ಉತ್ತರಾಖಂಡ್ ಫಲಿತಾಂಶ: ಬಿಜೆಪಿ, ಕಾಂಗ್ರೆಸ್ ಶೇಕಡಾವಾರು ಮತ ಗಳಿಕೆ
ಹರಿದ್ವಾರ, ಮಾರ್ಚ್ 10: ಉತ್ತರಾಖಂಡದ 70 ವಿಧಾನಸಭಾ ಕ್ಷೇತ್ರಗಳ ಚುನಾವಣೆಯು ಫೆಬ್ರವರಿ 14 ರಂದು ಮತದಾನ ನಡೆಸಲಾಯಿತು. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಈಗ ಮತ್ತೊಮ್ಮೆ ಅಧಿಕಾರ ಗದ್ದುಗೆ ಹಿಡಿಯಲು ಮುಂದಾಗಿದೆ.
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3, 7 ರಂದು ಚುನಾವಣೆ ನಡೆದಿದೆ. ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆದಿದೆ. ಪಂಜಾಬ್ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆದಿದೆ. ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಸಲಾಗಿದ್ದು, ಮಾರ್ಚ್ 10ರಂದು ಫಲಿತಾಂಶ ಹೊರ ಬರಲಿದೆ.
ಉತ್ತರಾಖಂಡ ಚುನಾವಣೆಯಲ್ಲಿ ಅಂತಿಮ ಮತದಾನದ ಶೇಕಡಾ 62.51 ರಷ್ಟಿದೆ.ಹರಿದ್ವಾರದಲ್ಲಿ ಅತಿ ಹೆಚ್ಚು ಅಂದರೆ ಶೇ.68.37 ಮತ್ತು ಕಡಿಮೆ ಅಲ್ಮೋರಾ ಜಿಲ್ಲೆಯಲ್ಲಿ ಶೇ.50.65 ಅತೀ ಕಡಿಮೆ ಮತದಾನ ದಾಖಲಾಗಿದೆ. ರಾಜ್ಯದಲ್ಲಿ 2017ರ ವಿಧಾನಸಭಾ ಚುನಾವಣೆಯಲ್ಲಿ ಶೇ.65.56ರಷ್ಟು ಮತದಾನವಾಗಿತ್ತು.

ಸಮಯ 17:18 ರಂತೆ
ಸದ್ಯದ ಟ್ರೆಂಡ್ನಂತೆ 70 ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳಲ್ಲಿ ಮಾತ್ರ ಫಲಿತಾಂಶ ಹೊರ ಬಂದಿದೆ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, 15 ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ. ಕಾಂಗ್ರೆಸ್ 15 ರಲ್ಲಿ ಮುನ್ನಡೆ ಹಾಗೂ 4 ಸ್ಥಾನ ಪಡೆದುಕೊಂಡಿದೆ. ಬಹುಜನ ಸಮಾಜವಾದಿ ಪಕ್ಷ 2 ಸ್ಥಾನದಲ್ಲಿ ಹಾಗೂ ಇತರೆ 2 ರಲ್ಲಿ ಮುನ್ನಡೆ ಪಡೆದಿವೆ.
ಚುನಾವಣಾ ಆಯೋಗ ವೆಬ್ ತಾಣದ ಅಧಿಕೃತ ಮಾಹಿತಿಯಂತೆ ಸಮಯ 17:11ಕ್ಕೆ ಶೇಕಡಾವಾರು ಮತ ಗಳಿಕೆ ವಿವರ ಹೀಗಿದೆ:
ಬಿಜೆಪಿ ಶೇ 44.29
ಎಎಪಿ: ಶೇ 3.32
ಕಾಂಗ್ರೆಸ್ ಶೇ 37.97
ಬಿಎಸ್ಪಿ: ಶೇ 4.86
ನೋಟಾ: ಶೇ 0.87
ಇತರೆ ಶೇ 8.25
2017ರಲ್ಲಿ ಶೇಕಡಾವಾರು ಮತ ಗಳಿಕೆ
ಬಿಜೆಪಿ ಶೇ 46.5
ಕಾಂಗ್ರೆಸ್ ಶೇ 33.5
ಬಿಎಸ್ಪಿ: ಶೇ 7
ಇತರೆ ಶೇ 3
ಸ್ವತಂತ್ರ/ಪಕ್ಷೇತರ: ಶೇ 10
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications