ಗುಜರಾತ್, ಹಿಮಾಚಲ ಚುನಾವಣೆ, ವಶಕ್ಕೆ ಪಡೆದ ವಸ್ತುಗಳ ಪಟ್ಟಿ
ನವದೆಹಲಿ, ನವೆಂಬರ್ 11; ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ರಂದು ಮತದಾನ ನಡೆಯಲಿದೆ. ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್ 8ರಂದು ಪ್ರಕಟವಾಗಲಿದೆ.
ಕೇಂದ್ರ ಚುನಾವಣಾ ಆಯೋಗ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ವಶಪಡಿಸಿಕೊಂಡ ಮದ್ಯ, ಹಣ, ಐಷಾರಾಮಿ ವಸ್ತುಗಳ ಮಾಹಿತಿ ನೀಡಿದೆ. 2017ಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಹಿಮಾಚಲ ಪ್ರದೇಶದಲ್ಲಿ 5 ಪಟ್ಟು ಹೆಚ್ಚಿನ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಅಕ್ರಮ ರಹಿತವಾಗಿ ಚುನಾವಣೆ ನಡೆಯಲು ಜನರು ಸಹ ಸಹಕಾರ ನೀಡಬೇಕು ಎಂದು ಕೇಂದ್ರ ಚುನಾವಣಾ ಆಯೋಗ ಮನವಿ ಮಾಡಿದೆ. C-vigil ಅಪ್ಲಿಕೇಶನ್ ಬಳಕೆ ಮಾಡುವ ಮೂಲಕ ಅಕ್ರಮ ತಡೆಗಟ್ಟಲು ಸಹಕರಿಸಿ ಎಂದು ಆಯೋಗ ಹೇಳಿದೆ.
ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಹಿಮಾಚಲ ಪ್ರದೇಶದಲ್ಲಿ 50.28 ಕೋಟಿ ರೂ.ಗಳು ಮತ್ತು ಗುಜರಾತ್ ರಾಜ್ಯದಲ್ಲಿ 71.88 ಕೋಟಿ ರೂ.ಗಳ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಗುಜರಾತ್ ವಿಧಾನಸಭೆ ಚುನಾವಣೆ ಡಿಸೆಂಬರ್ 1 ಮತ್ತು 5ರಂದು ನಡೆಯಲಿದೆ.

ವಿಶೇಷ ಕಣ್ಗಾವಲು, ವಿವಿಧ ಇಲಾಖೆಗಳ ಸಹಯೋಗ, ಜನರ ಸಹಕಾರದ ಮೂಲಕ ನ್ಯಾಯಸಮ್ಮತ ಚುನಾವಣೆ ನಡೆಯುವಂತೆ ಚುನಾವಣಾ ಆಯೋಗ ಕ್ರಮಗಳನ್ನು ಕೈಗೊಂಡಿದೆ. ಚುನಾವಣಾ ದಿನಾಂಕ ಘೋಷಣೆಯ ಪತ್ರಿಕಾಗೋಷ್ಠಿಯಲ್ಲಿಯೇ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅಕ್ರಮ ರಹಿತವಾಗಿ ಚುನಾವಣೆ ನಡೆಸಲು ಆಯೋಗ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದರು.
ಯಾವ ರಾಜ್ಯದಲ್ಲಿ ಎಷ್ಟು ವಶಕ್ಕೆ?; ಗುಜರಾತ್ ರಾಜ್ಯದಲ್ಲಿ ಇದುವರೆಗೂ ನಡೆಸಿದ ಕಾರ್ಯಾಚರಣೆಯಲ್ಲಿ 71.88 ಕೋಟಿ ರೂ. ಮೊತ್ತದ ವಸ್ತುಗಳನ್ನು ಆಯೋಗ ವಶಕ್ಕೆ ಪಡೆದಿದೆ. ಹಿಮಾಚಲ ಪ್ರದೇಶದಲ್ಲಿ 50.28 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. 2017ರ ಚುನಾವಣೆಯಲ್ಲಿ 9.03 ಕೋಟಿ ರೂ. ಮೌಲ್ಯದ ವಸ್ತುಗಳು ಸಿಕ್ಕಿದ್ದವು.
ಎರಡೂ ರಾಜ್ಯಗಳಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನವೇ ಖರ್ಚು ವೆಚ್ಚಗಳ ಮೇಲೆ ನಿಗಾ ಇಡಲಾಗಿತ್ತು. ಇದಕ್ಕಾಗಿ ಅನುಭವಿಗಳಾದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಎರಡೂ ರಾಜ್ಯಗಳಲ್ಲಿ ಸೂಕ್ಷ್ಮ, ಅತಿ ಸೂಕ್ಷ್ಮ ವಿಧಾನಸಭಾ ಕ್ಷೇತ್ರಗಳನ್ನು ಗುರುತಿಸಲಾಗಿದೆ. ಇಲ್ಲಿ ವೆಚ್ಚದ ಮೇಲೆ ನಿಗಾ ಇಡಲು ಗ್ರಾಮ ಮಟ್ಟದ ತಂಡಗಳನ್ನು ರಚನೆ ಮಾಡಲಾಗಿದೆ.
ಗುಜರಾತ್ ರಾಜ್ಯದಲ್ಲಿ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಸುಮಾರು 1,10,000 ಲೀಟರ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ, ಇದರ ಮಾರುಕಟ್ಟೆ ಮೌಲ್ಯ ಸುಮಾರು 3.86 ಎಂದು ಅಂದಾಜಿಸಲಾಗಿದೆ.
ರಾಜ್ಯದ ಮುಂದ್ರಾ ಬಂದರಿನಿಂದ ಸರಿಯಾದ ದಾಖಲೆಗಳು ಇಲ್ಲದ ಸುಮಾರು 64 ಕೋಟಿ ರೂ. ಮೊತ್ತದ ಆಟಿಕೆಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ರಾಜ್ಯಕ್ಕೆ 69 ವೆಚ್ಚ ಪರಿವೀಕ್ಷಕರನ್ನು ನೇಮಕಮಾಡಲಾಗಿದೆ. ಅತಿ ಹೆಚ್ಚು ವೆಚ್ಚವಾಗಲಿದೆ ಎಂಬ 27 ವಿಧಾನಸಭಾ ಕ್ಷೇತ್ರಗಳನ್ನು ಆಯೋಗ ಪಟ್ಟಿ ಮಾಡಿದೆ.

ಕೇಂದ್ರ ಚುನಾವಣಾ ಆಯೋಗದ ತಂಡ ಎರಡು ರಾಜ್ಯಗಳಿಗೆ ಭೇಟಿ ನೀಡಿದಾಗ ಜಿಲ್ಲಾಡಳಿತ, ಪೊಲೀಸ್ ಇಲಾಖೆಗಳ ಜೊತೆ ಸರಣಿ ಸಭೆಗಳನ್ನು ನಡೆಸಿದ್ದು, ಅಕ್ರಮ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೇಶನಗಳನ್ನು ನೀಡಿದೆ. ಹಿಮಾಚಲ ಪ್ರದೇಶಕ್ಕೆ ಆಯೋಗ ಭೇಟಿ ನೀಡಿದಾಗ ಗಣಿಗಾರಿಕೆ ನಡೆಯುವ ಪ್ರದೇಶಗಳಲ್ಲಿ ಕಣ್ಗಾವಲು ಹೆಚ್ಚಿಸುವಂತೆ ಸೂಚನೆ ನೀಡಲಾಗಿತ್ತು.
ಆದಾಯ ಇಲಾಖೆಯ ಸಹಕಾರ; ಆದಾಯ ತೆರಿಗೆ ಇಲಾಖೆಯ ತನಿಖಾ ವಿಭಾಗ ಹಿಮಾಚಲ ಪ್ರದೇಶದ 27 ಪ್ರದೇಶಗಳಲ್ಲಿ ಕಲ್ಲು ಗಣಿಗಾರಿಕೆ ಪ್ರದೇಶದ ಮೇಲೆ ದಾಳಿ ಮಾಡಿತ್ತು, ದಾಳಿಯ ವೇಳೆ ಹಣವನ್ನು ವಶಕ್ಕೆ ಪಡೆಯಲಾಗಿತ್ತು. ಇದೇ ತಂಡ ರಾಜ್ಯದಲ್ಲಿ ಅಕ್ರಮವಾಗಿ ಮದ್ಯ ತಯಾರು ಮಾಡುವ ಘಟಕದ ಮೇಲೆಯೂ ದಾಳಿ ಮಾಡಿತ್ತು. ಚುನಾವಣಾ ಆಯೋಗವು ರಾಜ್ಯದಲ್ಲಿ ಅಕ್ರಮ ತಡೆಯಲು 23 ವೆಚ್ಚ ವೀಕ್ಷಕರನ್ನು ನೇಮಕ ಮಾಡಿದೆ.
ನವೆಂಬರ್ 7ರಂದು ಚುನಾವಣಾ ಆಯೋಗ ಹಿಮಾಚಲ ಪ್ರದೇಶದ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿ (ಗೃಹ), ಡಿಜಿಪಿ, ಡಿಜಿ (ಆದಾಯ ತೆರಿಗೆ), ಅಬಕಾರಿ ಆಯುಕ್ತರು, ಐಜಿಪಿಗಳು ಅಕ್ಕಪಕ್ಕದ ರಾಜ್ಯಗಳ ಚುನಾವಣಾ ಆಯುಕ್ತರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿತು. ಅಕ್ಕಪಕ್ಕದ ರಾಜ್ಯಗಳ ಗಡಿಗಳ ಮೇಲೆ ಸಹ ಕಣ್ಗಾವಲು ವಹಿಸುವಂತೆ ಸೂಚನೆ ನೀಡಿತ್ತು.
ಚುನಾವಣೆ ನಡೆಯುವ 72 ಗಂಟೆಗಳ ಮೊದಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇದುವರೆಗೂ ವಶಪಡಿಸಿಕೊಂಡ ಹಣ, ಮದ್ಯ, ಡ್ರಗ್ಸ್, ಐಷಾರಾಮಿ ವಸ್ತುಗಳು, ಬಟ್ಟೆಗಳ ವಿವರಗಳನ್ನು ಆಯೋಗ ಬಿಡುಗಡೆ ಮಾಡಿದೆ.
-
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಇಸ್ರೇಲ್-ಯುಎಸ್ ಜಂಟಿ ದಾಳಿ ಅಬ್ಬರ: ಇರಾನ್ಗೆ ಉತ್ತರಾಧಿಕಾರಿ ನೇಮಕ, ಇಂದಿನ ಪ್ರಮುಖಾಂಶಗಳು ಇಲ್ಲಿವೆ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications