Infographics; ಕರ್ನಾಟಕದಲ್ಲಿ ಯಾರಿಗೆ ಎಷ್ಟು ಮೀಸಲಾತಿ?
ಬೆಂಗಳೂರು, ಅಕ್ಟೋಬರ್ 10; ಕರ್ನಾಟಕದಲ್ಲಿ ಮೀಸಲಾತಿ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸುವ ಕುರಿತು ಸರ್ಕಾರ ಘೋಷಣೆ ಮಾಡಿದೆ.
ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣವನ್ನು ಶೇ 15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ 3 ರಿಂದ 7ಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸಲು ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.

ಸರ್ವಪಕ್ಷ ಸಭೆಯ ಬಳಿಕ ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ನ್ಯಾಯಮೂರ್ತಿ ಎಚ್. ಎನ್. ನಾಗಮೋಹನದಾಸ್ ಆಯೋಗದ ಶಿಫಾರಸಿನಂತೆ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ 15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 3 ರಿಂದ 7ಕ್ಕೆ ಹೆಚ್ಚಿಸಲು ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ" ಎಂದು ಹೇಳಿದ್ದರು.
"ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳದಿಂದ ಇತರ ಯಾವುದೇ ಸಮುದಾಯಗಳ ಮೀಸಲಾತಿ ಕಡಿತವಾಗುವುದಿಲ್ಲ. ಎಲ್ಲಾ ಸಮುದಾಯಗಳ ಮೀಸಲಾತಿ ಪ್ರಮಾಣ ಈಗಿನಂತೆ ಮುಂದುವರೆಯಲಿದೆ. ಎಸ್ಸಿ, ಎಸ್ಟಿ ಸಮುದಾಯಗಳ ಮೀಸಲಾತಿ ಪ್ರಮಾಣ ಮಾತ್ರ ಹೆಚ್ಚಳವಾಗಲಿದೆ" ಎಂದು ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದ್ದರು.

ಬಳಿಕ ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ಪ್ರಮಾಣ ಏರಿಕೆ ಮಾಡಲು ಒಪ್ಪಿಗೆ ನೀಡಲಾಗಿತ್ತು. ಈಗ ಕರ್ನಾಟಕದಲ್ಲಿ ಯಾವ ಸಮುದಾಯಕ್ಕೆ ಎಷ್ಟು ಮೀಸಲಾತಿ ಇದೆ ಎಂದು ಚರ್ಚೆಗಳು ನಡೆಯುತ್ತಿವೆ.
ರಾಜ್ಯದಲ್ಲಿ ಯಾರಿಗೆ ಎಷ್ಟು ಮೀಸಲಾತಿ ಇದೆ ಎಂಬ ವಿವರ ಇಲ್ಲಿದೆ. ಪರಿಶಿಷ್ಟರಿಗೆ ಶೇ 18 ಮತ್ತು ಹಿಂದುಳಿದ ವರ್ಗಕ್ಕೆ ಶೇ 32ರಷ್ಟು ಮೀಸಲಾತಿ ಸದ್ಯ ಇದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಕೆಟಗರಿ-1, ಕೆಟಗರಿ -2 (ಎ), ಕೆಟಗರಿ 2 (ಬಿ), ಕೆಟಗರಿ 3 (ಎ), ಕೆಟಗರಿ 3 (ಬಿ)ಗೆ ಎಷ್ಟು ಮೀಸಲಾತಿ ಇದೆ ಎಂಬ ವಿವರಗಳು ಇಲ್ಲಿವೆ.
ಪರಿಶಿಷ್ಟ ಜಾತಿ ಶೇ 15, ಪರಿಶಿಷ್ಟ ಪಂಗಡ ಶೇ 03, ಹಿಂದುಳಿದ ವರ್ಗ ಕೆಟಗರಿ-1 ಶೇ 04, ಕೆಟಗರಿ 2 (ಎ) ಶೇ 15, ಕೆಟಗರಿ 2 (ಬಿ) ಶೇ 04, ಕೆಟಗರಿ 3 (ಎ) ಶೇ 04, ಕೆಟಗರಿ 3 (ಬಿ) ಶೇ 05 ಮೀಸಲಾತಿ ಇದೆ.
-
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications