ಸುಪ್ರೀಂ ಕೋರ್ಟ್ ನಲ್ಲಿ 3 ಮಹತ್ವದ ಪ್ರಕರಣಗಳ ತೀರ್ಪು: ಚಿತ್ರ ಮಾಹಿತಿ
ನವದೆಹಲಿ, ಸೆಪ್ಟೆಂಬರ್ 26: ಸತತ ಮೂರು ಮಹತ್ವದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಇಂದು ಐತಿಹಾಸಿಕ ತೀರ್ಪುಗಳನ್ನು ನೀಡಿದೆ.
ಅಕ್ಟೋಬರ್ 2 ರಂದು ನಿವೃತ್ತರಾಗುತ್ತಿರುವ ಸಿಜೆಐ ದೀಪಕ್ ಮಿಶ್ರಾ ಅವರು, ತಮ್ಮ ಸೇವಾವಧಿಯ ಕಾಲದಲ್ಲಿ ನೀಡಿದ ಮಹತ್ವದ ತೀರ್ಪುಗಳಲ್ಲಿ ಇಂದಿನ ಮೂರೂ ತೀರ್ಪುಗಳೂ ಸೇರಿವೆ.
ಸರ್ಕಾರಿ ಉದ್ಯೋಗದ ಬಡ್ತಿಯಲ್ಲಿ ಮೀಸಲಾತಿ ಅಗತ್ಯವಿಲ್ಲ ಸುಪ್ರೀಂ ಐತಿಹಾಸಿಕ ತೀರ್ಪು
ಎಸ್ಸಿ ಎಸ್ಟಿ ಬಡ್ತಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣ, ಆಧಾರ್ ಸಾಂವಿಧಾನಿಕ ಮಾನ್ಯತೆಗೆ ಸಂಬಂಧಿಸಿದ ಪ್ರಕರಣ ಮತ್ತು ಸುಪ್ರೀಂ ಕೋರ್ಟ್ ವಿಚಾರಣೆಗಳನ್ನು ನೇರ ಪ್ರಸಾರ ಮಾಡುವಂತೆ ಕೋರಿದ್ದ ಅರ್ಜಿ ವಿಚಾರಣೆಗಳ ತೀರ್ಪು ಇಂದು ಹೊರಬಿದ್ದಿದೆ.
ಜೊತೆಗೆ ನ್ಯಾ.ರಂಜನ್ ಗೊಗೊಯ್ ಅವರನ್ನು ಮುಂದಿನ ಮುಖ್ಯ ನ್ಯಾಯ ಮೂರ್ತಿಗಳನ್ನಾಗಿ ನೇಮಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದೇ ವಜಾಗೊಳಿಸಿದ್ದು, ಸರ್ವೋಚ್ಚ ನ್ಯಾಯಾಲಯದಲ್ಲಿದ್ದು ಬಿಡುವಿಲ್ಲದ ಚಟುವಟಿಕೆ ಇತ್ತು!
ಸುಪ್ರೀಂ ತೀರ್ಪಿನ ನಂತರ ಯಾವ್ಯಾವುದಕ್ಕೆ ಆಧಾರ್ ಕಡ್ಡಾಯ? ಯಾವುದಕ್ಕೆ ಕಡ್ಡಾಯವಲ್ಲ?
ಈ ಎಲ್ಲಾ ಮಹತ್ವದ ಪ್ರಕರಣಗಳಲ್ಲಿ ಸುಪ್ರೀಂ ನೀಡಿದ ತೀರ್ಪು ಮತ್ತು ಅವುಗಳ ಮುಖ್ಯಾಂಶಗಳು ಇಲ್ಲಿವೆ.