Infographics; ಕಾಂಗ್ರೆಸ್ ನಾಯಕರ ಬಸ್ ಯಾತ್ರೆ ಮಾರ್ಗ
ಬೆಂಗಳೂರು, ಜನವರಿ 03; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಚುನಾವಣೆಗೆ ಪಕ್ಷ ಸಂಘಟನೆ ಮಾಡಲು ರಾಜ್ಯ ಕಾಂಗ್ರೆಸ್ ನಾಯಕರು ಬಸ್ ಯಾತ್ರೆ ಘೋಷಣೆ ಮಾಡಿದ್ದಾರೆ.
ಜನವರಿ 11ರಂದು ಕಾಂಗ್ರೆಸ್ ನಾಯಕರ ಬಸ್ ಯಾತ್ರೆಗೆ ಬೆಳಗಾವಿಯಲ್ಲಿ ಚಾಲನೆ ಸಿಗಲಿದೆ. ಈ ಬಸ್ ಯಾತ್ರೆಯ ಮೂಲಕವೇ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮ ಆರಂಭವಾಗಲಿದೆ ಎಂದು ಪಕ್ಷದ ನಾಯಕರು ಹೇಳಿದ್ದಾರೆ.
ಬೆಳಗಾವಿಯಲ್ಲಿ ಜನವರಿ 11ರಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವಾರು ನಾಯಕರು ಬಸ್ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಈ ಯಾತ್ರೆ 21 ಜಿಲ್ಲೆಗಳಲ್ಲಿ ಸಂಚಾರ ನಡೆಸಲಿದೆ.

ಯಾತ್ರೆ ಆರಂಭವಾಗುವ ಬೆಳಗಾವಿ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆಯಾಗಿದೆ. ಆದ್ದರಿಂದ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಎರಡು ಸಭೆಗಳನ್ನು ಆಯೋಜನೆ ಮಾಡಲಾಗಿದೆ.
ಬೆಳಗಾವಿಯಲ್ಲಿ ಕಾಂಗ್ರೆಸ್ನ ಪ್ರಥಮ ಅಧಿವೇಶನ ನಡೆದ ಹಿನ್ನಲೆಯಲ್ಲಿ ಬೆಳಗಾವಿಯಿಂದಲೇ ಕಾಂಗ್ರೆಸ್ ಪಕ್ಷದ ಪ್ರಚಾರ ರಥಕ್ಕೆ ಚಾಲನೆ ನೀಡಲಾಗುತ್ತದೆ.
ಬೆಳಗಾವಿಯಲ್ಲಿ ಜನವರಿ 11ರಂದು ಆರಂಭವಾಗುವ ಕಾಂಗ್ರೆಸ್ ಬಸ್ ಯಾತ್ರೆ ಜನವರಿ 27ರ ತನಕ ನಡೆಯಲಿದೆ. ಜನವರಿ 27ರಂದು ಯಾದಗಿರಿ ಮತ್ತು ಕಲಬುರಗಿಯಲ್ಲಿ ಸಮಾವೇಶ ನಡೆಯಲಿದೆ.
ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ ಬೇರೆ-ಬೇರೆಯಾಗಿ ಬಸ್ ಯಾತ್ರೆ ಮಾಡಲು ತೀರ್ಮಾನ ಮಾಡಿದ್ದರು. ಆದರೆ ಹೈಕಮಾಂಡ್ ನಾಯಕರು ಇದಕ್ಕೆ ತಡೆ ಹಾಕಿ ಇಬ್ಬರೂ ಒಟ್ಟಾಗಿ ಯಾತ್ರೆ ಮಾಡುವಂತೆ ಸೂಚನೆ ನೀಡಿದ್ದರು.
ಬಿಜೆಪಿ ಈಗಾಗಲೇ ಚುನಾವಣಾ ಸಿದ್ಧತೆ ಆರಂಭಿಸಿದ್ದು ಜನ ಸಂಕಲ್ಪ ಯಾತ್ರೆ ನಡೆಸುತ್ತಿದೆ. ಜೆಡಿಎಸ್ ಪಕ್ಷ ಎಚ್. ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಪಂಚರತ್ನ ರಥಯಾತ್ರೆ ನಡೆಸುತ್ತಿದೆ.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications