Infographics; ಮಹಿಳಾ ಮತದಾರರಲ್ಲಿ ಉಡುಪಿ ಜಿಲ್ಲೆಗೆ ಮೊದಲ ಸ್ಥಾನ
ಬೆಂಗಳೂರು, ಜನವರಿ 20; ರಾಜ್ಯ ಚುನಾವಣಾ ಆಯೋಗ 2023ರ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಮತದಾರರ ಪಟ್ಟಿಯ ಅಂತಿಮ ಪರಿಷ್ಕರಣೆ ಮಾಡಿದೆ. ಸಂಕ್ಷಿಪ್ತ ಪರಿಷ್ಕರಣೆ ನಂತರ ಪ್ರಕಟವಾದ ಅಂತಿಮ ಮತದಾರರ ಪಟ್ಟಿ ಪ್ರಕಾರ , ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಮಹಿಳಾ ಮತದಾರರನ್ನು ಹೊಂದಿದೆ.
ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಮಹಿಳಾ ಮತದಾರರಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ಮಹಿಳಾ ಮತದಾರರಿದ್ದಾರೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾ ಆಯುಕ್ತರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆ ನಂತರ ರಾಜ್ಯದಲ್ಲಿನ ಒಟ್ಟು ಮತದಾರರು 5,05,48,553. ಇವರಲ್ಲಿ 2,54,49,725 ಪುರುಷ ಮತ್ತು 2,50,94,326 ಮಹಿಳಾ ಮತದಾರರಿದ್ದಾರೆ.

ಉಡುಪಿ ಜಿಲ್ಲೆಯಲ್ಲಿನ ಒಟ್ಟು ಮತದಾರರು 10,16,245. ಇವರಲ್ಲಿ 4,90,060 ಪುರುಷರು ಮತ್ತು 5,26,173 ಮಹಿಳಾ ಮತದಾರರು ಮತ್ತು 12 ತೃತೀಯ ಲಿಂಗಿಗಳು.
ಉಡುಪಿ ಜಿಲ್ಲೆಯ ವಿಧಾನಸಭಾ ಕ್ಷೇತ್ರದಲ್ಲಿ ಬೈಂದೂರಿನಲ್ಲಿ ಪುರುಷರು 1,12,126 ಪುರುಷರು ಮತ್ತು 1,17,421 ಮಹಿಳಾ ಮತದಾರರು ಇದ್ದಾರೆ. ಕುಂದಾಪುರದದಲ್ಲಿ 98,224 ಪುರುಷರು ಮತ್ತು 1,06,298 ಮಹಿಳಾ ಮತದಾರರು ಇದ್ದಾರೆ.
ಉಡುಪಿಯಲ್ಲಿ ಒಟ್ಟು ಮತದಾರರು 2,11,631. ಇವರಲ್ಲಿ 1,02,192 ಪುರುಷರು ಮತ್ತು 1,09,439 ಮಹಿಳಾ ಮತದಾರರು. ಕಾಪುವಿನಲ್ಲಿ 88,114 ಪುರುಷರು ಮತ್ತು 95,968 ಮಹಿಳಾ ಮತದಾರರು ಇದ್ದಾರೆ. ಕಾರ್ಕಳದಲ್ಲಿ 89,404 ಪುರುಷರು ಮತ್ತು 97,047 ಮಹಿಳಾ ಮತದಾರರಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಅವಧಿಯಲ್ಲಿ 13816 ಯುವ ಮತದಾರರು ನೋಂದಣಿಯಾಗಿದ್ದು, ಇದರಲ್ಲೂ ಸಹ ಯುವತಿಯರ ನೋಂದಣಿ ಸಂಖ್ಯೆ ಅಧಿಕವಾಗಿದೆ.
"ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮತದಾರರು ಇರುವುದರಿಂದ ಜಿಲ್ಲೆಯು ರಾಜ್ಯಕ್ಕೆ ಮಾದರಿಯಾಗಿದೆ" ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications