ಕೇರಳದಲ್ಲಿ ಅತಿ ಹೆಚ್ಚು, ಅತಿ ಕಡಿಮೆ ಅಂತರದಲ್ಲಿ ಗೆಲುವು ಯಾರಿಗೆ?
ಕೇರಳದೆಲ್ಲೆಡೆ ಕೆಂಪು ಬಾವುಟ ಜೋರಾಗಿದೆ. ಕೇರಳದ 140 ಸ್ಥಾನಗಳಿಗೆ ಮಲಪ್ಪುರಂ ಉಪ ಚುನಾವಣೆ ಏಪ್ರಿಲ್ 6 ರಂದು ಮತದಾನ ನಡೆದಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಿದೆ.
ವಿಜಯನ್ ನೇತೃತ್ವದ ಎಲ್ಡಿಎಫ್ 99 ಸ್ಥಾನ, ಯುಡಿಎಫ್ 41 ಸ್ಥಾನ ಗಳಿಸಿವೆ. ಬಿಜೆಪಿ ನೇತೃತ್ವದ ಎನ್ಡಿಎ ಯಾವುದೇ ಸ್ಥಾನ ಗೆಲ್ಲಲು ಸಾಧ್ಯವಾಗಿಲ್ಲ. 2016ರಲ್ಲಿಎಲ್ಡಿಎಫ್ 91 ಸ್ಥಾನ, ಯುಡಿಎಫ್ 47 ಸ್ಥಾನ, ಎನ್ಡಿಎ 1 ಹಾಗೂ ಇತರೆ 1 ಸ್ಥಾನ ಎಂದು ಫಲಿತಾಂಶ ಬಂದಿತ್ತು.
ಕಡಿಮೆ ಅಂತರದಲ್ಲಿ ಸೋಲು ಕಂಡ ಅಭ್ಯರ್ಥಿಗಳು, ಪಕ್ಷ ಯಾರ ವಿರುದ್ಧ ಯಾವ ಕ್ಷೇತ್ರದಲ್ಲಿ ಎಂಬುದರ ಗ್ರಾಫಿಕ್ಸ್ ಇಲ್ಲಿದೆ ನೋಡಿ..
{document1}
ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಬಿಜೆಪಿ ಅಧ್ಯಕ್ಷ ಸುರೇಂದ್ರನ್ ಅವರು ಮತ್ತೊಮ್ಮೆ ಅತ್ಯಂತ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದಾರೆ. ಕಳೆದ ಬಾರಿ 89 ಮತಗಳ ಅಂತರದಲ್ಲಿ ಸೋತಿದ್ದ ಸುರೇಂದ್ರನ್ ಈ ಬಾರಿ ಮುಸ್ಲೀಂ ಲೀಗ್ ಅಭ್ಯರ್ಥಿ ಅಶ್ರಫ್ ವಿರುದ್ಧ 745 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.
ಆದರೆ, ಅತಿ ಕಡಿಮೆ ಅಂತರದ ಸೋಲು ಕಂಡಿರುವುದು ಕೆ.ಪಿ.ಎಂ ಮುಸ್ತಫಾ. ಮುಸ್ಲಿಂ ಲೀಗ್ನ ನಜೀಬ್ ಕೆ ಅವರು ಪಕ್ಷೇತರ ಅಭ್ಯರ್ಥಿ ಮುಸ್ತಫಾರನ್ನು ಪೆರಿಂಥಲ್ಮನ್ನಾದಲ್ಲಿ ಕೇವಲ 38 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಕೇರಳದಲ್ಲಿ ಅತಿ ಹೆಚ್ಚು ಅಂತರದಿಂದ ಗೆಲುವು ಸಾಧಿಸಿದವರು: ಈ ಪೈಕಿ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಅವರು ರಾಜ್ಯದಲ್ಲೇ ಅತ್ಯಧಿಕ ಅಂತರ(60, 953 ಮತ)ದಿಂದ ಸಮೀಪದ ಪ್ರತಿಸ್ಪರ್ಧಿ ಆರ್ ಸಿಪಿಯ ಇಲ್ಲಿಕಲ್ ಅಗಸ್ಟಿ ಅವರನ್ನು ಸೋಲಿಸಿದ್ದಾರೆ. ಸಿಎಂ ಪಿಣರಾಯಿ ವಿಜಯನ್ ಅವರು ಧರ್ಮದಂ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಿ ರಘುನಾಥ್ ಅವರನ್ನು 50,123 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಮಿಕ್ಕಂತೆ, ಸಿಪಿಎಂನ ಮಧುಸೂದನ್ ಪಯ್ಯನೂರ್ ಕ್ಷೇತ್ರದಲ್ಲಿ 49, 780 ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದ ಪ್ರದೀಪ್ ಕುಮಾರ್ ಅವರನ್ನು ಸೋಲಿಸಿದ್ದಾರೆ. ಕಲ್ಲಿಯಚ್ಚೇರಿಯಲ್ಲಿಸಿಪಿಎಂನ ವಿಜಿನ್ ಅವರು ಕಾಂಗೆಸ್ ಪಕ್ಷದ ಬ್ರಿಜೇಶ್ ಕುಮಾರ್ ಅವರನ್ನು 44,393ಮತಗಳ ಅಂತರದಿಂದ ಸೋಲಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications