ಸರ್ದಾರ್ ಪಟೇಲ್ ಸ್ಮರಣೆಯ ಏಕತಾ ಪ್ರತಿಮೆ ನಿರ್ಮಾಣ ಟೈಮ್ ಲೈನ್
Recommended Video
ಬೆಂಗಳೂರು, ಅಕ್ಟೋಬರ್ 30: ಉಕ್ಕಿನ ಮನುಷ್ಯರೆಂದೇ ಖ್ಯಾತರಾದ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಸ್ಮರಣೆಗಾಗಿ ನಿರ್ಮಿಸಲಾಗಿರುವ 'ಏಕತಾ ಪ್ರತಿಮೆ' ಅಕ್ಟೋಬರ್ 31ರಂದು ಲೋಕರ್ಪಣೆಯಾಗಲಿದೆ.
'ಉಕ್ಕಿನ ಮನುಷ್ಯ' ಸರ್ದಾರ್ ಪಟೇಲ್ ಪ್ರತಿಮೆ ನಿರ್ಮಿಸಿದ ಶಿಲ್ಪಿ ಯಾರು?
ಪಟೇಲ್ ಅವರಿಗೆ ಸೂಕ್ತ ಗೌರವ ನೀಡಲು ಅವರ ಜನ್ಮದಿನವನ್ನು "ರಾಷ್ಟ್ರೀಯ ಏಕತಾ ದಿನ"ವನ್ನಾಗಿ ಆಚರಿಸಲು ಪ್ರಧಾನಿ ನಿರ್ಧರಿಸಿದ್ದಾರೆ. ಈ ಬೃಹತ್ ಪ್ರತಿಮೆಯು 182 ಮೀಟರ್ (ಸುಮಾರು 597 ಅಡಿ) ಎತ್ತರವಿರುವುದು ಹಾಗೂ ಅದನ್ನು ದಕ್ಷಿಣ ಗುಜರಾತ್ನಲ್ಲಿ ನರ್ಮದಾ ನದಿಗೆ ಕಟ್ಟಲಾಗಿರುವ ಸರ್ದಾರ್ ಸರೋವರ್ ಅಣೆಕಟ್ಟಿನ ಎದುರಿನಲ್ಲಿ ನಿರ್ಮಿಸಲಾಗಿದೆ.
ಗುಜರಾತಿನ ಕರಮ್ ಸಂದ್ ನಲ್ಲಿ 1875ರ ಅಕ್ಟೋಬರ್ 31ರಂದು ಜನಿಸಿದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಕಾನೂನು ಪದವಿ ಪಡೆದಿದ್ದರೂ ಗಾಂಧೀಜಿ ಅವರ ಕರೆಗೆ ಓಗೊಟ್ಟು ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಧುಮುಕಿ ಸ್ವತಂತ್ರ ಭಾರತಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದರು.
ಸರ್ದಾರ್ ಪ್ರತಿಮೆಗೆ 200 ಕೋಟಿ ಟ್ವೀಟ್ ಲೋಕದಲ್ಲಿ ಶಾಕ್
ಸ್ವಾತಂತ್ಯ ಸಿಕ್ಕ ನಂತರ ರಾಜ್ಯಗಳ ಪುನರ್ ವಿಂಗಡನೆಯಲ್ಲಿ ಮಹತ್ವದ ಪಾತ್ರ ವಹಿಸಿದರು. ಸುಮಾರು 500ಕ್ಕೂ ಅಧಿಕ ರಾಜಮನೆತನ ಅಡಿಯಲ್ಲಿದ್ದ ರಾಜ್ಯಗಳನ್ನು ನೆಹರೂ ಸರ್ಕಾರದ ಸುಪರ್ದಿಗೆ ತಂದರು. ಇದಲ್ಲದೆ ಗುಜರಾತಿನ ಖೇದ, ಬೊರ್ಸದ್, ಬಾರ್ಡೋಲಿಗಳಲ್ಲಿ ರೈತರ ಪರ ಹೋರಾಟದಲ್ಲೂ ಪಟೇಲ್ ಅವರು ಪಾಲ್ಗೊಂಡಿದ್ದರು.
75 ಸಾವಿರ ಕ್ಯೂಬಿಕ್ ಮೀಟರ್ ಕಾಂಕ್ರಿಟ್, 5700 ಮೆಟ್ರಿಕ್ ಟನ್ ಕಬ್ಬಿಣ, 18,500 ಉಕ್ಕು, 22,500 ಕಂಚು ಸೇರಿದಂತೆ ಮತ್ತಿತರ ವಸ್ತುಗಳನ್ನು ಬಳಸಿಕೊಳ್ಳಲಾಗುತ್ತದೆ. 3400 ನೌಕರರು, 250 ಇಂಜಿನಿಯರ್ ಗಳು ಸಾಧು ಬೇಟ್ ದ್ವೀಪದಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಎಲ್ ಅಂಡ್ ಟಿ ನಿರ್ಮಾಣದ ವಿಶ್ವದ ಅತಿ ಎತ್ತರದ ಪ್ರತಿಮೆ ನಿರ್ಮಿಸಿರುವ ಶಿಲ್ಪಿ ರಾಮ್ ವಾನ್ಜಿ ಸುತಾರ್.