Infographics: ಫೆ.25ರಂದು ಕರ್ನಾಟಕದ ಜಿಲ್ಲೆಗಳಲ್ಲಿ ಇಂಧನ ದರ ಹೇಗಿದೆ?
ನವದೆಹಲಿ, ಫೆಬ್ರವರಿ 25: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಫೆಬ್ರವರಿ 25ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಿಲ್ಲ. ಬಹುತೇಕ ಎರಡೂವರೆ ತಿಂಗಳ ಹಿಂದೆ ಪೆಟ್ರೋಲ್, ಡೀಸೆಲ್ ದರದಲ್ಲಿ ವ್ಯತ್ಯಾಸ ಕಂಡು ಬಂದಿದ್ದು ಆ ಬಳಿಕ ಬೆಲೆಯು ಸ್ಥಿರವಾಗಿದೆ. ಆದರೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಕೊಂಚ ಏರಿಳಿತ ಕಂಡು ಬಂದಿದೆ. ಇಂದು ದಕ್ಷಿಣ ಕನ್ನಡದಲ್ಲಿ ಪೆಟ್ರೋಲ್ ಬೆಲೆ 100.46 ರೂಪಾಯಿ ಆಗಿದೆ. ನಿನ್ನೆ ದಕ್ಷಿಣ ಕನ್ನಡದಲ್ಲಿ ಪೆಟ್ರೋಲ್ ಬೆಲೆ 99.84 ರೂ ಆಗಿತ್ತು. ಇನ್ನು ಬೆಂಗಳೂರು ಗ್ರಾಮಾಂತರದಲ್ಲಿ ಪೆಟ್ರೋಲ್ ದರ 100.58 ರೂ ಆಗಿದೆ. ನಿನ್ನೆ ಬೆಂಗಳೂರು ಗ್ರಾಮಾಂತರದಲ್ಲಿ ಪೆಟ್ರೋಲ್ ದರ 100.65 ರೂ ಆಗಿತ್ತು.
2021ರ ಮೇ 4ರಿಂದ ನವೆಂಬರ್ 4ರವರೆಗೆ ಪೆಟ್ರೋಲ್ ಒಟ್ಟು 60 ಬಾರಿ ಹಾಗೂ ಡೀಸೆಲ್ 55 ಬಾರಿ ಏರಿಕೆಯಾಗಿತ್ತು. ಭಾರತ ಸರ್ಕಾರ ಮೂಲ ಬೆಲೆಯ ಶೇಕಡ 125 ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32.98 ರೂ. ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ. ಕಳೆದ ವರ್ಷದ ನವೆಂಬರ್ 4ರಂದು ಕೇಂದ್ರ ಸರ್ಕಾರ ತೆರಿಗೆ ಇಳಿಕೆ ಮಾಡಿದ ಬಳಿಕ ಅನೇಕ ರಾಜ್ಯಗಳು ವ್ಯಾಟ್, ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿವೆ.
ಉಕ್ರೇನ್-ರಷ್ಯಾ ಯುದ್ಧದ ಹಿನ್ನೆಲೆ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿರುವ ಹಿನ್ನೆಲೆಯಿಂದಾಗಿ ಕೆಲವೇ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಾಣುವ ಸಾಧ್ಯತೆ ಇದೆ. ರಾಜ್ಯದ ನಗರಗಳ ಪೆಟ್ರೋಲ್ ಡಿಸೇಲ್ ಬೆಲೆ ಈ ಕೆಳಗಿದೆ. ಮುಂದೆ ಓದಿ..

ಕರ್ನಾಟಕದಲ್ಲಿ ಪೆಟ್ರೋಲ್ ದರ ಹೇಗಿದೆ?
ಬೆಂಗಳೂರಿನಲ್ಲಿ ಹಲವಾರು ದಿನಗಳಿಂದ ಪೆಟ್ರೋಲ್ ಪ್ರತಿ ಲೀಟರ್ಗೆ 100.58 ರೂಪಾಯಿಯಿದ್ದು ಸ್ಥಿರತೆಯನ್ನು ಕಾಯ್ದುಕೊಂಡಿದೆ. ಡೀಸೆಲ್ ದರವು ಪ್ರತಿ ಲೀಟರ್ಗೆ 85.01 ರೂಪಾಯಿ ಆಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೆಟ್ರೋಲ್ಗೆ ಅತ್ಯಧಿಕ ಬೆಲೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 102.86 ರೂ ಪ್ರತಿ ಲೀಟರ್ ಪೆಟ್ರೋಲ್ಗೆ ಇದ್ದು, ಕರ್ನಾಟಕದಲ್ಲೇ ಅತ್ಯಧಿಕ ಬೆಲೆ ಎನಿಸಿಕೊಂಡಿದೆ. ನಿನ್ನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ 100.62 ರೂಪಾಯಿ ಆಗಿತ್ತು. ಇನ್ನು ನಿನ್ನೆ ದಾವಣಗೆರೆ ಅಧಿಕ ಪೆಟ್ರೋಲ್ ಬೆಲೆ ಇತ್ತು. ಉಳಿದಂತೆ ಇತರೆ ಜಿಲ್ಲೆಗಳಲ್ಲಿ 99 ರಿಂದ 101ರೂ ನಷ್ಟಿದೆ ಎಂದು ಗುಡ್ರಿಟರ್ನ್ಸ್.ಇನ್ ವರದಿ ಮಾಡಿದೆ.

ರಾಜ್ಯದಲ್ಲಿ ಡೀಸೆಲ್ ಬೆಲೆ ಎಷ್ಟಿದೆ?
ಬೆಂಗಳೂರಿನಲ್ಲಿ ಕಳೆದ ತಿಂಗಳು ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ಗೆ ಸರಾಸರಿ 30-35 ಪೈಸೆಯಷ್ಟು ಏರಿಕೆಯಾಗಿತ್ತು. ನಂತರ ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿದ್ದು, ಬೆಂಗಳೂರಲ್ಲಿ ಪ್ರತಿ ಲೀಟರ್ಗೆ 85.01 ರೂ ಇಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 86.97 ರೂ ಪ್ರತಿ ಲೀಟರ್ ನಷ್ಟಿದ್ದು, ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ನಿನ್ನೆ ಉತ್ತರ ಕನ್ನಡ ಜಿಲ್ಲೆಯಲ್ಲಿ 85.07 ರೂ ಪ್ರತಿ ಲೀಟರ್ ನಷ್ಟಿತ್ತು. ದಾವಣಗೆರೆ, ಕೊಡಗು, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ 86 ರೂ ಪ್ಲಸ್ ದರ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಅತ್ಯಧಿಕ 84 ರಿಂದ 85 ರೂಪಾಯಿಯಷ್ಟಿದೆ.

ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್, ಡೀಸೆಲ್ ದರ ಬದಲಾವಣೆ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ದರ ಏರಿಳಿತ
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಕಳೆದ ವಾರ ಯುಎಸ್ನ ಬೆಂಚ್ಮಾರ್ಕ್ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್ಗೆ 70 ಡಾಲರ್ಗಳಷ್ಟು ಕುಸಿದಿತ್ತು. ಹಾಗೆಯೇ, ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್ಗೆ 72 ರೂ. ಕಡಿಮೆಯಾಗಿತ್ತು. ಈಗ ಉಕ್ರೇನ್ ಹಾಗೂ ರಷ್ಯಾ ನಡುವೆ ಯುದ್ಧದ ಪರಿಣಾಮವಾಗಿ ಬ್ರೆಂಟ್ ಕಚ್ಚಾತೈಲದ ದರ ಏರಿಕೆ ಕಂಡಿದೆ. ಈ ಸಮಯಕ್ಕೆ 98.35 ಡಾಲರ್ ಪ್ರತಿ ಬ್ಯಾರೆಲ್ ನಂತಿದೆ (1 USD=75.14 ರುಪಾಯಿ) ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. (ಒನ್ಇಂಡಿಯಾ ಸುದ್ದಿ)
-
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಮಾರ್ಚ್ 26ರ ದರಪಟ್ಟಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್











Click it and Unblock the Notifications