Inforgraphics: ಮಾ.22ರಂದು ರಾಜ್ಯ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ
ಬೆಂಗಳೂರು, ಮಾರ್ಚ್ 22: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿದ ಹಲವೆಡೆ ಸಾಧಾರಣ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಕಾಲ ಮಳೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಸೇರಿದಂತೆ ಒಂದೆರೆಡು ಕಡೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಒಂದೆರೆಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಾರ್ಚ್ 24ರವರೆಗೂ ಮಳೆ ಮುಂದುವರಿಕೆ:
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಹಲವೆಡೆ ಗುಡುಗು ಸಹಿತ ಮಳೆ ಆಗಿದೆ. ಬೆಂಗಳೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗರಿಷ್ಠ ಮತ್ತು ಕನಿಷ್ಠ ತಾಪಮಾನ ಎಷ್ಟಿದೆ?
ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 39.60 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್ ಆಗಿದೆ. ಅತಿಹೆಚ್ಚಿನ ಉಷ್ಣಾಂಶವು ಕಲಬುರಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಗರಿಷ್ಠ ಉಷ್ಣಾಂಶ 39.60 ಡಿಗ್ರಿ ಸೆಲ್ಸಿಯಸ್ ಆಗಿದೆ. ಅದೇ ರೀತಿ ಕನಿಷ್ಠ ಉಷ್ಣಾಂಶವು ರಾಜ್ಯದ ಸಮತಟ್ಟು ಪ್ರದೇಶದಲ್ಲಿರುವ ಜಿಲ್ಲೆ ದಾವಣಗೆರೆಯಲ್ಲಿ ದಾಖಲಾಗಿದೆ. ಈ ಜಿಲ್ಲೆಯಲ್ಲಿ ಕನಿಷ್ಠ ಉಷ್ಣಾಂಶವು 15.00 ಡಿಗ್ರಿ ಸೆಲ್ಸಿಯಸ್ ಆಗಿದೆ.

ರಾಜ್ಯದ ಪ್ರಮುಖ ನಗರಗಳಲ್ಲಿ ತಾಪಮಾನ:
ಬೆಂಗಳೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 20ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 13 ಕಿ.ಮೀ ಆಗಿದೆ. ಬಾಗಲಕೋಟೆ 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 34ರಷ್ಟು ತೇವಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 74ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 54ರಷ್ಟು ತೇವಾಂಶ, ಇದೆ. ಮೈಸೂರು 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 64ರಷ್ಟು ತೇವಾಂಶ, ಬಳ್ಳಾರಿಯಲ್ಲಿ 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 42ರಷ್ಟು ತೇವಾಂಶ ದಾಖಲಾಗಿದೆ.

ರಾಯಚೂರು 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 42ರಷ್ಟು ತೇವಾಂಶ, ಚಿತ್ರದುರ್ಗ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 80ರಷ್ಟು ತೇವಾಂಶ, ಕಲಬುರಗಿ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 38ರಷ್ಟು ತೇವಾಂಶ, ಚಿಕ್ಕಮಗಳೂರು 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 57ರಷ್ಟು ತೇವಾಂಶ ದಾಖಲಾಗಿದೆ.
Recommended Video
-
ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವ ಮೊದಲು ತಿಳಿದುಕೊಳ್ಳಬೇಕಾದ ವಿಷಯಗಳು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್












Click it and Unblock the Notifications