Infographics: ಹುಲಿಗಳ ಲೆಕ್ಕದಲ್ಲಿ ಮಧ್ಯಪ್ರದೇಶ ನಂ.1, ಕರ್ನಾಟಕ ನಂ.2
ಬೆಂಗಳೂರು, ಜುಲೈ 29: ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಭಾರತದ ಹುಲಿ ಗಣತಿಯ 2018ರ ಅಂದಾಜು ಲೆಕ್ಕವನ್ನು ಪ್ರಧಾನಿ ಮೋದಿ ಅವರು ಸೋಮವಾರದಂದು ಪ್ರಕಟಿಸಿದ್ದಾರೆ. ಅಂತಾರಾಷ್ಟ್ರೀಯ ಹುಲಿದಿನದ ಸಂಭ್ರಮಾಚರಣೆಯನ್ನು ಈ ಅಂಕಿ ಸಂಖ್ಯೆ ಇನ್ನಷ್ಟು ಹೆಚ್ಚಿಸಿವೆ.
ದೇಶದಲ್ಲಿ ಈಗ ಹುಲಿಗಳ ಸಂಖ್ಯೆ ಅಂದಾಜು 3 ಸಾವಿರವನ್ನು ದಾಟಿದೆ. ಹುಲಿಗಳು ಇರಲು ಸಾಧ್ಯವೇ ಇಲ್ಲ ಎನ್ನಬಹುದಾದ ಪ್ರದೇಶಗಳಲ್ಲೂ ಕೂಡ ಹುಲಿಗಳು ಕಂಡು ಬಂದಿವೆ.
ಹುಲಿ ಗಣತಿ: ನಾಲ್ಕು ವರ್ಷಗಳಿಗೊಮ್ಮೆ ಸುಮಾರು 10 ಕೋಟಿ ರು ವೆಚ್ಚದಲ್ಲಿ 40,000ಕ್ಕೂ ಅಧಿಕ ಅರಣ್ಯ ಸಿಬ್ಬಂದಿ, 4,00,000 ಚದರ ಕಿಲೋ ಮೀಟರ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಹುಲಿಯ ಹೆಜ್ಜೆ ಗುರುತು ಪತ್ತೆ ಹಚ್ಚಿ, ಅಂದಾಜು ಲೆಕ್ಕ ಹಾಕಿ ವರದಿ ತಯಾರಿಸುತ್ತಾರೆ.
ವಿಶ್ವದಲ್ಲಿರುವ ಹುಲಿಗಳ ಸಂಖ್ಯೆ ಒಟ್ಟು 3,890 ಹುಲಿಗಳದ್ದು ಇವುಗಳ ಪೈಕಿ ಭಾರತದಲ್ಲಿ 2226 ಹುಲಿಗಳಿವೆ. ಮಧ್ಯಪ್ರದೇಶದಲ್ಲಿ 526 ಹುಲಿಗಳಿದ್ದು ಅಗ್ರಸ್ಥಾನಕ್ಕೇರಿದೆ. ಕರ್ನಾಟಕದಲ್ಲಿ ಹುಲಿಗಳ ಸಂಖ್ಯೆ 524ಹುಲಿಗಳಿದ್ದು, ಕಡಿಮೆ ಅಂತರದಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದೆ. 442 ಹುಲಿಗಳೊಂದಿಗೆ ಉತ್ತರಾಖಂಡ್ ಮೂರನೇ ಸ್ಥಾನದಲ್ಲಿದೆ.
ಕಳೆದ ಗಣತಿಯಲ್ಲಿ 2014ರಲ್ಲಿ ಕರ್ನಾಟಕ 406 ಹುಲಿಗಳೊಂದಿಗೆ ಅಗ್ರಸ್ಥಾನದಲ್ಲಿತ್ತು. ಮಧ್ಯಪ್ರದೇಶ 308 ಹುಲಿಗಳೊಂದಿಗೆ 2ನೇ ಸ್ಥಾನದಲ್ಲಿತ್ತು. ಉತ್ತರಾಖಂಡ್ 340 ಹುಲಿ ಹಾಗೂ ತಮಿಳುನಾಡು 229 ಹುಲಿಗಳನ್ನು ಹೊಂದಿದ್ದವು.

2018ರಲ್ಲಿ ಛತ್ತೀಸ್ ಗಢ ಹಾಗೂ ಮಿಜೋರಾಂನಲ್ಲಿ ಹುಲಿಗಳ ಸಂಖ್ಯೆಯಲ್ಲಿ ಇಳಿಮುಖ ಕಂಡು ಬಂದಿದ್ದರೆ, ಒಡಿಶಾದಲ್ಲಿ ಹೆಚ್ಚಿನ ಪ್ರಗತಿ ಕಂಡು ಬಂದಿಲ್ಲ. ಮಧ್ಯಪ್ರದೇಶದಲ್ಲಿ ಬಾಂಧಾವ್ ಗಢ, ಪೆಂಚ್, ಕಾನ್ಹಾ ಹುಲಿ ಅಭಯಾರಣ್ಯ ಸೇರಿ 6 ಸಂರಕ್ಷಣಾ ವಲಯಗಳಿವೆ. ಕರ್ನಾಟಕದಲ್ಲಿ ಭದ್ರಾ, ಬಂಡೀಪುರ, ನಾಗರಹೊಳೆ, ಬಿಳಿಗಿರಿರಂಗನ ಬೆಟ್ಟ, ದಾಂಡೇಲಿ- ಅಂಶಿಗಳಲ್ಲಿ ಹುಲಿ ಅಭಯಾರಣ್ಯಗಳಿವೆ.

-
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications