ಅಗ್ನಿಪಥ ನೇಮಕಾತಿ: ಭಾರತೀಯ ವಾಯುಸೇನೆ ಸೇರಲು 10 ಸಾವಿರ ಮಹಿಳೆಯರು ನೋಂದಣಿ
ನವದೆಹಲಿ, ಜುಲೈ 4: ಭಾರತೀಯ ನೌಕಾಪಡೆಯು ಜುಲೈ 1 ರಂದು ಅಗ್ನಿಪಥ್ ನೇಮಕಾತಿ ಯೋಜನೆಗಾಗಿ ನೋಂದಣಿಯನ್ನು ಪ್ರಾರಂಭಿಸಿತು. ಪೋರ್ಟಲ್ ತೆರೆದ ಕೆಲವೇ ದಿನಗಳಲ್ಲಿ ಸುಮಾರು 10,000 ಮಹಿಳೆಯರು ಈ ಪ್ರಕ್ರಿಯೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಭಾರತೀಯ ನೌಕಾಪಡೆಯು ಜುಲೈ 1 ರಂದು ಅಗ್ನಿಪಥ್ ನೇಮಕಾತಿ ಯೋಜನೆಯಡಿ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದೆ. ನೋಂದಣಿಯ ನಂತರ, ಭಾರತೀಯ ನೌಕಾಪಡೆಯು ಜುಲೈ 15 ರಿಂದ ಜುಲೈ 30 ರವರೆಗೆ ನೇಮಕಾತಿಗಾಗಿ ಆನ್ಲೈನ್ ಅರ್ಜಿ ಪ್ರಕ್ರಿಯೆಯನ್ನು ತೆರೆಯುತ್ತದೆ.
ಇದೇ ಮೊದಲ ಬಾರಿಗೆ, ಭಾರತೀಯ ನೌಕಾಪಡೆಯು ಮಹಿಳೆಯರನ್ನು ನಾವಿಕರಾಗಿ ನೇಮಕ ಮಾಡಿಕೊಳ್ಳಲು ಅನುಮತಿ ನೀಡಿದ್ದು, ಕಾರ್ಯಾಚರಣೆಯ ಅಗತ್ಯತೆಗಳಿಗೆ ಅನುಗುಣವಾಗಿ ಯುದ್ಧನೌಕೆಗಳಲ್ಲಿ ನಿಯೋಜಿಸಲಾಗುವುದು. ಆದಾಗ್ಯೂ, ನೌಕಾಪಡೆಯು 2022 ರಲ್ಲಿ ಸೇರ್ಪಡೆಗೊಳ್ಳಲಿರುವ 3000 ನೌಕಾ 'ಅಗ್ನಿವೀರ್'ಗಳಲ್ಲಿ ಮಹಿಳೆಯರ ಅಂತಿಮ ಸಂಖ್ಯೆಯನ್ನು ಇನ್ನೂ ನಿರ್ಧರಿಸಿಲ್ಲ.
"ಭಾನುವಾರದವರೆಗೆ ಸುಮಾರು 10,000 ಮಹಿಳಾ ಅಭ್ಯರ್ಥಿಗಳು ನೌಕಾಪಡೆಗೆ ಸೇರಲು ನೋಂದಾಯಿಸಿಕೊಂಡಿದ್ದಾರೆ" ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.
ನೌಕಾಪಡೆಯು ನವೆಂಬರ್ 21 ರಂದು ಭಾರತೀಯ ನೌಕಾಪಡೆಯ ನಾವಿಕರ ಪ್ರಮುಖ ಮೂಲ ತರಬೇತಿ ಸಂಸ್ಥೆಯಾದ ಐಎನ್ಎಸ್ (INS) ಚಿಲ್ಕಾದಲ್ಲಿ ವ್ಯವಸ್ಥೆಗಳನ್ನು ಮಾಡುತ್ತಿದೆ. ಮಹಿಳಾ ನಾವಿಕರಿಗೆ ತರಬೇತಿ ನೀಡಲು ಸಂಸ್ಥೆಯು ಸೌಲಭ್ಯಗಳನ್ನು ಸಹ ಹೊಂದಿದೆ.

ನೌಕಾಪಡೆಯಲ್ಲಿದ್ದಾರೆ ಮಹಿಳಾ ಅಧಿಕಾರಿಗಳು
"ನೌಕಾಪಡೆಯಲ್ಲಿ ಅಗ್ನಿಪಥ್ ಯೋಜನೆಯಲ್ಲಿ ಸಮಾನತೆ ನೀಡಲಾಗುತ್ತದೆ. 30 ಮಹಿಳಾ ಅಧಿಕಾರಿಗಳು ಮುಂಚೂಣಿಯ ಯುದ್ಧನೌಕೆಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಮಹಿಳಾ ನಾವಿಕರನ್ನು ನೇಮಿಸಿಕೊಳ್ಳುವ ಸಮಯ ಬಂದಿದೆ ಮತ್ತು ಮಹಿಳೆಯರನ್ನು ಒಳಗೊಂಡಂತೆ ಯಾರು ಸಮುದ್ರಕ್ಕೆ ಹೋಗುತ್ತಾರೆ ಎಂದು ಎಲ್ಲಾ ಕೆಲಸ ಕಾರ್ಯಗಳನ್ನು ನಾವು ನಿರ್ಧರಿಸಿದ್ದೇವೆ" ಎಂದು ನೌಕಾಪಡೆಯ ಅಧಿಕಾರಿಗಳು ಹೇಳಿದ್ದಾರೆ.
ಸಶಸ್ತ್ರ ಪಡೆಗಳು 1990 ರ ದಶಕದಿಂದ 14 ಲಕ್ಷ ಬಲಿಷ್ಠ ಸೇನಾ ಪಡೆಗಳಿಗೆ ಕೇವಲ ಅಧಿಕಾರಿ ಶ್ರೇಣಿಯಲ್ಲಿ ಮಾತ್ರ ಮಹಿಳೆಯರನ್ನು ಸೇರಿಸಿಕೊಳ್ಳುತ್ತಿವೆ. ಆದರೆ 2019-20ರಲ್ಲಿ ಇದು ಬದಲಾಗಿದ್ದು ಭಾರತೀಯ ಸೇನೆಯು ಮೊದಲ ಬಾರಿಗೆ ಇತರ ಶ್ರೇಣಿಗಳಲ್ಲಿ ಮಹಿಳೆಯರನ್ನು ನೇಮಿಸಿಕೊಳ್ಳಲು ಪ್ರಾರಂಭಿಸಿದೆ. ಇದರ ಪರಿಣಾಮವಾಗಿ, 100 ಮಹಿಳಾ ಜವಾನರು ಪ್ರಸ್ತುತ ಮಿಲಿಟರಿ ಪೊಲೀಸ್ ಕಾರ್ಪ್ಸ್ (ಸಿಎಂಪಿ) ಆಗಿದ್ದಾರೆ.

ಜೂನ್ 14ರಂದು ಘೋಷಿಸಿದ್ದ ಅಗ್ನಿಪಥ ಯೋಜನೆ
ಜೂನ್ 14 ರಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಮೂರು ಸೇನಾಪಡೆಗಳ ಮುಖ್ಯಸ್ಥರ ಸಮ್ಮುಖದಲ್ಲಿ ಅಗ್ನಿಪಥ್ ಯೋಜನೆಯನ್ನು ಘೋಷಿಸಿದರು. 17.5 ವರ್ಷದಿಂದ 21 ವರ್ಷದೊಳಗಿನ ಯುವಕರು ಸಶಸ್ತ್ರ ಸೇವೆಗಳಿಗೆ ಸೇರಲು ಅವಕಾಶ ನೀಡಲಾಗಿತ್ತು. ನಾಲ್ಕು ವರ್ಷಗಳಿಗೆ ಮಾತ್ರ ಸೇವೆ ಮಾಡಲು ಅವಕಾಶವಿದ್ದು ನಂತರ ಇವರಲ್ಲಿ ಶೇಕಡಾ 25 ಸೈನಿಕರನ್ನು 15 ವರ್ಷಗಳವರೆಗೆ ಉಳಿಸಿಕೊಳ್ಳಲು ಅವಕಾಶ ಒದಗಿಸಲಾಗುತ್ತದೆ. ಆದರೆ ಯೋಜನೆ ವಿರೋಧಿಸಿ ಭಾರಿ ಪ್ರತಿಭಟನೆ ನಡೆಯುತ್ತಿದ್ದಂತೆ ವಯೋಮಿತಿಯನ್ನು 23 ವರ್ಷಗಳವರೆಗೆ ವಿಸ್ತರಿಸಿತು.

ಈ ವರ್ಷ 46 ಸಾವಿರ ಅಗ್ನಿವೀರರ ನೇಮಕ
ಹಲವಾರು ರಾಜ್ಯಗಳಲ್ಲಿ ಅಗ್ನಿಪಥ್ ಯೋಜನೆಯ ವಿರುದ್ಧ ಪ್ರತಿಭಟನೆಗಳು ನಡೆದಿವೆ ಮತ್ತು ಆತಂಕವನ್ನು ನಿವಾರಿಸಲು ಸರ್ಕಾರವು ಬೆಂಬಲ ಕ್ರಮಗಳನ್ನು ಘೋಷಿಸಿದೆ. ಜೂನ್ 14 ರಂದು ಕೇಂದ್ರ ಸಚಿವ ಸಂಪುಟವು ಅಗ್ನಿಪಥ್ ಯೋಜನೆಗೆ ಅನುಮೋದನೆ ನೀಡಿತ್ತು ಮತ್ತು ಈ ಯೋಜನೆಯಡಿ ಆಯ್ಕೆಯಾದ ಯುವಕರನ್ನು 'ಅಗ್ನಿವೀರರು' ಎಂದು ಕರೆಯಲಾಗುತ್ತದೆ.
ಈ ವರ್ಷ 46,000 ಅಗ್ನಿವೀರರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸರ್ಕಾರ ಘೋಷಿಸಿತ್ತು. ಭವಿಷ್ಯದ ಸವಾಲುಗಳನ್ನು ಎದುರಿಸಲು ಸಶಸ್ತ್ರ ಪಡೆಗಳು ಯುವ ಪಡೆಯನ್ನು ಹೊಂದಿರುತ್ತದೆ ಎಂದು ಅದು ಹೇಳಿದೆ.

2800 ಹುದ್ದೆಗಳಿಗೆ ಅಗ್ನಿವೀರರ ನೇಮಕಾತಿ
ಅಗ್ನಿಪಥ್ ಯೋಜನೆಯಡಿ 2800 ಅಗ್ನಿವೀರರನ್ನು ನೇಮಿಸಿಕೊಳ್ಳಲು ಭಾರತೀಯ ನೌಕಾಪಡೆ ಅರ್ಜಿ ಆಹ್ವಾನಿಸಿದೆ. ಜುಲೈ 1ರಿಂದ ನೊಂದಣಿ ಪ್ರಕ್ರಿಯೆ ಆರಂಭವಾಗಿದೆ. ಜುಲೈ 15ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಜುಲೈ 22ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಗಣಿತ ಮತ್ತು ಭೌತಶಾಸ್ತ್ರದೊಂದಿಗೆ 10+2 ಪರೀಕ್ಷೆಯಲ್ಲಿ ಅರ್ಹತೆ ಪಡೆದಿರಬೇಕು. ಎಂಎಚ್ಆರ್ ಡಿ (MHRD), ಭಾರತದ ಸರ್ಕಾರದಿಂದ ಗುರುತಿಸಲ್ಪಟ್ಟ ಶಾಲಾ ಶಿಕ್ಷಣ ಮಂಡಳಿಗಳಿಂದ ರಸಾಯನಶಾಸ್ತ್ರ / ಜೀವಶಾಸ್ತ್ರ / ಕಂಪ್ಯೂಟರ್ ಸೈನ್ಸ್ ಈ ವಿಷಯಗಳಲ್ಲಿ ಕನಿಷ್ಠ ಒಂದಾದರೂ ವಿಷಯವನ್ನು ಅಧ್ಯಯನ ಮಾಡಿರುವ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ joinindiannavy.gov.in. ವೆಬ್ಸೈಟ್ಗೆ ಭೇಟಿ ನೀಡಿ.
-
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ -
Jowar Price: ಕರ್ನಾಟಕದ ಮಾರುಕಟ್ಟೆಗಳಲ್ಲಿ ಜೋಳದ ದರ ಏರಿಳಿತ; ಇಲ್ಲಿದೆ ಜಿಲ್ಲಾವಾರು ಬೆಲೆ ಪಟ್ಟಿ -
Karnataka Rain: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ: ಐಎಂಡಿ ವರದಿ -
Zomato: ಬೆಂಗಳೂರು Vs ಚೆನ್ನೈ ಸಾಂಬಾರ್ ಎಂದ ಝೊಮ್ಯಾಟೊ; ನಮಗೆ ಸ್ವಿಗ್ಗಿ ಸಾಕು ಎಂದ ನೆಟ್ಟಿಗರು -
ವಾರ ಭವಿಷ್ಯ: ಈ ರಾಶಿಯ ಪ್ರೇಮಿಗಳು ಮತ್ತೆ ಒಂದಾಗುತ್ತಾರೆ! ಸೂರ್ಯನಿಗೆ ಅರ್ಘ್ಯದಿಂದ ಭಾಗ್ಯ ಬದಲಾವಣೆ -
SSLC ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡಿಂಗ್: ಸರ್ಕಾರದ ದಿಢೀರ್ ನಿರ್ಧಾರಕ್ಕೆ ಖಾಸಗಿ ಶಾಲೆಗಳ ತೀವ್ರ ವಿರೋಧ -
ರಾಜ್ಯದಲ್ಲಿ ತೃತೀಯ ಭಾಷೆ 'ಆಟಕ್ಕುಂಟು ಲೆಕ್ಕಕ್ಕಿಲ್ಲ', ಆದರೆ ಕೇಂದ್ರದಿಂದ ಕಡ್ಡಾಯದ ಹೊಸ ಆದೇಶ : ರಾಜೀವ ಹೆಗಡೆ ಬರಹ -
RCB Vs CSK ಮ್ಯಾಚ್ ನೋಡಲು ಬರೋಬ್ಬರಿ 1.46 ಲಕ್ಷ ಕಳೆದುಕೊಂಡ ಕಳೆದುಕೊಂಡ ಟೆಕ್ಕಿ, ಐಪಿಎಲ್ ಅಭಿಮಾನಿಗಳೇ ಹುಷಾರ್












Click it and Unblock the Notifications