ಕೆಮ್ಮು, ಜ್ವರ, ತಲೆನೋವು ಕಾಣಿಸಿಕೊಂಡಿತಾ ಮುಂದೇನು ಕಥೆ: ಇಲ್ಲಿದೆ ಮಾಹಿತಿ
ಬೆಂಗಳೂರು, ಜುಲೈ.09: ಕೊರೊನಾವೈರಸ್ ಅನ್ನೋ ಹೆಸರು ಕೆಳಿದರೆ ಜನರು ಕನಸಿನಲ್ಲೂ ಬೆಚ್ಚಿ ಬೀಳುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತದಲ್ಲಿ ಈಗಾಗಲೇ ಬೇಸಿಗೆ ಕಳೆದು ಮಳೆಗಾಲ ಶುರುವಾಗಿದೆ. ಬಿಸಿಲಿನ ತಾಪದ ನಡುವೆಯೂ ವೈರಸ್ ಹಾವಳಿಗೆ ದೇಶವು ತತ್ತರಿಸಿ ಹೋಗಿದೆ.
Recommended Video
ಮಳೆಗಾಲದಲ್ಲಿ ಸಹಜವಾಗಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮೊದಲೇ ಸಾಂಕ್ರಾಮಿಕ ರೋಗತಜ್ಞರು ಹಾಗೂ ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಈ ಎಚ್ಚರಿಕೆ ಸಂದೇಶವೇ ಜನರಲ್ಲಿ ಭೀತಿ ಹೆಚ್ಚುವಂತೆ ಮಾಡಿದೆ.
ಭಾರತದಲ್ಲಿ ಈಗಾಗಲೇ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು 7,71,833ಕ್ಕೆ ಏರಿಕೆಯಾಗಿದ್ದು, ಮಹಾಮಾರಿಗೆ ದೇಶದಲ್ಲಿ 21,174ಕ್ಕೂ ಹೆಚ್ಚು ಮಂದಿ ಪ್ರಾಣ ಬಿಟ್ಟಿದ್ದಾರೆ. ಇದುವರೆಗೂ 4,77,685ಕ್ಕೂ ಅಧಿಕ ಸೋಂಕಿತರು ಗುಣಮುಖರಾಗಿದ್ದರೆ, 2,72,974 ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.
ಕೊವಿಡ್-19 ಲಕ್ಷಣ ಕಂಡು ಬಂದಲ್ಲಿ ಮಾಡುವುದು ಏನು?
ಮಳೆಗಾಲದಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚುತ್ತದೆ ಎನ್ನುವ ಭೀತಿಯನ್ನು ಜನರು ಆತಂಕ ಪಡುವ ಅಗತ್ಯವಿಲ್ಲ. ಸಾಮಾನ್ಯವಾಗಿ ಮಳೆಗಾಲದಲ್ಲಿ ಕಾಣಿಸಿಕೊಳ್ಳುವ ಜ್ವರ, ಕೆಮ್ಮು, ಶೀತಜ್ವರ, ಹಾಗೂ ತಲೆನೋವಿನ ಲಕ್ಷಣಗಳೆಲ್ಲ ಕೊರೊನಾವೈರಸ್ ಆಗಿರುವುದಿಲ್ಲ. ಒಂದು ವೇಳೆ ನಿಮ್ಮಲ್ಲೂ ಈ ರೀತಿಯ ಲಕ್ಷಣಗಳು ಕಂಡು ಬಂದಲ್ಲಿ ಏನು ಮಾಡಬಹುದು. ಸರ್ಕಾರವು ಅದಕ್ಕಾಗಿ ಯಾವ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಿದೆ ಎನ್ನುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಚಿತ್ರದಲ್ಲಿ ವಿವರಿಸಲಾಗಿದೆ.













Click it and Unblock the Notifications