Infographics; ಕಾಂಗ್ರೆಸ್ ನಾಯಕರ ಬಸ್ ಯಾತ್ರೆ ಮಾರ್ಗ
ಬೆಂಗಳೂರು, ಜನವರಿ 03; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಚುನಾವಣೆಗೆ ಪಕ್ಷ ಸಂಘಟನೆ ಮಾಡಲು ರಾಜ್ಯ ಕಾಂಗ್ರೆಸ್ ನಾಯಕರು ಬಸ್ ಯಾತ್ರೆ ಘೋಷಣೆ ಮಾಡಿದ್ದಾರೆ.
ಜನವರಿ 11ರಂದು ಕಾಂಗ್ರೆಸ್ ನಾಯಕರ ಬಸ್ ಯಾತ್ರೆಗೆ ಬೆಳಗಾವಿಯಲ್ಲಿ ಚಾಲನೆ ಸಿಗಲಿದೆ. ಈ ಬಸ್ ಯಾತ್ರೆಯ ಮೂಲಕವೇ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮ ಆರಂಭವಾಗಲಿದೆ ಎಂದು ಪಕ್ಷದ ನಾಯಕರು ಹೇಳಿದ್ದಾರೆ.
ಬೆಳಗಾವಿಯಲ್ಲಿ ಜನವರಿ 11ರಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವಾರು ನಾಯಕರು ಬಸ್ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಈ ಯಾತ್ರೆ 21 ಜಿಲ್ಲೆಗಳಲ್ಲಿ ಸಂಚಾರ ನಡೆಸಲಿದೆ.

ಯಾತ್ರೆ ಆರಂಭವಾಗುವ ಬೆಳಗಾವಿ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆಯಾಗಿದೆ. ಆದ್ದರಿಂದ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಎರಡು ಸಭೆಗಳನ್ನು ಆಯೋಜನೆ ಮಾಡಲಾಗಿದೆ.
ಬೆಳಗಾವಿಯಲ್ಲಿ ಕಾಂಗ್ರೆಸ್ನ ಪ್ರಥಮ ಅಧಿವೇಶನ ನಡೆದ ಹಿನ್ನಲೆಯಲ್ಲಿ ಬೆಳಗಾವಿಯಿಂದಲೇ ಕಾಂಗ್ರೆಸ್ ಪಕ್ಷದ ಪ್ರಚಾರ ರಥಕ್ಕೆ ಚಾಲನೆ ನೀಡಲಾಗುತ್ತದೆ.
ಬೆಳಗಾವಿಯಲ್ಲಿ ಜನವರಿ 11ರಂದು ಆರಂಭವಾಗುವ ಕಾಂಗ್ರೆಸ್ ಬಸ್ ಯಾತ್ರೆ ಜನವರಿ 27ರ ತನಕ ನಡೆಯಲಿದೆ. ಜನವರಿ 27ರಂದು ಯಾದಗಿರಿ ಮತ್ತು ಕಲಬುರಗಿಯಲ್ಲಿ ಸಮಾವೇಶ ನಡೆಯಲಿದೆ.
ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ ಬೇರೆ-ಬೇರೆಯಾಗಿ ಬಸ್ ಯಾತ್ರೆ ಮಾಡಲು ತೀರ್ಮಾನ ಮಾಡಿದ್ದರು. ಆದರೆ ಹೈಕಮಾಂಡ್ ನಾಯಕರು ಇದಕ್ಕೆ ತಡೆ ಹಾಕಿ ಇಬ್ಬರೂ ಒಟ್ಟಾಗಿ ಯಾತ್ರೆ ಮಾಡುವಂತೆ ಸೂಚನೆ ನೀಡಿದ್ದರು.
ಬಿಜೆಪಿ ಈಗಾಗಲೇ ಚುನಾವಣಾ ಸಿದ್ಧತೆ ಆರಂಭಿಸಿದ್ದು ಜನ ಸಂಕಲ್ಪ ಯಾತ್ರೆ ನಡೆಸುತ್ತಿದೆ. ಜೆಡಿಎಸ್ ಪಕ್ಷ ಎಚ್. ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಪಂಚರತ್ನ ರಥಯಾತ್ರೆ ನಡೆಸುತ್ತಿದೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications