ತಗ್ಗುತ್ತಿದೆ ಮಳೆ ಅಬ್ಬರ, ಜಲಾಶಯದಲ್ಲಿ ಎಷ್ಟಿದೆ ನೀರಿನ ಪ್ರಮಾಣ?
ಕರ್ನಾಟಕದ ಬಹುತೇಕ ಎಲ್ಲೆದೆ ನವೆಂಬರ್ 8ರಿಂದ ಮಳೆಪ್ರಮಾಣ ತಗ್ಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಕೆಲವೆಡೆ ಮಳೆಯಾಗಬಹುದು. ಬೆಂಗಳೂರಿನಲ್ಲಿ ಮೋಡ ಕವಿದ ವಾತವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ 14 ಜಿಲ್ಲೆಗಳಲ್ಲಿ ನವೆಂಬರ್ 07ರ ವರೆಗೆ ಉತ್ತಮ ಮಳೆ ಸುರಿದಿತ್ತು. ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.
ಹಳೆ ಮೈಸೂರು ವಿಭಾಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಮಂಗಳೂರು ಮುಂತಾದೆಡೆ ಮಳೆಯಾಗಿದೆ. ಹವಾಮಾನ ಮುನ್ಸೂಚನೆಯಂತೆ ಮಳೆ ತಗ್ಗಲಿದ್ದು, ಮುಂಜಾನೆ ಮಂಜು ಕವಿದ ವಾತಾವರಣ ನಿರೀಕ್ಷಿಸಬಹುದು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಅತ್ಯಧಿಕ ಮಳೆ ಚಿಕ್ಕಮಗಳೂರಿನ ಕಡೂರಿನ ಚೀಲನಹಳ್ಳಿ ಎಂಬಲ್ಲಿ 35.5 ಮಿ.ಮೀ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ನ.8) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.
ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ: ರಾಜ್ಯದ ಮಲೆನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆಯಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಗುಡುಗು ಸಹಿತ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ
ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.
ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.
ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.