ಕಡಿಮೆಯಾದ ಮುಂಗಾರು ಮಳೆ; ಜಲಾಶಯಗಳ ನೀರಿನ ಮಟ್ಟ
ಬೆಂಗಳೂರು, ಜೂನ್ 28; ನಾಲ್ಕು ದಿನಗಳಿಂದ ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಕಡಿಮೆಯಾಗಿದೆ. ವಿವಿಧ ಜಿಲ್ಲೆಗಳಲ್ಲಿ ಜೂನ್ 29ರಿಂದ ಜುಲೈ ಮೊದಲವಾರದ ತನಕ ಮಳೆ ಸುರಿಯಲಿದೆ ಎಂದುದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಲ್ಲಿ ಜೂನ್ 28 ರಿಂದ ಜುಲೈ 1ರ ತನಕ ಧಾರಾಕಾರ ಮಳೆಯಾಗುವ ಮುನ್ಸೂಚನೆ ಕೊಟ್ಟಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಳೆ ಕಡಿಮೆಯಾಗಿರುವುದರಿಂದ ನದಿಗಳಲ್ಲಿ ಒಳ ಹರಿವಿನ ಪ್ರಮಾಣವೂ ಕಡಿಮೆಯಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗ ಜಿಲ್ಲೆಗಳಲ್ಲಿ ಜುಲೈನಲ್ಲಿ ಮಳೆ ಹೆಚ್ಚಾದರೆ ಡ್ಯಾಂಗಳ ಒಳಹರಿವು ಸಹ ಹೆಚ್ಚಾಗಲಿದೆ.

ಕೆಆರ್ಎಸ್ನಲ್ಲಿ ಎಷ್ಟು ನೀರಿದೆ?
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ಎಸ್ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ 28.70 ಮೀಟರ್. ಪೂರ್ಣ ಮಟ್ಟ 38.04. ಕಬಿನಿ ಮತ್ತು ಭದ್ರಾ ಜಲಾಶಯಗಳ ನೀರಿನ ಮಟ್ಟವೂ ಚಿತ್ರದಲ್ಲಿದೆ.

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ
ಲಿಂಗನಮಕ್ಕಿ ಜಲಾಶಯದ ಪೂರ್ಣ ಮಟ್ಟ 554.44 ಮೀಟರ್. ಇಂದಿನ ಮಟ್ಟ 544.19. ಹಾರಂಗಿ ಮತ್ತು ಹೇಮಾವತಿ ಡ್ಯಾಂಗಳ ನೀರಿನ ಮಟ್ಟದ ಮಾಹಿತಿ ಚಿತ್ರದಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಡ್ಯಾಂಗಳು
ತುಂಗಭದ್ರಾ ಜಲಾಶಯದ ಪೂರ್ಣ ಮಟ್ಟ 497.71 ಮೀಟರ್. ಇಂದಿನ ಮಟ್ಟ 490.20. ಆಲಮಟ್ಟಿ, ನಾರಾಯಣಪುರದ ನೀರಿನ ಮಟ್ಟದ ವಿವರವೂ ಚಿತ್ರದಲ್ಲಿದೆ.

ಘಟಪ್ರಭಾ, ಮಲಪ್ರಭಾ ನೀರಿನ ಮಟ್ಟ
ಘಟಪ್ರಭಾ ಜಲಾಶಯದ ಪೂರ್ಣ ಮಟ್ಟ 662.91 ಮೀಟರ್. ಇಂದಿನ ನೀರಿನ ಮಟ್ಟ 650.03 ಮೀಟರ್. ಮಲಪ್ರಭಾ ಮತ್ತು ಸೂಪಾ ಅಣೆಕಟ್ಟುಗಳ ನೀರಿನ ಮಟ್ಟವೂ ಚಿತ್ರದಲ್ಲಿದೆ.











Click it and Unblock the Notifications