ಕರ್ನಾಟಕ ಹವಾಮಾನ ವರದಿ: ಮೇ 6ರವರೆಗೂ ಹಲವು ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು, ಮೇ 03: ಚಂಡಮಾರುತದಿಂದಾಗಿ ರಾಜ್ಯದಲ್ಲಿ ಮೇ 6ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೊನ್ನಾವರ, ಸಿದ್ದಾಪುರ, ತಾಳಗುಪ್ಪ, ಹುಂಚದಕಟ್ಟೆ, ಬೆಳ್ತಂಗಡಿ, ದಕ್ಷಿಣ ಕನ್ನಡ, ಹಾವೇರಿ, ಮೂಡಬಿದಿರೆ, ಪುತ್ತೂರು, ಬೆಳಗಾವಿ, ಹುಮ್ನಾಬಾದ್, ಬೇವೂರು, ಸಾಗರ, ಸೊರಬದಲ್ಲಿ ಮಳೆಯಾಗಿದೆ.
7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿನ್ಯಾಸ: ಭರತ್ ಎಚ್.ಸಿ
ಬೆಂಗಳೂರು ಹವಾಮಾನ
ನಗರದಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಮುಂದಿನ ಕೆಲವು ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 32.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್ಎಎಲ್ನಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನು ಕೆಐಎಎಲ್ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಎಲ್ಲೆಲ್ಲಿ ಮಳೆಯಾಗಲಿದೆ
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರದಲ್ಲಿ ಮಳೆಯಾಗಲಿದೆ. ಕಲಬುರಗಿಯಲ್ಲಿ 39.3 ಡಿಗ್ರಿ ಸೆಲ್ಸಿಯಸ್ನಷ್ಟು ಗರಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ.
ಎಲ್ಲೆಲ್ಲಿ ಮಳೆಯಾಗಿದೆ
ಹೊನ್ನಾವರ, ಸಿದ್ದಾಪುರ, ತಾಳಗುಪ್ಪ, ಹುಂಚದಕಟ್ಟೆ, ಬೆಳ್ತಂಗಡಿ, ದಕ್ಷಿಣ ಕನ್ನಡ, ಹಾವೇರಿ, ಮೂಡಬಿದಿರೆ, ಪುತ್ತೂರು, ಬೆಳಗಾವಿ, ಹುಮ್ನಾಬಾದ್, ಬೇವೂರು, ಸಾಗರ, ಸೊರಬದಲ್ಲಿ ಮಳೆಯಾಗಿದೆ.
Recommended Video
ಎಲ್ಲೆಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ
7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.