Infographics: ಕರ್ನಾಟಕ ತಾಪಮಾನ: ಇನ್ನೆರಡು ದಿನ ಚಳಿ, ಮಂಜು, ಗಾಳಿ
ಬೆಂಗಳೂರು, ಡಿಸೆಂಬರ್ 30: ರಾಜ್ಯದ ಹಲವು ಭಾಗಗಳಲ್ಲಿ ಹೊಸ ವರ್ಷಾಚರಣೆಯ ಸಿದ್ಧತೆ ಜೊತೆಗೆ ಚಳಿ ಗಾಳಿ ಕಾಡುತ್ತಿದೆ. ಬೆಂಗಳೂರು, ಮಲೆನಾಡು, ಕರಾವಳಿ ಹಾಗೂ ಉತ್ತರ ಕರ್ನಾಟಕದಲ್ಲೂ ದಾಖಲೆಯ ಚಳಿ ಉಂಟಾಗಿದೆ. ಇನ್ನೆರಡು ದಿನಗಳ ಕಾಲ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೀದರ್, ವಿಜಯಪುರ, ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಚಳಿಯು ಹೆಚ್ಚಾಗಿ ಸಾಮಾನ್ಯಕ್ಕಿಂತ 3 ರಿಂದ 5 ಡಿಗ್ರಿ ಸೆಲ್ಸಿಯಸ್ ಕಡಿಮೆ ದಾಖಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಚಳಿಯು ಸಹಜ ತಾಪಮಾನಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ. ಆದರೆ, ಇಂದು ಮಂಗಳೂರು (31 ಡಿಗ್ರಿ ಸೆಲ್ಸಿಯಸ್) ಕಾರವಾರದಲ್ಲಿ 33.2 ಡಿಗ್ರಿ ತಾಪಮಾನ ದಾಖಲಿದೆ.
At 0530 hrs IST dense fog at isolated pockets is reported over Uttar Pradesh and shallow to moderate fog is reported at isolated pockets over Delhi, east Bihar, east Rajasthan, Madhya Pradesh, Tripura and south Interior Karnataka.
— India Meteorological Department (@Indiametdept) December 30, 2021
ಆದರೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ. ಡಿಸೆಂಬರ್ 22, 2020 ರಂದು ಬೆಂಗಳೂರಿನಲ್ಲಿ ಕನಿಷ್ಠ ಕನಿಷ್ಠ 14.20 ದಾಖಲಾಗಿತ್ತು. ಹಾಸನ ಜಿಲ್ಲೆಯಲ್ಲಿ ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಡಿ.30ರ ತಾಪಮಾನ ವರದಿ: ರಾಜ್ಯದಲ್ಲಿ ಇನ್ನೂ ಎರಡು ದಿನ ವಿಪರೀತ ಚಳಿ ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 27 ಮತ್ತು ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಂತೂ ಮಂಜು ಕವಿದ ಚಳಿಗೆ ಜನರು ತತ್ತರಿಸಿದ್ದಾರೆ. ಬೆಂಗಳೂರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಹೆಚ್ಚಿನ ಪ್ರಮಾಣದಲ್ಲಿ ತಾಪಮಾನ ತಗ್ಗಿಲ್ಲ ಹಾಗೂ ಮೈ ನಡುಗುವಷ್ಟು ಚಳಿ ಉಂಟಾಗಿಲ್ಲ, ಚೆನ್ನಾಗಿ ಬಿಸಿಲು ಜೊತೆಗೆ ಗಾಳಿ ಬೀಸುತ್ತಿದೆ.

ಕರ್ನಾಟಕದಲ್ಲಿ ದಾಖಲೆಯ ಚಳಿ
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇನ್ನೆರಡು ದಿನ ಚಳಿ ಹೆಚ್ಚಾಗಲಿದ್ದು, ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಮೈಸೂರು, ಉತ್ತರ ಕರ್ನಾಟಕದಲ್ಲಿ ಜನವರಿ 1ರ ಬಳಿಕ ಕರ್ನಾಟಕದಲ್ಲಿ ಶೀತ ಗಾಳಿ ಕಡಿಮೆಯಾಗುವ ಸಾಧ್ಯತೆಯಿದೆ.ಉತ್ತರ ಕರ್ನಾಟಕ ಭಾಗದಲ್ಲಿ ಬೆಳಗ್ಗೆ ಸುಮಾರು 9 ಗಂಟೆವರೆಗೂ ದಟ್ಟವಾದ ಮಂಜು ಆವರಿಸಿ ಮಲೆನಾಡಿನ ಅನುಭವ ನೀಡುತ್ತಿದೆ. ಬಳ್ಳಾರಿ, ಬಾಗಲಕೋಟೆ, ವಿಜಯಪುರ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಆವರಿಸುತ್ತಿರುವ ಮಂಜಿನಿಂದ ರೈತರು ಆತಂಕಕ್ಕೆ ಒಳಗಾಗಿದ್ದು, ಬೆಳೆ ಹಾಳಾಗುವ ಭಯದಲ್ಲಿದ್ದಾರೆ. ಮಧ್ಯಾಹ್ನದ ನಂತರ ಎಂದಿನಂತೆ ಸೂರ್ಯದೇವ ಅಬ್ಬರಿಸಲಿದ್ದಾನೆ.

ರಾಜ್ಯದ ನಗರಗಳ ಹವಾಮಾನ ವರದಿ ಹೀಗಿದೆ
ರಾಜ್ಯದ ನಗರಗಳ ಹವಾಮಾನ ವರದಿ ಹೀಗಿದೆ: ಬೆಂಗಳೂರು 27-17, ಮೈಸೂರು 29.-17, ಚಾಮರಾಜನಗರ 29-17, ರಾಮನಗರ 28-17, ಮಂಡ್ಯ 29-17, ಬೆಂಗಳೂರು ಗ್ರಾಮಾಂತರ 27-17, ಚಿಕ್ಕಬಳ್ಳಾಪುರ 26-14, ಕೋಲಾರ 26-16, ಹಾಸನ 28-16, ಚಿಕ್ಕಮಗಳೂರು 28-15, ದಾವಣಗೆರೆ 26-21, ಶಿವಮೊಗ್ಗ 30-18, ಕೊಡಗು 29-15, ತುಮಕೂರು 28-17 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಡುಪಿ 32-25, ಮಂಗಳೂರು 33-23, ಉತ್ತರ ಕನ್ನಡ 32-18, ಧಾರವಾಡ 30-17, ಹಾವೇರಿ 31-18, ಹುಬ್ಬಳ್ಳಿ 31-17, ಬೆಳಗಾವಿ 29-17, ಗದಗ 29-17, ಕೊಪ್ಪಳ 29-18, ವಿಜಯಪುರ 29-17, ಬಾಗಲಕೋಟ 30-17, ಕಲಬುರಗಿ 30-17, ಬೀದರ್ 26-15, ಯಾದಗಿರಿ 30-18, ರಾಯಚೂರ 30-18, ಬಳ್ಳಾರಿ 29-18 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಭಾರತದೆಲ್ಲೆಡೆ ಚಳಿ
ಪಂಜಾಬ್, ಹರ್ಯಾಣ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಮಂಜು ಕವಿದ ವಾತಾವರಣ ಮುಂದುವರೆಯಲಿದ್ದು, ಇನ್ನೂ ಐದು ದಿನಗಳ ಕಾಲ ಚಳಿ ಗಾಳಿ ಹೊಡೆತಕ್ಕೆ ಜನರು ಮೈಯೊಡ್ಡಬೇಕಾಗತ್ತದೆ. ಕಣಿವೆ ರಾಜ್ಯದಲ್ಲಿ ಚಳಿ ಬಾಧಿಸುತ್ತಿದ್ದು, ಶ್ರೀನಗರದಲ್ಲಿ ಇಂದು ಮೈನಸ್ 4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದೆಹಲಿಯಲ್ಲಿ ಹೊಂಜು, ಮಂಜು ಕವಿದ ವಾತಾವರಣದಿಂದ ಸಂಚಾರ ಕಷ್ಟವಾಗಿದೆ. ಬೆಂಗಳೂರು ಹಾಗೂ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇದೇ ಪರಿಸ್ಥಿತಿ ಮುಂಜಾನೆ ವೇಳೆ ಕಾಣಿಸಲಿದೆ.

ಉತ್ತರ ಕರ್ನಾಟಕದಲ್ಲೂ ಚಳಿ ವಿಪರೀತ
ಕರ್ನಾಟಕದಲ್ಲಿ ಮೈ ನಡುಗುವ ಚಳಿ ಕರ್ನಾಟಕದಲ್ಲಿ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊಡಗು, ಶಿವಮೊಗ್ಗ, ಬೆಂಗಳೂರು, ಮೈಸೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ ಜಿಲ್ಲೆಗಳಲ್ಲಿ ಚಳಿ ವಿಪರೀತ ಹೆಚ್ಚಾಗಿದೆ. ಸದಾ ಬಿಸಿಲಿನಿಂದ ಕೂಡಿರುವ ಉತ್ತರ ಕರ್ನಾಟಕದಲ್ಲೂ ಚಳಿ ವಿಪರೀತವಾಗಿದೆ. ಉತ್ತರ ಕರ್ನಾಟಕದ ಧಾರವಾಡ, ಹುಬ್ಬಳ್ಳಿ, ಬೀದರ್, ಕಲಬುರ್ಗಿ, ರಾಯಚೂರು, ಕೊಪ್ಪಳ, ವಿಜಯಪುರ, ಬಾಗಲಕೋಟೆಯಲ್ಲಿ ಇನ್ನೂ 2 ದಿನ ಚಳಿ ಹೆಚ್ಚಾಗಲಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ












Click it and Unblock the Notifications