Petrol And Diesel Price Today: ಏ.4ರಂದು ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ
ಬೆಂಗಳೂರು, ಏಪ್ರಿಲ್ 4: ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು. ಪರಿಣಾಮವಾಗಿ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂಧನ ದರವನ್ನು ಏರಿಕೆ ಮಾಡುತ್ತಿವೆ. ಇಂದು (ಸೋಮವಾರ, ಏಪ್ರಿಲ್ 4) ಕೂಡ ಇಂಧನ ಏರಿಕೆ ಕಂಡಿದೆ.
ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಕಳೆದ ಮಾರ್ಚ್ 22ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಅದಾದ ನಂತರ ಕಳೆದ 14 ದಿನಗಳಲ್ಲಿ ಇಂಧನ ಬೆಲೆ ಪ್ರತಿ ಲೀಟರ್ಗೆ ಸರಾಸರಿ 8.50 ರೂ. ಹೆಚ್ಚಾಗಿದೆ. ನಿನ್ನೆಯೂ (ಭಾನುವಾರ) ಇಂಧನ ದರ ಹೆಚ್ಚಳವಾಗಿತ್ತು. ಇದೀಗ ಸೋಮವಾರವಾದ ಇಂದು(ಏಪ್ರಿಲ್ 4) ಸಹ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಹಿನ್ನಲೆ ಈಗ ಭಾರತದಲ್ಲೂ ತೈಲ ಬೆಲೆ ಏರಿಕೆ ಆರಂಭವಾಗಿದೆ. ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ 40 ಪೈಸೆ ಹೆಚ್ಚಳವಾಗಿದೆ. ದೆಹಲಿಯಲ್ಲಿ 40 ಪೈಸೆ ಹೆಚ್ಚಳದ ಮೂಲಕ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 103.81 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ 40 ಪೈಸೆ ಹೆಚ್ಚಳದ ಮೂಲಕ 95.07 ರೂ. ದಾಖಲಾಗಿದೆ.

ರಾಜ್ಯದ ಕೆಲವು ನಗರಗಳಲ್ಲಿ ಏರಿಕೆ ಕಂಡು ಬಂದಿದ್ದು, ಇಂದು ಚಿತ್ರದುರ್ಗದಲ್ಲಿ ಪೆಟ್ರೋಲ್ ಬೆಲೆ 111.39 ರೂಪಾಯಿ ಆಗಿದೆ. ನಿನ್ನೆ ಚಿತ್ರದುರ್ಗದಲ್ಲಿ ಪೆಟ್ರೋಲ್ ಬೆಲೆ 110.24 ರೂ. ಆಗಿತ್ತು. ಇನ್ನು ದಾವಣಗೆರೆಯಲ್ಲಿ ಪೆಟ್ರೋಲ್ ದರ 110.89 ಆಗಿದೆ. ನಿನ್ನೆ ದಾವಣಗೆರೆಯಲ್ಲಿ ಪೆಟ್ರೋಲ್ ದರ 110.95 ರೂ. ಆಗಿತ್ತು. ರಾಜ್ಯದ ನಗರಗಳ ಪೆಟ್ರೋಲ್ ಡಿಸೇಲ್ ಬೆಲೆ ಈ ಕೆಳಗಿದೆ. ಮುಂದೆ ಓದಿ..

ಕರ್ನಾಟಕದಲ್ಲಿ ಪೆಟ್ರೋಲ್ ದರ ಹೇಗಿದೆ?
ಬೆಂಗಳೂರಿನಲ್ಲಿ ಹಲವಾರು ದಿನಗಳಿಂದ ಪೆಟ್ರೋಲ್ ಪ್ರತಿ ಲೀಟರ್ಗೆ 100.58 ರೂಪಾಯಿಯಿದ್ದು ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ಆದರೆ ಮಾರ್ಚ್ 22ರಂದು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ಇಂದು ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಪೆಟ್ರೋಲ್ ಬೆಲೆಯು 109.41 ರೂಪಾಯಿ ಆಗಿದೆ. ಯಾದಗಿರಿ, ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಪೆಟ್ರೋಲ್ ಬೆಲೆ ಅತ್ಯಧಿಕ ಇದೆ. ಚಿಕ್ಕಮಗಳೂರಿನಲ್ಲಿ 110.53 ರೂ. ಪ್ರತಿ ಲೀಟರ್ ಪೆಟ್ರೋಲ್ಗೆ ಇದ್ದರೆ, ಯಾದಗಿರಿಯಲ್ಲಿ 110.21 ಇದ್ದು, ಉಳಿದಂತೆ ಇತರೆ ಜಿಲ್ಲೆಗಳಲ್ಲಿ 109 ರಿಂದ 110 ರೂ. ನಷ್ಟಿದೆ ಎಂದು ಗುಡ್ರಿಟರ್ನ್ಸ್.ಇನ್ ವರದಿ ಮಾಡಿದೆ.

ರಾಜ್ಯದಲ್ಲಿ ಡೀಸೆಲ್ ಬೆಲೆ ಎಷ್ಟಿದೆ?
ಬೆಂಗಳೂರಿನಲ್ಲಿ ಈ ಹಿಂದೆ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ಗೆ ಸರಾಸರಿ 30-35 ಪೈಸೆಯಷ್ಟು ಏರಿಕೆಯಾಗಿತ್ತು. ನಂತರ ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿ, ಬೆಂಗಳೂರಲ್ಲಿ ಪ್ರತಿ ಲೀಟರ್ಗೆ 85.01 ರೂ. ಆಗಿತ್ತು. ಆದರೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ಮಾರ್ಚ್ 22ರಂದು ಬೆಲೆ ಏರಿಕೆ ಆಗಿದೆ. ಇಂದು ಬೆಂಗಳೂರಿನಲ್ಲಿ ಡೀಸೆಲ್ ಬೆಲೆಯು 93.23 ರೂ. ಆಗಿದೆ. ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯಲ್ಲಿ 94 ರೂ.ಗಿಂತ ಹೆಚ್ಚಿದೆ. ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ನಿನ್ನೆ ದಾವಣಗೆರೆ ಜಿಲ್ಲೆಯಲ್ಲಿ 94.48 ರೂ. ಪ್ರತಿ ಲೀಟರ್ನಷ್ಟಿತ್ತು. ಹಾಗೆಯೇ ಚಿತ್ರದುರ್ಗ ಜಿಲ್ಲೆಯಲ್ಲಿ ನಿನ್ನೆ ಪ್ರತಿ ಲೀಟರ್ ಡೀಸೆಲ್ ಬೆಲೆ 93.84 ರೂಪಾಯಿ ಆಗಿತ್ತು. ಉಳಿದಂತೆ ಇತರೆ ಜಿಲ್ಲೆಗಳಲ್ಲಿ 91 ರಿಂದ 93 ರೂ. ನಷ್ಟಿದೆ ಎಂದು ಗುಡ್ರಿಟರ್ನ್ಸ್.ಇನ್ ವರದಿ ಮಾಡಿದೆ.
ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್, ಡೀಸೆಲ್ ದರ ಬದಲಾವಣೆ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. ಇಂದು ದೇಶದ ಮೂರು ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡಿದೆ. ನಿನ್ನೆ ಕೂಡಾ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಕೆ ಮಾಡಲಾಗಿದೆ.
ಜಾಗತಿಕ ತೈಲ ಮಾರುಕಟ್ಟೆಯಲ್ಲಿ ದರ ಏರಿಳಿತ
ಪ್ರಸ್ತುತ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಇದರ ಪರಿಣಾಮವಾಗಿ ಭಾರತದಲ್ಲಿಯೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ಹೆಚ್ಚಳವಾಗಿದೆ. ಈ ಹಿಂದೆ ಯುಎಸ್ನ ಬೆಂಚ್ಮಾರ್ಕ್ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್ಗೆ 70 ಡಾಲರ್ಗಳಷ್ಟು ಕುಸಿದಿತ್ತು. ಹಾಗೆಯೇ, ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್ಗೆ 72 ರೂ. ಕಡಿಮೆಯಾಗಿತ್ತು. ಆದರೆ ಈಗ ಉಕ್ರೇನ್ ಹಾಗೂ ರಷ್ಯಾ ನಡುವೆ ಯುದ್ಧದ ಪರಿಣಾಮವಾಗಿ ಬ್ರೆಂಟ್ ಕಚ್ಚಾತೈಲದ ದರ ಏರಿಕೆ ಕಂಡಿದೆ. ಈ ಸಮಯಕ್ಕೆ 104.6 ಡಾಲರ್ ಪ್ರತಿ ಬ್ಯಾರೆಲ್ ನಂತಿದೆ (1 USD=76.39 ರುಪಾಯಿ). ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. (ಒನ್ಇಂಡಿಯಾ ಸುದ್ದಿ)
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications