Infographics: ಕರ್ನಾಟಕ ಮುಖ್ಯಮಂತ್ರಿ ಪೀಠವನ್ನು ಅಲಂಕರಿಸಿದವರ ಪಟ್ಟಿ
ಭಾರತಕ್ಕೆ ಸ್ವಾತಂತ್ರ್ಯ ದಕ್ಕಿದಾಗಿನಿಂದ ಕೆ.ಸಿ.ರೆಡ್ಡಿಯವರಿಂದ ಹಿಡಿದು ಬಿ.ಎಸ್.ಯಡಿಯೂರಪ್ಪವರೆಗೆ ಹಲವು ಕರ್ನಾಟಕದ ಜನಪ್ರತಿನಿಧಿಗಳು ಮುಖ್ಯಮಂತ್ರಿ ಪೀಠವನ್ನು ಅಲಂಕರಿಸಿದ್ದಾರೆ. ಬಿಜೆಪಿ ನಾಯಕ ಯಡಿಯೂರಪ್ಪ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ, 2 ವರ್ಷ ಅವಧಿ ಪೂರೈಸಿದ ಸಂಭ್ರಮದ ನಡುವೆ ತಮ್ಮ ಸ್ಥಾನಕ್ಕೆ ಜುಲೈ 26, 2021ರಂದು ರಾಜೀನಾಮೆ ನೀಡಿದ್ದಾರೆ. ನಾಲ್ಕು ಬಾರಿ ಸಿಎಂ ಸ್ಥಾನಕ್ಕೇರಿದರೂ ಒಮ್ಮೆ ಕೂಡಾ ಯಡಿಯೂರಪ್ಪ ಪೂರ್ಣಾವಧಿ ಸಿಎಂ ಆಗಲು ಸಾಧ್ಯವಾಗಲಿಲ್ಲ.
ಕರ್ನಾಟಕ ಎಂಬ ಹೆಸರು ಅಧಿಕೃತಗೊಳ್ಳುವುದಕ್ಕೂ ಮುನ್ನ ಮೈಸೂರು ಹಾಗೂ ಕೊಡಗು ರಾಜ್ಯ ಕೂಡಾ ಸಿಎಂಗಳನ್ನು ಕಂಡಿದೆ. 1947ರಲ್ಲಿ ಮೈಸೂರು ರಾಜ್ಯಕ್ಕೆ ಕೆ ಚೆಂಗಲರಾಯ ರೆಡ್ಡಿ ಅವರು ಮುಖ್ಯಮಂತ್ರಿಯಾಗಿದ್ದರು. ನಂತರ ಕೆಂಗಲ್ ಹನುಮಂತಯ್ಯ ಹಾಗೂ ಕಡಿದಾಳ್ ಮಂಜಪ್ಪ ಅವರು ಸಿಎಂ ಆಗಿದ್ದರು. ಕೊಡಗು ರಾಜ್ಯಕ್ಕೆ ಪೂಣಚ 1952ರಲ್ಲಿ ಸಿಎಂ ಆಗಿದ್ದರು.
ಮೊದಲ ವಿಧಾನಸಭೆ ಅಧಿವೇಶನ ಎದುರಿಸಿದವರು ಸಿಎಂ ಎಸ್ ನಿಜಲಿಂಗಪ್ಪನವರು. ಕಾಂಗ್ರೆಸ್ ಪಕ್ಷದಿಂದ ಅತಿ ಹೆಚ್ಚು ಸಿಎಂಗಳಾಗಿದ್ದಾರೆ. ದೀರ್ಘಾವಧಿ ಸಿಎಂಗಳ ಪಟ್ಟಿಯಲ್ಲಿ ಕಾಂಗ್ರೆಸ್ಸಿನ ದೇವರಾಜ ಅರಸು, ಸಿದ್ದರಾಮಯ್ಯ, ಜನತಾ ಪಾರ್ಟಿಯ ರಾಮಕೃಷ್ಣ ಹೆಗಡೆ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಸಿಎಂ ಆಗಿ 18 ವರ್ಷ ಬಳಿಕ ಮತ್ತೊಮ್ಮೆ ವೀರೇಂದ್ರ ಪಾಟೀಲ್ ಸಿಎಂ ಆಗಿದ್ದು ವಿಶೇಷ.
ಎಚ್. ಡಿ ದೇವೇಗೌಡ ಅವರು ಸಿಎಂ ಸ್ಥಾನದಿಂದ ಪಿಎಂ ಸ್ಥಾನಕ್ಕೇರಿದರು. ಬಿ. ಡಿ ಜತ್ತಿ ಅವರು ಉಪರಾಷ್ಟ್ರಪತಿಯಾದರು. ಕರ್ನಾಟಕದಲ್ಲಿ ಒಟ್ಟು 6 ಬಾರಿ ರಾಷ್ಟ್ರಪತಿ ಆಡಳಿತ ಹೇರಲಾಗಿದೆ. ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿ ತನಕ ಮುಖ್ಯಮಂತ್ರಿಯಾದವರ ಇನ್ಫೋಗ್ರಾಫಿಕ್ಸ್ ಇಲ್ಲಿದೆ.. ಚಿತ್ರ ವಿನ್ಯಾಸ: ಭರತ್ ಎಚ್. ಸಿ.

-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ












Click it and Unblock the Notifications