Infographics; ಯುವ ಮತದಾರರು ಹೆಚ್ಚಿರುವ ಟಾಪ್ 5 ಜಿಲ್ಲೆಗಳು
ಬೆಂಗಳೂರು, ಜನವರಿ 10; ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿವೆ. ರಾಜ್ಯ ಚುನಾವಣಾ ಆಯೋಗ 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದೆ.
ರಾಜ್ಯದಲ್ಲಿ 224 ವಿಧಾನಸಭಾ ಕ್ಷೇತ್ರಗಳಿವೆ. ಈಗ ಚುನಾವಣಾ ಆಯೋಗ 221 ಕ್ಷೇತ್ರಗಳ ಪರಿಷ್ಕೃತ ಮತದಾರರ ಪಟ್ಟಿ ಪ್ರಕಟಿಸಿದೆ. ಚಿಕ್ಕಪೇಟೆ, ಶಿವಾಜಿನಗರ, ಮಹಾದೇವಪುರ ಕ್ಷೇತ್ರದ ಪಟ್ಟಿ ಜನವರಿ 15 ರಂದು ಪ್ರಕಟವಾಗಲಿದೆ ಎಂದು ಹೇಳಿದೆ.
ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಪ್ರಸ್ತುತ ಬಿಡುಗಡೆ ಮಾಡಿರುವ ಅಂತಿಮ ಮತದಾರರ ಪಟ್ಟಿಯ ಅನ್ವಯ 7 ಲಕ್ಷ ಯುವ ಮತದಾರರು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ.
ಯಾವ ಜಿಲ್ಲೆಯಲ್ಲಿ ಹೆಚ್ಚು ಮತದಾರರು ಸೇರ್ಪಡೆಗೊಂಡಿದ್ದಾರೆ ಎಂದು ಚುನಾವಣಾ ಆಯೋಗ ಟಾಪ್ 5 ಜಿಲ್ಲೆಗಳ ಪಟ್ಟಿಯನ್ನು ನೀಡಿದೆ. ಬೆಳಗಾವಿ ಮೊದಲ ಸ್ಥಾನದಲ್ಲಿದ್ದರೆ, ಹಾವೇರಿ ಜಿಲ್ಲೆ 5ನೇ ಸ್ಥಾನದಲ್ಲಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು?; ಬೆಳಗಾವಿಯಲ್ಲಿ 32,145 ಪುರುಷ, 22,667 ಮಹಿಳೆ, 8 ತೃತೀಯ ಲಿಂಗಿಗಳು ಸೇರಿ ಒಟ್ಟು 54,820 ಯುವ ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. 2ನೇ ಸ್ಥಾನದಲ್ಲಿ ತುಮಕೂರು ಜಿಲ್ಲೆ ಇದೆ. ಜಿಲ್ಲೆಯ ಒಟ್ಟು ಮತದಾರರು 34,628. ಇವರಲ್ಲಿ ಪುರುಷರು 19,227, ಮಹಿಳೆಯರು 15,393 ಮತ್ತು ತೃತೀಯ ಲಿಂಗಿಗಳು 8.
ಮೈಸೂರು ಜಿಲ್ಲೆ ಟಾಪ್ 3 ಸ್ಥಾನದಲ್ಲಿದೆ. ಒಟ್ಟು ಮತದಾರರು 30,650 ಆಗಿದೆ. ಇವರಲ್ಲಿ 16,428 ಪುರುಷ, 14,216 ಮಹಿಳೆ ಮತ್ತು 6 ತೃತೀಯ ಲಿಂಗಿಗಳು ಸೇರಿದ್ದಾರೆ. ಚಿತ್ರದುರ್ಗ ಜಿಲ್ಲೆ 31,050 ಒಟ್ಟು ಮತದಾರರ ಮೂಲಕ 4ನೇ ಸ್ಥಾನದಲ್ಲಿದೆ. ಹಾವೇರಿ ಜಿಲ್ಲೆ 27,045 ಹೊಸ ಮತದಾರರ ನೋಂದಣಿ ಮೂಲಕ 5ನೇ ಸ್ಥಾನದಲ್ಲಿದೆ.
ಇನ್ನು 221 ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ 6,50,532 ಮತದಾರರು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಎಂದರೆ 1,66,521 ಮತದಾರರು ಇದ್ದಾರೆ.
ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದ್ದು, ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಲು www.nvsp.in ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications