ ಭಾರದ್ವಾಜ್, ಕೊನಿಜೆಟಿ ರೋಸಯ್ಯ, ವಜುಭಾಯಿ ರುಡಾಭಾಯಿ ವಾಲ ಹಾಗೂ ಥಾವರ್ ಚಂದ್ ಗೆಹ್ಲೋಟ್
ಕರ್ನಾಟಕ ರಾಜ್ಯಪಾಲರು ಹಾಗೂ ಅಧಿಕಾರ ಅವಧಿಯ ಸಚಿತ್ರ ವಿವರ ಇಲ್ಲಿದೆ.. ಚಿತ್ರ ವಿನ್ಯಾಸ: ಭರತ್ ಎಚ್. ಸಿ



-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications