ಮಧ್ಯ ಪ್ರದೇಶ ಚುನಾವಣೆ: ಕಾಂಗ್ರೆಸ್-ಬಿಜೆಪಿ ನಡುವೆ ಅಂತರ ಬಹು ತೆಳು
ಭೋಪಾಲ್, ಡಿಸೆಂಬರ್ 12: ಮಧ್ಯ ಪ್ರದೇಶದ ವಿಧಾನಸಭೆ ಚುನಾವಣೆ ಪಂಚ ರಾಜ್ಯ ಚುನಾವಣೆಯಲ್ಲಿ ಅತ್ಯಂತ ಕುತೂಹಲಕಾರಿಯಾಗಿತ್ತು. ಅಂತಿಮಾಗಿ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮೆಯಾದರೂ ಬಿಜೆಪಿ-ಕಾಂಗ್ರೆಸ್ ನಡುವೆ ಅಂತರ ಕಡಿಮೆ.
224 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಅಂತಿಮ ಫಲಿತಾಂಶದ ಪ್ರಕಾರ ಕಾಂಗ್ರೆಸ್ 114 ಸ್ಥಾನಗಳಲ್ಲಿ ಗೆದ್ದಿದೆ. ಬಿಜೆಪಿ 109 ಸ್ಥಾನಗಳಲ್ಲಿ ಗೆದ್ದಿದೆ. ಬಿಎಸ್ಪಿ ಎರಡು, ಎಸ್ಪಿ 1 ಮತ್ತು ಪಕ್ಷೇತರರು 4 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಬಹುಮತಕ್ಕೆ 116 ಸ್ಥಾನ ಬೇಕಿತ್ತು.
ಕಾಂಗ್ರೆಸ್ ಪಕ್ಷವು ಬಿಜೆಪಿಗಿಂತಲೂ ಐದು ಸ್ಥಾನ ಹೆಚ್ಚು ಗಳಿಸಿದೆ ಆದರೆ ಶೇಕಡಾವಾರು ಮತಗಳ ಲೆಕ್ಕ ಹಿಡಿದರೆ ಬಿಜೆಪಿಯು ಕಾಂಗ್ರೆಸ್ಗಿಂತಲೂ ಹೆಚ್ಚು ಮತಗಳನ್ನು ಪಡೆದಿದೆ.

ಕಾಂಗ್ರೆಸ್ ಪಕ್ಷ 40.09% ಮತ ಗಳಿಸಿದ್ದರೆ. ಬಿಜೆಪಿಯು 41% ಮತ ಗಳಿಸಿದೆ. ಕಾಂಗ್ರೆಸ್ ಗಳಿಸಿರುವ ಒಟ್ಟು ಮತ 15,595,153. ಬಿಜೆಪಿಯು 15,642,980 ಮತಗಳನ್ನು ಗಳಿಸಿದೆ. ಎರಡೂ ಪಕ್ಷಕ್ಕೆ ಇರುವ ಅಂತರ ಕೇವಲ 47,827 ಮತಗಳು ಮಾತ್ರ.
ಇದು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವಿನ ಈ ವರೆಗಿನ ಅತಿ ಕಡಿಮೆ ಅಂತರ ಆಗಿರಲಿಕ್ಕೂ ಸಾಕು. ಒಬ್ಬ ವ್ಯಕ್ತಿಯ ಗೆಲುವಿನ ಅಂತರಕ್ಕಿಂತಲೂ ಕಡಿಮೆ ಮತಗಳ ಅಂತರ ಎರಡೂ ಪಕ್ಷಗಳ ನಡುವೆ ಇದೆ. ಇದು ಎರಡೂ ಪಕ್ಷಗಳ ನಡುವೆ ಇದ್ದ ತೀವ್ರ ಜಿದ್ದಾ-ಜಿದ್ದಿಯನ್ನು ಸೂಚಿಸುತ್ತದೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 80 ಸ್ಥಾನಗಳಲ್ಲಿ ಗೆದ್ದಿತ್ತು. ಬಿಜೆಪಿ 104 ಸ್ಥಾನಗಳಲ್ಲಿ ಗೆದ್ದಿತ್ತು. ಆದರೆ ಕಾಂಗ್ರೆಸ್ ಪಕ್ಷವು ಬಿಜೆಪಿಗಿಂತಲೂ 2% ಮತಗಳು ಅಂದರೆ 6,58,002 ಮತಗಳನ್ನು ಹೆಚ್ಚಿಗೆ ಗಳಿಸಿತ್ತು. ಮಹಾರಾಷ್ಟ್ರದಲ್ಲಿ ಬಿಜೆಪಿ ಹೆಚ್ಚಿನ ಮತಗಳನ್ನು ಗಳಿಸಿದೆ ಆದರೂ ಅಂತರ ಬಹು ಕಡಿಮೆ.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications