ಎಂಕೆ ಸ್ಟಾಲಿನ್ ಸಚಿವ ಸಂಪುಟ: ಯಾರಿಗೆ ಯಾವ ಖಾತೆ?
ಚೆನ್ನೈ, ಮೇ 7: ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಮುಖ್ಯಸ್ಥ, ಶಾಸಕಾಂಗ ಪಕ್ಷದ ನಾಯಕ ಮುತ್ತುವೇಲ್ ಕರುಣಾನಿಧಿ ಸ್ಟಾಲಿನ್ ಅವರ ಆಸೆ ಕೊನೆಗೂ ಈಡೇರಿದೆ. ತಮಿಳುನಾಡಿನಲ್ಲಿ ಮತ್ತೊಮ್ಮೆ ಡಿಎಂಕೆ ಅಧಿಕಾರಾವಧಿ ಆರಂಭವಾಗಿದೆ.
ತಮಿಳುನಾಡಿನ ರಾಜಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಸ್ಟಾಲಿನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಭನ್ವಾರಿಲಾಲ್ ಪುರೋಹಿತ್ ಅವರು ಸ್ಟಾಲಿನ್ ಹಾಗೂ ಸಚಿವ ಸಂಪುಟ ಸದಸ್ಯರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ತಮಿಳುನಾಡು ವಿಧಾನಸಭೆ ಚುನಾವಣೆ 2021ರಲ್ಲಿ ಎಐಎಡಿಎಂಕೆ- ಬಿಜೆಪಿ ಮೈತ್ರಿಕೂಟವನ್ನು ಸೋಲಿಸುವ ಮೂಲಕ ಸ್ಟಾಲಿನ್ ನೇತೃತ್ವದಲ್ಲಿ ಡಿಎಂಕೆ ಜಯಭೇರಿ ಬಾರಿಸಿದೆ. ಈ ಮೂಲಕ ದಶಕದ ಬಳಿಕ ಡಿಎಂಕೆ ಅಧಿಕಾರ ಪಡೆದುಕೊಂಡಿದೆ. ಏಪ್ರಿಲ್ 6ರಂದು ನಡೆದ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಕೂಟವು 234 ಸ್ಥಾನಗಳ ಪೈಕಿ ಡಿಎಂಕೆ 133 ಸ್ಥಾನ ಗಳಿಸಿದರೆ, ಕಾಂಗ್ರೆಸ್ 18 ಸ್ಥಾನ, ವಿಸಿಕೆ 4 ಹಾಗೂ ಎಡಪಕ್ಷಗಳು ತಲಾ 2 ಸ್ಥಾನ ಗಳಿಸಿವೆ. ಎಐಎಡಿಎಂಕೆ 66, ಬಿಜೆಪಿ 4 ಸ್ಥಾನ ಪಡೆದುಕೊಂಡಿವೆ.

ಸ್ಟಾಲಿನ್ ಸಚಿವ ಸಂಪುಟದಲ್ಲಿ 33 ಸದಸ್ಯರಿದ್ದು, ಹಿರಿಯರಾದ ದೊರೈಮುರುಗನ್ ಅವರಿಗೆ ಜಲ ಸಂಪನ್ಮೂಲ ಖಾತೆ ನೀಡಲಾಗಿದೆ. ಚೆನ್ನೈನ ಮಾಜಿ ಮೇಯರ್ ಸುಬ್ರಮಣಿಯನ್, ಪಿಕೆ ಶೇಖರ್ ಬಾಬು ಮುಂತಾದವರು ಮೊದಲ ಬಾರಿಗೆ ಸಚಿವರಾಗುತ್ತಿದ್ದಾರೆ. ಸ್ಟಾಲಿನ್ ಕ್ಯಾಬಿನೆಟ್ನಲ್ಲಿ ಇಬ್ಬರು ಶಾಸಕಿಯರಿಗೆ ಸ್ಥಾನ ಸಿಕ್ಕಿದೆ. ಸಮಾಜ ಕಲ್ಯಾಣ ಹಾಗೂ ಮಹಿಳಾ ಸಬಲೀಕರಣ ಖಾತೆಯನ್ನು ಪಿ ಗೀತಾ ಅವರಿಗೆ ವಹಿಸಲಾಗಿದೆ. ಆದಿ ದ್ರಾವಿಡರ ಕಲ್ಯಾಣ ಖಾತೆಯನ್ನು ಎನ್ ಕಯಾಲ್ ವಿಳಿ ಸೆಲ್ವರಾಜ್ ಅವರಿಗೆ ನೀಡಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications